Categories: ಕೋಲಾರ

ಕೇಂದ್ರ ಬಜೆಟ್ ಅಭಿವೃದ್ಧಿಯ ಪರವಾದ ಬಜೆಟ್ -ಯಲುವಗುಳಿ ನಾಗರಾಜ್

ಕೋಲಾರ: ದೇಶದಲ್ಲಿ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಹಣಕಾಸು ಸಚಿವೆ ನಿರ್ಮಾಲಾ ಸೀತಾರಾಮನ್ ಅವರ ಬಜೆಟ್‌ನಲ್ಲಿ ಬಡವರು, ಮಹಿಳೆಯರು, ಯುವಕರು ಹಾಗೂ ನಾಡಿನ ಅನ್ನದಾತನ ಸಬಲೀಕರಣದೊಂದಿಗೆ ವಿಕಸಿತ ಭಾರತದ ಪರಿಕಲ್ಪನೆಗೆ ಪೂರಕವಾದ ಬಜೆಟ್‌ ಆಗಿದೆ ಎಂದು ಜೆಡಿಎಸ್‌ ಎಸ್ಸಿ ಘಟಕದ ಜಿಲ್ಲಾ ಉಪಾಧ್ಯಕ್ಷ ಯಲುವಗುಳಿ ನಾಗರಾಜ್ ಸಂತಸ ವ್ಯಕ್ತಪಡಿಸಿದರು

ಕೇಂದ್ರ ಬಜೆಟ್ ಕುರಿತು ಪತ್ರಕಾ ಹೇಳಿಕೆ ನೀಡಿದ ಅವರು ಬಜೆಟ್‌ನಲ್ಲಿ ದೇಶದ ಸರ್ವಾಂಗೀಣ ಅಭಿವೃದ್ಧಿಯೊಂದಿಗೆ ವಿಕಸಿತ ಭಾರತದ ಗುರಿಯನ್ನು ಸಾಧಿಸಲು ಪೂರಕವಾದ ಅಂಶಗಳಿಗೆ ಒತ್ತು ನೀಡಲಾಗಿದೆ ಈ ಸಾಲಿನ ಬಜೆಟ್‌ನಲ್ಲಿ ಉದ್ಯೋಗ ಸೃಷ್ಟಿಗೆ ಹೆಚ್ಚಿನ ಒತ್ತು ನೀಡಲಾಗಿದ್ದು, ೪ ಕೋಟಿ ಯುವಕರಿಗೆ ಮುಂದಿನ ಐದು ವರ್ಷಗಳಲ್ಲಿ ಉದ್ಯೋಗ ಒದಗಿಸುವ ಭರವಸೆಯನ್ನು ನೀಡಲಾಗಿದೆ ಕೃಷಿ ಉತ್ಪಾದನೆ ಹೆಚ್ಚಳ, ಉದ್ಯೋಗ ಸೃಷ್ಟಿ, ಮಾನವ ಸಂಪನ್ಮೂಲಗಳ ಅಭಿವೃದ್ಧಿ, ಉತ್ಪಾದನಾ ಕ್ಷೇತ್ರದ ಅಭಿವೃದ್ಧಿ, ಸಾಮಾಜಿಕ ನ್ಯಾಯ, ನಗರಾಭಿವೃದ್ಧಿ, ಇಂಧನ ಭದ್ರತೆ, ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಸುಧಾರಣೆ ಆವಿಷ್ಕಾರ ಸಂಶೋಧನೆ ಅಭಿವೃದ್ಧಿ, ಮುಂದಿನ ಪೀಳಿಗೆಗೆ ಆದ್ಯತೆ, ಎಂಎಸ್‌ಎಂಇ ಗಳಿಗೆ ಒತ್ತು ಸೇರಿದಂತೆ ೯ ವಲಯಗಳ ಅಭಿವೃದ್ಧಿಗೆ ಬಜೆಟ್‌ನಲ್ಲಿ ಯೋಜನೆಗಳಿಗೆ ಅಧ್ಯತೆ ನೀಡಲಾಗಿದೆ ಎಂದು ತಿಳಿಸಿದರು.

ದೇಶದ ಬೆನ್ನೆಲುಬಾದ ಅನ್ನದಾತನ ನೆರವಿಗಾಗಿ ಬಜೆಟ್‌ನಲ್ಲಿ ಹಲವು ಕಲ್ಯಾಣ ಯೋಜನೆ ಜಾರಿಯ ಭರವಸೆ ನೀಡಲಾಗಿದ್ದು, ಕೃಷಿ ಕ್ಷೇತ್ರಕ್ಕೆ ೧.೫೨ ಲಕ್ಷ ಕೋಟಿ ರೂ.ಗಳನ್ನು ಮೀಸಲಿರಿಸಿ ಕೃಷಿಯ ಸರ್ವಾಂಗೀಣ ಅಭಿವೃದ್ಧಿಯ ಬದ್ಧತೆಯನ್ನು ಬಜೆಟ್‌ನಲ್ಲಿ ವ್ಯಕ್ತಪಡಿಸಲಾಗಿದೆ ಮೂರು ಕೌಶಲ್ಯ ಯೋಜನೆಗಳನ್ನು ಪ್ರಕಟಿಸಲಾಗಿದ್ದು, ಶಿಕ್ಷಣ ಮತ್ತು ಆರೋಗ್ಯ ವಸತಿ ಕ್ಷೇತ್ರಕ್ಕೂ ಬಜೆಟ್‌ನಲ್ಲಿ ಒತ್ತು ನೀಡಲಾಗಿದ್ದು, ಮುಂದಿನ ಐದು ವರ್ಷಗಳಲ್ಲಿ ಪ್ರಧಾನ ಮಂತ್ರಿ ಅವಾಜ್ ಯೋಜನೆಯಡಿ ೩ ಕೋಟಿ ಮನೆ ನಿರ್ಮಾಣದ ಪ್ರಸ್ತಾವವನ್ನು ಬಜೆಟ್ ನಲ್ಲಿ ಇದ್ದು ಇದರ ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ ಎಂದು ಯಲುವಗುಳಿ ನಾಗರಾಜ್ ತಿಳಿಸಿದರು.

Ramesh Babu

Journalist

Recent Posts

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

14 hours ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

20 hours ago

80ರ ಹೊಸ್ತಿಲಲ್ಲಿ ಭಾರತ…..

ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…

1 day ago

ಆಹಾರ ಭದ್ರತೆಯಲ್ಲಿ ಯಾವುದೇ ಲೋಪವಾಗದಿರಲಿ- ಆಹಾರ ಆಯೋಗ ಅಧ್ಯಕ್ಷ ಡಾ.ಹೆಚ್ ಕೃಷ್ಣ

ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…

1 day ago

ನಾಳೆ(ಆ.14) ತೂಬಗೆರೆ ಸೊಸೈಟಿಗೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…

2 days ago

“ನನಗೆ ನೀರು ಬೇಕು, ಮಾತಾಡಲ್ಲ” — ಬಾಯಿಗೆ ಪ್ಲಾಸ್ಟರ್ ಹಾಕಿದ ವಾಟಾಳ್ ನಾಗರಾಜ್

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…

2 days ago