Categories: ರಾಜ್ಯ

ಕೇಂದ್ರ ಮೀಸಲು ಪೊಲೀಸ್ ಪಡೆ ನೇಮಕಾತಿ ಪರೀಕ್ಷೆಯನ್ನು ಕನ್ನಡ ಭಾಷೆಯಲ್ಲಿ ಬರೆಯಲು ಅವಕಾಶ ಕಲ್ಪಿಸುವಂತೆ ಸಿದ್ದರಾಮಯ್ಯ ಒತ್ತಾಯ

ಕೇಂದ್ರ ಮೀಸಲು ಪೊಲೀಸ್ ಪಡೆಯ ನೇಮಕಾತಿ ಪರೀಕ್ಷೆಯನ್ನು ಹಿಂದಿ ಮತ್ತು ಇಂಗ್ಲೀಷ್ ಭಾಷೆಯಲ್ಲಿ ಬರೆಯುವುದನ್ನು ಕಡ್ಡಾಯಗೊಳಿಸಿರುವುದನ್ನು ತಕ್ಷಣ ಸಡಿಲಿಸಿ, ಕನ್ನಡ ಭಾಷೆಯಲ್ಲಿಯೂ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಟ್ಟು ಈ ಅನ್ಯಾಯವನ್ನು ಸರಿಪಡಿಸಬೇಕೆಂದು ಪ್ರಧಾನಿ ಮೋದಿ ಅವರನ್ನು ಆಗ್ರಹಪಡಿಸುತ್ತಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ಭಾಷೆಯೇ ಜ್ಞಾನ ಅಲ್ಲ, ಅದು ಜ್ಞಾನದ ಸಂವಹನ ಸಾಧನ ಅಷ್ಟೆ. ಕನ್ನಡ ಭಾಷಾ ಮಾಧ್ಯಮದಲ್ಲಿ ಓದಿದ ನಮ್ಮ ಯುವಜನರು ಜ್ಞಾನಿಗಳಾಗಿದ್ದರೂ ಭಾಷೆಯ ಸಮಸ್ಯೆಯಿಂದಾಗಿ ಕೇಂದ್ರ ಸರ್ಕಾರ ನಡೆಸುವ ಪರೀಕ್ಷೆಯಲ್ಲಿ ಅನುತ್ತೀರ್ಣರಾಗುತ್ತಿದ್ದಾರೆ. ಇದು ಅನ್ಯಾಯ.

ರಾಜ್ಯದ ಬಿಜೆಪಿ ಸರ್ಕಾರದ ಭ್ರಷ್ಟಾಚಾರದಿಂದಾಗಿ ರಾಜ್ಯದಲ್ಲಿ ಮತ್ತು ಕೇಂದ್ರದ ಬಿಜೆಪಿ ಸರ್ಕಾರದ ಭಾಷಾ ನೀತಿಯಿಂದಾಗಿ ಕೇಂದ್ರದಲ್ಲಿ ಕನ್ನಡಿಗ ಯುವಜನರು ಉದ್ಯೋಗ ವಂಚಿತರಾಗುತ್ತಿದ್ದಾರೆ. ಇದರಿಂದ ರಾಜ್ಯದಲ್ಲಿ ನಿರುದ್ಯೋಗದ ಪ್ರಮಾಣ ಹೆಚ್ಚಾಗುತ್ತಿದೆ, ಯುವಜನರ ಭವಿಷ್ಯ ಮಂಕಾಗುತ್ತಿದೆ.

ಕೇಂದ್ರದ ಬಿಜೆಪಿ ಸರ್ಕಾರ ರಾಜ್ಯ ಭಾಷೆಗಳನ್ನು ಮೂಲೆಗೆ ತಳ್ಳಿ ಹಿಂದಿ ಭಾಷೆಯನ್ನು ನಮ್ಮ ತಲೆ ಮೇಲೆ ಹೇರುವ ಪ್ರಯತ್ನವನ್ನು ನಿರಂತರವಾಗಿ ಮಾಡುತ್ತಾ ಬಂದಿದೆ. ಉದ್ಯಮ, ಉದ್ಯೋಗ, ಶಿಕ್ಷಣ ಹೀಗೆ ಪ್ರತಿಯೊಂದು ಕ್ಷೇತ್ರದಲ್ಲಿಯೂ ಹಿಂದಿ ಭಾಷೆಯ ಯಜಮಾನಿಕೆ ಹೆಚ್ಚಾಗುತ್ತಿದೆ. ಇದನ್ನು ಸಹಿಸಲು ಸಾಧ್ಯ ಇಲ್ಲ.

ಈಗಲೂ ಕಾಲ ಮಿಂಚಿಲ್ಲ ಪ್ರಧಾನಿ ನರೇಂದ್ರ ಮೋದಿ ಅವರು ತಕ್ಷಣ ಮಧ್ಯೆ ಪ್ರವೇಶಿಸಿ ಸಿಆರ್‌ಪಿಎಫ್ ಪರೀಕ್ಷೆಗಳನ್ನು ಕನ್ನಡವೂ ಸೇರಿದಂತೆ ರಾಜ್ಯ ಭಾಷೆಗಳಲ್ಲಿ ಬರೆಯಲು ಅನುಕೂಲ ಮಾಡಿಕೊಡಬೇಕು. ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮತ್ತು ಬಿಜೆಪಿ ಸಂಸದರು ಇದಕ್ಕಾಗಿ ಪ್ರಧಾನಿಗಳ ಮೇಲೆ ಒತ್ತಡ ಹೇರಬೇಕು ಎಂದು ಆಗ್ರಹಿಸಿದ್ದಾರೆ.

Ramesh Babu

Journalist

Recent Posts

ನಾಳೆ(ಮಾರ್ಚ್ 11ರಿಂದ) ರಾಜ್ಯ ಸರ್ಕಾರಿ ಆಸ್ಪತ್ರೆಗಳ ವೈದ್ಯರ‌ ಮುಷ್ಕರ: ಸರ್ಕಾರಿ ಆಸ್ಪತ್ರೆಗಳಲ್ಲಿ ಓಪಿಡಿ ಸೇವೆಗಳು ಸ್ಥಗಿತ ಸಾಧ್ಯತೆ

ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…

35 seconds ago

ಮಾ.19 ರಿಂದ ಮಾ.22ರವರೆಗೆ ಮೇಲಿನ ಜೂಗಾನಹಳ್ಳಿಯಲ್ಲಿ ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟ್ ಆಯೋಜನೆ

ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್‌ಕುಮಾರ್‌ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…

21 minutes ago

25 ವರ್ಷಗಳ ನಂತರ ತಮಗೆ ಶಿಕ್ಷಣ ನೀಡಿದ ಗುರುಗಳ ಪಾದಪೂಜೆ

ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…

3 hours ago

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರ: ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…

3 hours ago

ಹಳಿ ತಪ್ಪಿದಂತಿರುವ ಭಾರತದ ವಿದೇಶಾಂಗ ನೀತಿ……..

ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…

12 hours ago