Categories: ಕೋಲಾರ

ಕೇಂದ್ರ ಬಜೆಟ್ ಅಭಿವೃದ್ಧಿಯ ಪರವಾದ ಬಜೆಟ್ -ಯಲುವಗುಳಿ ನಾಗರಾಜ್

ಕೋಲಾರ: ದೇಶದಲ್ಲಿ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಹಣಕಾಸು ಸಚಿವೆ ನಿರ್ಮಾಲಾ ಸೀತಾರಾಮನ್ ಅವರ ಬಜೆಟ್‌ನಲ್ಲಿ ಬಡವರು, ಮಹಿಳೆಯರು, ಯುವಕರು ಹಾಗೂ ನಾಡಿನ ಅನ್ನದಾತನ ಸಬಲೀಕರಣದೊಂದಿಗೆ ವಿಕಸಿತ ಭಾರತದ ಪರಿಕಲ್ಪನೆಗೆ ಪೂರಕವಾದ ಬಜೆಟ್‌ ಆಗಿದೆ ಎಂದು ಜೆಡಿಎಸ್‌ ಎಸ್ಸಿ ಘಟಕದ ಜಿಲ್ಲಾ ಉಪಾಧ್ಯಕ್ಷ ಯಲುವಗುಳಿ ನಾಗರಾಜ್ ಸಂತಸ ವ್ಯಕ್ತಪಡಿಸಿದರು

ಕೇಂದ್ರ ಬಜೆಟ್ ಕುರಿತು ಪತ್ರಕಾ ಹೇಳಿಕೆ ನೀಡಿದ ಅವರು ಬಜೆಟ್‌ನಲ್ಲಿ ದೇಶದ ಸರ್ವಾಂಗೀಣ ಅಭಿವೃದ್ಧಿಯೊಂದಿಗೆ ವಿಕಸಿತ ಭಾರತದ ಗುರಿಯನ್ನು ಸಾಧಿಸಲು ಪೂರಕವಾದ ಅಂಶಗಳಿಗೆ ಒತ್ತು ನೀಡಲಾಗಿದೆ ಈ ಸಾಲಿನ ಬಜೆಟ್‌ನಲ್ಲಿ ಉದ್ಯೋಗ ಸೃಷ್ಟಿಗೆ ಹೆಚ್ಚಿನ ಒತ್ತು ನೀಡಲಾಗಿದ್ದು, ೪ ಕೋಟಿ ಯುವಕರಿಗೆ ಮುಂದಿನ ಐದು ವರ್ಷಗಳಲ್ಲಿ ಉದ್ಯೋಗ ಒದಗಿಸುವ ಭರವಸೆಯನ್ನು ನೀಡಲಾಗಿದೆ ಕೃಷಿ ಉತ್ಪಾದನೆ ಹೆಚ್ಚಳ, ಉದ್ಯೋಗ ಸೃಷ್ಟಿ, ಮಾನವ ಸಂಪನ್ಮೂಲಗಳ ಅಭಿವೃದ್ಧಿ, ಉತ್ಪಾದನಾ ಕ್ಷೇತ್ರದ ಅಭಿವೃದ್ಧಿ, ಸಾಮಾಜಿಕ ನ್ಯಾಯ, ನಗರಾಭಿವೃದ್ಧಿ, ಇಂಧನ ಭದ್ರತೆ, ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಸುಧಾರಣೆ ಆವಿಷ್ಕಾರ ಸಂಶೋಧನೆ ಅಭಿವೃದ್ಧಿ, ಮುಂದಿನ ಪೀಳಿಗೆಗೆ ಆದ್ಯತೆ, ಎಂಎಸ್‌ಎಂಇ ಗಳಿಗೆ ಒತ್ತು ಸೇರಿದಂತೆ ೯ ವಲಯಗಳ ಅಭಿವೃದ್ಧಿಗೆ ಬಜೆಟ್‌ನಲ್ಲಿ ಯೋಜನೆಗಳಿಗೆ ಅಧ್ಯತೆ ನೀಡಲಾಗಿದೆ ಎಂದು ತಿಳಿಸಿದರು.

ದೇಶದ ಬೆನ್ನೆಲುಬಾದ ಅನ್ನದಾತನ ನೆರವಿಗಾಗಿ ಬಜೆಟ್‌ನಲ್ಲಿ ಹಲವು ಕಲ್ಯಾಣ ಯೋಜನೆ ಜಾರಿಯ ಭರವಸೆ ನೀಡಲಾಗಿದ್ದು, ಕೃಷಿ ಕ್ಷೇತ್ರಕ್ಕೆ ೧.೫೨ ಲಕ್ಷ ಕೋಟಿ ರೂ.ಗಳನ್ನು ಮೀಸಲಿರಿಸಿ ಕೃಷಿಯ ಸರ್ವಾಂಗೀಣ ಅಭಿವೃದ್ಧಿಯ ಬದ್ಧತೆಯನ್ನು ಬಜೆಟ್‌ನಲ್ಲಿ ವ್ಯಕ್ತಪಡಿಸಲಾಗಿದೆ ಮೂರು ಕೌಶಲ್ಯ ಯೋಜನೆಗಳನ್ನು ಪ್ರಕಟಿಸಲಾಗಿದ್ದು, ಶಿಕ್ಷಣ ಮತ್ತು ಆರೋಗ್ಯ ವಸತಿ ಕ್ಷೇತ್ರಕ್ಕೂ ಬಜೆಟ್‌ನಲ್ಲಿ ಒತ್ತು ನೀಡಲಾಗಿದ್ದು, ಮುಂದಿನ ಐದು ವರ್ಷಗಳಲ್ಲಿ ಪ್ರಧಾನ ಮಂತ್ರಿ ಅವಾಜ್ ಯೋಜನೆಯಡಿ ೩ ಕೋಟಿ ಮನೆ ನಿರ್ಮಾಣದ ಪ್ರಸ್ತಾವವನ್ನು ಬಜೆಟ್ ನಲ್ಲಿ ಇದ್ದು ಇದರ ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ ಎಂದು ಯಲುವಗುಳಿ ನಾಗರಾಜ್ ತಿಳಿಸಿದರು.

Ramesh Babu

Journalist

Recent Posts

ತಡರಾತ್ರಿ ರೌಡಿ ಶೀಟರ್‌ ಬರ್ಬರ ಹತ್ಯೆ: ಸೂಲಿಬೆಲೆಯಲ್ಲಿ ಭೀಕರ ಘಟನೆ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಗ್ರಾಮದಲ್ಲಿ ತಡರಾತ್ರಿ ರೌಡಿ ಶೀಟರ್‌ನನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಬರ್ಬರವಾಗಿ ಹತ್ಯೆ…

6 hours ago

ಕಾಕ್ರೋಚ್ ಜನತಾ ಪಾರ್ಟಿ……

ಕಾಕ್ರೋಚ್ ಜನತಾ ಪಾರ್ಟಿ...... ಸಾಮಾಜಿಕ ಜಾಲತಾಣದ ಹೊಸ ರಾಜಕೀಯ ಚಳುವಳಿ ಎಂದು ಕಳೆದ ಐದಾರು ವಾರಗಳಿಂದ ಇಡೀ ದೇಶದಾದ್ಯಂತ ಬಹುದೊಡ್ಡ…

9 hours ago

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

1 day ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

1 day ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

2 days ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

2 days ago