Categories: ಕೋಲಾರ

ಕೇಂದ್ರ ಬಜೆಟ್ ಅಭಿವೃದ್ಧಿಯ ಪರವಾದ ಬಜೆಟ್ -ಯಲುವಗುಳಿ ನಾಗರಾಜ್

ಕೋಲಾರ: ದೇಶದಲ್ಲಿ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಹಣಕಾಸು ಸಚಿವೆ ನಿರ್ಮಾಲಾ ಸೀತಾರಾಮನ್ ಅವರ ಬಜೆಟ್‌ನಲ್ಲಿ ಬಡವರು, ಮಹಿಳೆಯರು, ಯುವಕರು ಹಾಗೂ ನಾಡಿನ ಅನ್ನದಾತನ ಸಬಲೀಕರಣದೊಂದಿಗೆ ವಿಕಸಿತ ಭಾರತದ ಪರಿಕಲ್ಪನೆಗೆ ಪೂರಕವಾದ ಬಜೆಟ್‌ ಆಗಿದೆ ಎಂದು ಜೆಡಿಎಸ್‌ ಎಸ್ಸಿ ಘಟಕದ ಜಿಲ್ಲಾ ಉಪಾಧ್ಯಕ್ಷ ಯಲುವಗುಳಿ ನಾಗರಾಜ್ ಸಂತಸ ವ್ಯಕ್ತಪಡಿಸಿದರು

ಕೇಂದ್ರ ಬಜೆಟ್ ಕುರಿತು ಪತ್ರಕಾ ಹೇಳಿಕೆ ನೀಡಿದ ಅವರು ಬಜೆಟ್‌ನಲ್ಲಿ ದೇಶದ ಸರ್ವಾಂಗೀಣ ಅಭಿವೃದ್ಧಿಯೊಂದಿಗೆ ವಿಕಸಿತ ಭಾರತದ ಗುರಿಯನ್ನು ಸಾಧಿಸಲು ಪೂರಕವಾದ ಅಂಶಗಳಿಗೆ ಒತ್ತು ನೀಡಲಾಗಿದೆ ಈ ಸಾಲಿನ ಬಜೆಟ್‌ನಲ್ಲಿ ಉದ್ಯೋಗ ಸೃಷ್ಟಿಗೆ ಹೆಚ್ಚಿನ ಒತ್ತು ನೀಡಲಾಗಿದ್ದು, ೪ ಕೋಟಿ ಯುವಕರಿಗೆ ಮುಂದಿನ ಐದು ವರ್ಷಗಳಲ್ಲಿ ಉದ್ಯೋಗ ಒದಗಿಸುವ ಭರವಸೆಯನ್ನು ನೀಡಲಾಗಿದೆ ಕೃಷಿ ಉತ್ಪಾದನೆ ಹೆಚ್ಚಳ, ಉದ್ಯೋಗ ಸೃಷ್ಟಿ, ಮಾನವ ಸಂಪನ್ಮೂಲಗಳ ಅಭಿವೃದ್ಧಿ, ಉತ್ಪಾದನಾ ಕ್ಷೇತ್ರದ ಅಭಿವೃದ್ಧಿ, ಸಾಮಾಜಿಕ ನ್ಯಾಯ, ನಗರಾಭಿವೃದ್ಧಿ, ಇಂಧನ ಭದ್ರತೆ, ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಸುಧಾರಣೆ ಆವಿಷ್ಕಾರ ಸಂಶೋಧನೆ ಅಭಿವೃದ್ಧಿ, ಮುಂದಿನ ಪೀಳಿಗೆಗೆ ಆದ್ಯತೆ, ಎಂಎಸ್‌ಎಂಇ ಗಳಿಗೆ ಒತ್ತು ಸೇರಿದಂತೆ ೯ ವಲಯಗಳ ಅಭಿವೃದ್ಧಿಗೆ ಬಜೆಟ್‌ನಲ್ಲಿ ಯೋಜನೆಗಳಿಗೆ ಅಧ್ಯತೆ ನೀಡಲಾಗಿದೆ ಎಂದು ತಿಳಿಸಿದರು.

ದೇಶದ ಬೆನ್ನೆಲುಬಾದ ಅನ್ನದಾತನ ನೆರವಿಗಾಗಿ ಬಜೆಟ್‌ನಲ್ಲಿ ಹಲವು ಕಲ್ಯಾಣ ಯೋಜನೆ ಜಾರಿಯ ಭರವಸೆ ನೀಡಲಾಗಿದ್ದು, ಕೃಷಿ ಕ್ಷೇತ್ರಕ್ಕೆ ೧.೫೨ ಲಕ್ಷ ಕೋಟಿ ರೂ.ಗಳನ್ನು ಮೀಸಲಿರಿಸಿ ಕೃಷಿಯ ಸರ್ವಾಂಗೀಣ ಅಭಿವೃದ್ಧಿಯ ಬದ್ಧತೆಯನ್ನು ಬಜೆಟ್‌ನಲ್ಲಿ ವ್ಯಕ್ತಪಡಿಸಲಾಗಿದೆ ಮೂರು ಕೌಶಲ್ಯ ಯೋಜನೆಗಳನ್ನು ಪ್ರಕಟಿಸಲಾಗಿದ್ದು, ಶಿಕ್ಷಣ ಮತ್ತು ಆರೋಗ್ಯ ವಸತಿ ಕ್ಷೇತ್ರಕ್ಕೂ ಬಜೆಟ್‌ನಲ್ಲಿ ಒತ್ತು ನೀಡಲಾಗಿದ್ದು, ಮುಂದಿನ ಐದು ವರ್ಷಗಳಲ್ಲಿ ಪ್ರಧಾನ ಮಂತ್ರಿ ಅವಾಜ್ ಯೋಜನೆಯಡಿ ೩ ಕೋಟಿ ಮನೆ ನಿರ್ಮಾಣದ ಪ್ರಸ್ತಾವವನ್ನು ಬಜೆಟ್ ನಲ್ಲಿ ಇದ್ದು ಇದರ ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ ಎಂದು ಯಲುವಗುಳಿ ನಾಗರಾಜ್ ತಿಳಿಸಿದರು.

Ramesh Babu

Journalist

Recent Posts

ಲೀಸ್ ಜಮೀನು ವಿವಾದ: ಲೀಸ್ ಪಡೆದ ರೈತನ ಮೇಲೆ ಪಿಸ್ತೂಲ್‌ನಿಂದ ಹಲ್ಲೆ; ಗಾಳಿಯಲ್ಲಿ 7–8 ಸುತ್ತು ಗುಂಡು ಹಾರಿಸಿ ಬೆದರಿಕೆ ಆರೋಪ: ದೂರು ದಾಖಲು

ದೊಡ್ಡಬಳ್ಳಾಪುರ: ಲೀಸ್‌ಗೆ ಪಡೆದಿದ್ದ ಜಮೀನಿನ ವಿಚಾರವಾಗಿ ರೈತನೊಬ್ಬರ ಮೇಲೆ ಪಿಸ್ತೂಲ್‌ನಿಂದ ಹಲ್ಲೆ ನಡೆಸಿ, ಗಾಳಿಯಲ್ಲಿ ಹಲವು ಸುತ್ತು ಗುಂಡು ಹಾರಿಸಿ…

27 minutes ago

ಬಸ್-ನೀರಿನ ಟ್ಯಾಂಕರ್ ಟ್ರ್ಯಾಕ್ಟರ್ ನಡುವೆ ಅಪಘಾತ: ಫುಲ್ ಟ್ರಾಫಿಕ್ ಜಾಮ್: ವಾಹನ ಸವಾರರ ಪರದಾಟ

ದೊಡ್ಡಬಳ್ಳಾಪುರ ತಾಲೂಕಿನ ಪಾಲನಜೋಗಹಳ್ಳಿ ಸಮೀಪ ಹಿಂದೂಪುರ–ಯಲಹಂಕ ರಾಜ್ಯ ಹೆದ್ದಾರಿಯಲ್ಲಿ ಬಸ್ ಹಾಗೂ ನೀರಿನ ಟ್ಯಾಂಕರ್ ಹೊತ್ತ ಟ್ರ್ಯಾಕ್ಟರ್ ನಡುವೆ ಸಂಭವಿಸಿದ…

13 hours ago

ಶಾಸಕ ಪ್ರದೀಪ್ ಈಶ್ವರ್ ಕಾರಿಗೆ ಮುತ್ತಿಗೆ; ಚಪ್ಪಲಿ ಎಸೆತ, ಉದ್ವಿಗ್ನ ವಾತಾವರಣ

ಚಿಕ್ಕಬಳ್ಳಾಪುರ: ಶಾಸಕ ಪ್ರದೀಪ್ ಈಶ್ವರ್ ಅವರ ಕಾರಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಬೆಂಬಲಿಗರು ಮುತ್ತಿಗೆ ಹಾಕಿದ ಘಟನೆ ಶನಿವಾರ…

17 hours ago

ಹೆಚ್‌ಡಿಕೆಗೆ ಶಾಸಕ ಪ್ರದೀಪ್ ಈಶ್ವರ್ ಟಾಂಗ್: “32 ಎಕರೆ ಆಸ್ತಿ ದಾಖಲೆ ನನ್ನ ಮುಖದ ಮೇಲೆ ಬಿಸಾಕಿ”

ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ…

18 hours ago

ಕೆಂಪೇಗೌಡರ ಹೆಸರನ್ನು ಶಾಶ್ವತಗೊಳಿಸಲು ಹೊಸ ಯೋಜನೆಗಳು: ಟೌನ್ ಪ್ಲಾನಿಂಗ್, ಕಾಲೇಜು, ಅಭಿವೃದ್ಧಿ ಕೇಂದ್ರ ಸ್ಥಾಪನೆ – ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು: ನಾಡಪ್ರಭು ಕೆಂಪೇಗೌಡರ 517ನೇ ಜಯಂತಿಯ ಅಂಗವಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

20 hours ago

517ನೇ ಕೆಂಪೇಗೌಡ ಜಯಂತಿ: ವಿಮಾನ ನಿಲ್ದಾಣದಲ್ಲಿ ನಾಡಪ್ರಭುವಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪುಷ್ಪನಮನ

ದೇವನಹಳ್ಳಿ: 517ನೇ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಶನಿವಾರ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ…

22 hours ago