Categories: ಕೋಲಾರ

ಕೇಂದ್ರ ಬಜೆಟ್ ಅಭಿವೃದ್ಧಿಯ ಪರವಾದ ಬಜೆಟ್ -ಯಲುವಗುಳಿ ನಾಗರಾಜ್

ಕೋಲಾರ: ದೇಶದಲ್ಲಿ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಹಣಕಾಸು ಸಚಿವೆ ನಿರ್ಮಾಲಾ ಸೀತಾರಾಮನ್ ಅವರ ಬಜೆಟ್‌ನಲ್ಲಿ ಬಡವರು, ಮಹಿಳೆಯರು, ಯುವಕರು ಹಾಗೂ ನಾಡಿನ ಅನ್ನದಾತನ ಸಬಲೀಕರಣದೊಂದಿಗೆ ವಿಕಸಿತ ಭಾರತದ ಪರಿಕಲ್ಪನೆಗೆ ಪೂರಕವಾದ ಬಜೆಟ್‌ ಆಗಿದೆ ಎಂದು ಜೆಡಿಎಸ್‌ ಎಸ್ಸಿ ಘಟಕದ ಜಿಲ್ಲಾ ಉಪಾಧ್ಯಕ್ಷ ಯಲುವಗುಳಿ ನಾಗರಾಜ್ ಸಂತಸ ವ್ಯಕ್ತಪಡಿಸಿದರು

ಕೇಂದ್ರ ಬಜೆಟ್ ಕುರಿತು ಪತ್ರಕಾ ಹೇಳಿಕೆ ನೀಡಿದ ಅವರು ಬಜೆಟ್‌ನಲ್ಲಿ ದೇಶದ ಸರ್ವಾಂಗೀಣ ಅಭಿವೃದ್ಧಿಯೊಂದಿಗೆ ವಿಕಸಿತ ಭಾರತದ ಗುರಿಯನ್ನು ಸಾಧಿಸಲು ಪೂರಕವಾದ ಅಂಶಗಳಿಗೆ ಒತ್ತು ನೀಡಲಾಗಿದೆ ಈ ಸಾಲಿನ ಬಜೆಟ್‌ನಲ್ಲಿ ಉದ್ಯೋಗ ಸೃಷ್ಟಿಗೆ ಹೆಚ್ಚಿನ ಒತ್ತು ನೀಡಲಾಗಿದ್ದು, ೪ ಕೋಟಿ ಯುವಕರಿಗೆ ಮುಂದಿನ ಐದು ವರ್ಷಗಳಲ್ಲಿ ಉದ್ಯೋಗ ಒದಗಿಸುವ ಭರವಸೆಯನ್ನು ನೀಡಲಾಗಿದೆ ಕೃಷಿ ಉತ್ಪಾದನೆ ಹೆಚ್ಚಳ, ಉದ್ಯೋಗ ಸೃಷ್ಟಿ, ಮಾನವ ಸಂಪನ್ಮೂಲಗಳ ಅಭಿವೃದ್ಧಿ, ಉತ್ಪಾದನಾ ಕ್ಷೇತ್ರದ ಅಭಿವೃದ್ಧಿ, ಸಾಮಾಜಿಕ ನ್ಯಾಯ, ನಗರಾಭಿವೃದ್ಧಿ, ಇಂಧನ ಭದ್ರತೆ, ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಸುಧಾರಣೆ ಆವಿಷ್ಕಾರ ಸಂಶೋಧನೆ ಅಭಿವೃದ್ಧಿ, ಮುಂದಿನ ಪೀಳಿಗೆಗೆ ಆದ್ಯತೆ, ಎಂಎಸ್‌ಎಂಇ ಗಳಿಗೆ ಒತ್ತು ಸೇರಿದಂತೆ ೯ ವಲಯಗಳ ಅಭಿವೃದ್ಧಿಗೆ ಬಜೆಟ್‌ನಲ್ಲಿ ಯೋಜನೆಗಳಿಗೆ ಅಧ್ಯತೆ ನೀಡಲಾಗಿದೆ ಎಂದು ತಿಳಿಸಿದರು.

ದೇಶದ ಬೆನ್ನೆಲುಬಾದ ಅನ್ನದಾತನ ನೆರವಿಗಾಗಿ ಬಜೆಟ್‌ನಲ್ಲಿ ಹಲವು ಕಲ್ಯಾಣ ಯೋಜನೆ ಜಾರಿಯ ಭರವಸೆ ನೀಡಲಾಗಿದ್ದು, ಕೃಷಿ ಕ್ಷೇತ್ರಕ್ಕೆ ೧.೫೨ ಲಕ್ಷ ಕೋಟಿ ರೂ.ಗಳನ್ನು ಮೀಸಲಿರಿಸಿ ಕೃಷಿಯ ಸರ್ವಾಂಗೀಣ ಅಭಿವೃದ್ಧಿಯ ಬದ್ಧತೆಯನ್ನು ಬಜೆಟ್‌ನಲ್ಲಿ ವ್ಯಕ್ತಪಡಿಸಲಾಗಿದೆ ಮೂರು ಕೌಶಲ್ಯ ಯೋಜನೆಗಳನ್ನು ಪ್ರಕಟಿಸಲಾಗಿದ್ದು, ಶಿಕ್ಷಣ ಮತ್ತು ಆರೋಗ್ಯ ವಸತಿ ಕ್ಷೇತ್ರಕ್ಕೂ ಬಜೆಟ್‌ನಲ್ಲಿ ಒತ್ತು ನೀಡಲಾಗಿದ್ದು, ಮುಂದಿನ ಐದು ವರ್ಷಗಳಲ್ಲಿ ಪ್ರಧಾನ ಮಂತ್ರಿ ಅವಾಜ್ ಯೋಜನೆಯಡಿ ೩ ಕೋಟಿ ಮನೆ ನಿರ್ಮಾಣದ ಪ್ರಸ್ತಾವವನ್ನು ಬಜೆಟ್ ನಲ್ಲಿ ಇದ್ದು ಇದರ ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ ಎಂದು ಯಲುವಗುಳಿ ನಾಗರಾಜ್ ತಿಳಿಸಿದರು.

Ramesh Babu

Journalist

Recent Posts

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

16 minutes ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

22 minutes ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

3 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

6 hours ago

ಮಳೆ ಕೊರತೆ ನೀಗಿಸಲು ಸರ್ಕಾರದ ಮಾಸ್ಟರ್ ಪ್ಲ್ಯಾನ್: ಎಚ್.ಎ.ಎಲ್‌ನಲ್ಲಿ ಮೋಡ ಬಿತ್ತನೆಗೆ ಜಲ ಸಂಪನ್ಮೂಲ ಸಚಿವರಿಂದ ಚಾಲನೆ

ರಾಜ್ಯದಲ್ಲಿ ಎದುರಾಗಿರುವ ಮಳೆ‌ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…

6 hours ago

ಕಡಿದಾದ ತಿರುವಿನಲ್ಲಿ ನಿಯಂತ್ರಣ ತಪ್ಪಿದ ಸಿಮೆಂಟ್ ಲಾರಿ; ಚಾಲಕ ಸ್ಥಳದಲ್ಲೇ ಸಾವು ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಮುಂಜಾನೆ ದುರಂತ | ರಸ್ತೆಗೆ ಚೆಲ್ಲಾಪಿಲ್ಲಿಯಾದ ಸಿಮೆಂಟ್ ಮೂಟೆಗಳು

  ದೊಡ್ಡಬಳ್ಳಾಪುರ: ಕಡಿದಾದ ತಿರುವಿನಲ್ಲಿ ಸಿಮೆಂಟ್ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ…

10 hours ago