ಕೇಂದ್ರ ಮೀಸಲು ಪೊಲೀಸ್ ಪಡೆಯ ನೇಮಕಾತಿ ಪರೀಕ್ಷೆಯನ್ನು ಹಿಂದಿ ಮತ್ತು ಇಂಗ್ಲೀಷ್ ಭಾಷೆಯಲ್ಲಿ ಬರೆಯುವುದನ್ನು ಕಡ್ಡಾಯಗೊಳಿಸಿರುವುದನ್ನು ತಕ್ಷಣ ಸಡಿಲಿಸಿ, ಕನ್ನಡ ಭಾಷೆಯಲ್ಲಿಯೂ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಟ್ಟು ಈ ಅನ್ಯಾಯವನ್ನು ಸರಿಪಡಿಸಬೇಕೆಂದು ಪ್ರಧಾನಿ ಮೋದಿ ಅವರನ್ನು ಆಗ್ರಹಪಡಿಸುತ್ತಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
ಭಾಷೆಯೇ ಜ್ಞಾನ ಅಲ್ಲ, ಅದು ಜ್ಞಾನದ ಸಂವಹನ ಸಾಧನ ಅಷ್ಟೆ. ಕನ್ನಡ ಭಾಷಾ ಮಾಧ್ಯಮದಲ್ಲಿ ಓದಿದ ನಮ್ಮ ಯುವಜನರು ಜ್ಞಾನಿಗಳಾಗಿದ್ದರೂ ಭಾಷೆಯ ಸಮಸ್ಯೆಯಿಂದಾಗಿ ಕೇಂದ್ರ ಸರ್ಕಾರ ನಡೆಸುವ ಪರೀಕ್ಷೆಯಲ್ಲಿ ಅನುತ್ತೀರ್ಣರಾಗುತ್ತಿದ್ದಾರೆ. ಇದು ಅನ್ಯಾಯ.
ರಾಜ್ಯದ ಬಿಜೆಪಿ ಸರ್ಕಾರದ ಭ್ರಷ್ಟಾಚಾರದಿಂದಾಗಿ ರಾಜ್ಯದಲ್ಲಿ ಮತ್ತು ಕೇಂದ್ರದ ಬಿಜೆಪಿ ಸರ್ಕಾರದ ಭಾಷಾ ನೀತಿಯಿಂದಾಗಿ ಕೇಂದ್ರದಲ್ಲಿ ಕನ್ನಡಿಗ ಯುವಜನರು ಉದ್ಯೋಗ ವಂಚಿತರಾಗುತ್ತಿದ್ದಾರೆ. ಇದರಿಂದ ರಾಜ್ಯದಲ್ಲಿ ನಿರುದ್ಯೋಗದ ಪ್ರಮಾಣ ಹೆಚ್ಚಾಗುತ್ತಿದೆ, ಯುವಜನರ ಭವಿಷ್ಯ ಮಂಕಾಗುತ್ತಿದೆ.
ಕೇಂದ್ರದ ಬಿಜೆಪಿ ಸರ್ಕಾರ ರಾಜ್ಯ ಭಾಷೆಗಳನ್ನು ಮೂಲೆಗೆ ತಳ್ಳಿ ಹಿಂದಿ ಭಾಷೆಯನ್ನು ನಮ್ಮ ತಲೆ ಮೇಲೆ ಹೇರುವ ಪ್ರಯತ್ನವನ್ನು ನಿರಂತರವಾಗಿ ಮಾಡುತ್ತಾ ಬಂದಿದೆ. ಉದ್ಯಮ, ಉದ್ಯೋಗ, ಶಿಕ್ಷಣ ಹೀಗೆ ಪ್ರತಿಯೊಂದು ಕ್ಷೇತ್ರದಲ್ಲಿಯೂ ಹಿಂದಿ ಭಾಷೆಯ ಯಜಮಾನಿಕೆ ಹೆಚ್ಚಾಗುತ್ತಿದೆ. ಇದನ್ನು ಸಹಿಸಲು ಸಾಧ್ಯ ಇಲ್ಲ.
ಈಗಲೂ ಕಾಲ ಮಿಂಚಿಲ್ಲ ಪ್ರಧಾನಿ ನರೇಂದ್ರ ಮೋದಿ ಅವರು ತಕ್ಷಣ ಮಧ್ಯೆ ಪ್ರವೇಶಿಸಿ ಸಿಆರ್ಪಿಎಫ್ ಪರೀಕ್ಷೆಗಳನ್ನು ಕನ್ನಡವೂ ಸೇರಿದಂತೆ ರಾಜ್ಯ ಭಾಷೆಗಳಲ್ಲಿ ಬರೆಯಲು ಅನುಕೂಲ ಮಾಡಿಕೊಡಬೇಕು. ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮತ್ತು ಬಿಜೆಪಿ ಸಂಸದರು ಇದಕ್ಕಾಗಿ ಪ್ರಧಾನಿಗಳ ಮೇಲೆ ಒತ್ತಡ ಹೇರಬೇಕು ಎಂದು ಆಗ್ರಹಿಸಿದ್ದಾರೆ.
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…