Categories: ರಾಜ್ಯ

ಕೇಂದ್ರ ಮೀಸಲು ಪೊಲೀಸ್ ಪಡೆ ನೇಮಕಾತಿ ಪರೀಕ್ಷೆಯನ್ನು ಕನ್ನಡ ಭಾಷೆಯಲ್ಲಿ ಬರೆಯಲು ಅವಕಾಶ ಕಲ್ಪಿಸುವಂತೆ ಸಿದ್ದರಾಮಯ್ಯ ಒತ್ತಾಯ

ಕೇಂದ್ರ ಮೀಸಲು ಪೊಲೀಸ್ ಪಡೆಯ ನೇಮಕಾತಿ ಪರೀಕ್ಷೆಯನ್ನು ಹಿಂದಿ ಮತ್ತು ಇಂಗ್ಲೀಷ್ ಭಾಷೆಯಲ್ಲಿ ಬರೆಯುವುದನ್ನು ಕಡ್ಡಾಯಗೊಳಿಸಿರುವುದನ್ನು ತಕ್ಷಣ ಸಡಿಲಿಸಿ, ಕನ್ನಡ ಭಾಷೆಯಲ್ಲಿಯೂ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಟ್ಟು ಈ ಅನ್ಯಾಯವನ್ನು ಸರಿಪಡಿಸಬೇಕೆಂದು ಪ್ರಧಾನಿ ಮೋದಿ ಅವರನ್ನು ಆಗ್ರಹಪಡಿಸುತ್ತಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ಭಾಷೆಯೇ ಜ್ಞಾನ ಅಲ್ಲ, ಅದು ಜ್ಞಾನದ ಸಂವಹನ ಸಾಧನ ಅಷ್ಟೆ. ಕನ್ನಡ ಭಾಷಾ ಮಾಧ್ಯಮದಲ್ಲಿ ಓದಿದ ನಮ್ಮ ಯುವಜನರು ಜ್ಞಾನಿಗಳಾಗಿದ್ದರೂ ಭಾಷೆಯ ಸಮಸ್ಯೆಯಿಂದಾಗಿ ಕೇಂದ್ರ ಸರ್ಕಾರ ನಡೆಸುವ ಪರೀಕ್ಷೆಯಲ್ಲಿ ಅನುತ್ತೀರ್ಣರಾಗುತ್ತಿದ್ದಾರೆ. ಇದು ಅನ್ಯಾಯ.

ರಾಜ್ಯದ ಬಿಜೆಪಿ ಸರ್ಕಾರದ ಭ್ರಷ್ಟಾಚಾರದಿಂದಾಗಿ ರಾಜ್ಯದಲ್ಲಿ ಮತ್ತು ಕೇಂದ್ರದ ಬಿಜೆಪಿ ಸರ್ಕಾರದ ಭಾಷಾ ನೀತಿಯಿಂದಾಗಿ ಕೇಂದ್ರದಲ್ಲಿ ಕನ್ನಡಿಗ ಯುವಜನರು ಉದ್ಯೋಗ ವಂಚಿತರಾಗುತ್ತಿದ್ದಾರೆ. ಇದರಿಂದ ರಾಜ್ಯದಲ್ಲಿ ನಿರುದ್ಯೋಗದ ಪ್ರಮಾಣ ಹೆಚ್ಚಾಗುತ್ತಿದೆ, ಯುವಜನರ ಭವಿಷ್ಯ ಮಂಕಾಗುತ್ತಿದೆ.

ಕೇಂದ್ರದ ಬಿಜೆಪಿ ಸರ್ಕಾರ ರಾಜ್ಯ ಭಾಷೆಗಳನ್ನು ಮೂಲೆಗೆ ತಳ್ಳಿ ಹಿಂದಿ ಭಾಷೆಯನ್ನು ನಮ್ಮ ತಲೆ ಮೇಲೆ ಹೇರುವ ಪ್ರಯತ್ನವನ್ನು ನಿರಂತರವಾಗಿ ಮಾಡುತ್ತಾ ಬಂದಿದೆ. ಉದ್ಯಮ, ಉದ್ಯೋಗ, ಶಿಕ್ಷಣ ಹೀಗೆ ಪ್ರತಿಯೊಂದು ಕ್ಷೇತ್ರದಲ್ಲಿಯೂ ಹಿಂದಿ ಭಾಷೆಯ ಯಜಮಾನಿಕೆ ಹೆಚ್ಚಾಗುತ್ತಿದೆ. ಇದನ್ನು ಸಹಿಸಲು ಸಾಧ್ಯ ಇಲ್ಲ.

ಈಗಲೂ ಕಾಲ ಮಿಂಚಿಲ್ಲ ಪ್ರಧಾನಿ ನರೇಂದ್ರ ಮೋದಿ ಅವರು ತಕ್ಷಣ ಮಧ್ಯೆ ಪ್ರವೇಶಿಸಿ ಸಿಆರ್‌ಪಿಎಫ್ ಪರೀಕ್ಷೆಗಳನ್ನು ಕನ್ನಡವೂ ಸೇರಿದಂತೆ ರಾಜ್ಯ ಭಾಷೆಗಳಲ್ಲಿ ಬರೆಯಲು ಅನುಕೂಲ ಮಾಡಿಕೊಡಬೇಕು. ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮತ್ತು ಬಿಜೆಪಿ ಸಂಸದರು ಇದಕ್ಕಾಗಿ ಪ್ರಧಾನಿಗಳ ಮೇಲೆ ಒತ್ತಡ ಹೇರಬೇಕು ಎಂದು ಆಗ್ರಹಿಸಿದ್ದಾರೆ.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

7 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

11 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

11 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

14 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

1 day ago