ಕರ್ನಾಟಕದಲ್ಲಿ ರಾಷ್ಟ್ರೀಯ ಹೆದ್ದಾರಿಗಳ ಸಂರ್ಪಕ ಜಾಲವನ್ನು ವೃದ್ಧಿಸಲು ಸಹಕಾರ ನೀಡುತ್ತಿರುವ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರನ್ನು ಕರ್ನಾಟಕ ರಾಜ್ಯದ ಪರವಾಗಿ ಅಭಿನಂದಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕೇಂದ್ರದಿಂದ ರಾಜ್ಯಕ್ಕೆ ಮಂಜೂರಾಗಿರುವ ಕೆಳಕಂಡ ಪ್ರಮುಖ ಯೋಜನೆಗಳ ವಿವರ ಇಂತಿದೆ.
1. ರಾಷ್ಟ್ರೀಯ ಹೆದ್ದಾರಿ 275 ರಲ್ಲಿ ಮಣಿಪಾಲ್ ಆಸ್ಪತ್ರೆ ಜಂಕ್ಷನ್ (ಮೈಸೂರು ನಗರ)ದಲ್ಲಿ ಫ್ಲೈಓವರ್ ನಿರ್ಮಾಣ.
2. 30.35 ಕಿ.ಮೀ. ಉದ್ದದ ಹುಬ್ಬಳ್ಳಿ ಧಾರವಾಡ ಷ್ಟಪಥ ಬೈಪಾಸ್ ನಿರ್ಮಾಣ
3. ರಾ.ಹೆ 369 ಇ( ಸಿಗಂದೂರು ಸೇತುವೆ) ರಲ್ಲಿ ಶರಾವತಿ ಹಿನ್ನೀರಿನ ಮೇಲೆ ಪ್ರಮುಖ ಸೇತುವೆ ನಿರ್ಮಾಣ.
4. ರಾ.ಹೆ.167 ಹಗರಿ-ಜೆಡ್ಚೆರ್ಲಾ ಸೆಕ್ಷನ್ ನಲ್ಲಿ ಕೃಷ್ಣಾ ನದಿ ಮೇಲೆ 180.865 ಕಿ.ಮೀ.ನಲ್ಲಿ ಪ್ರಮುಖ ಸೇತುವೆ ನಿರ್ಮಾಣ.
5. ಹೊಸಪೇಟೆ ಯಿಂದ ಬಳ್ಳಾರಿ ಸೆಕ್ಷನ್ ನ ಹಳೆಯ ರಾ.ಹೆ-63(ಹೊಸ ರಾ.ಹೆ-67) ನ ಕಿ.ಮಿ.340+640 (ಬಳ್ಳಾರಿ ನಗರ ಮಿತಿಯಲ್ಲಿನ ಸುಧಾ ಕ್ರಾಸ್) ನಲ್ಲಿ LC-110E ಬದಲಿಗೆ 2-ಲೇನ್ ROB ನಿರ್ಮಾಣ.
6. ರಾ.ಹೆ.150ಎ ರಲ್ಲಿನ ಸಿಂದಿಗೆರಿ-ಬಳ್ಳಾರಿ ಸೆಕ್ಷನ್ನ ಕಿ.ಮೀ.235.00 ರಿಂದ 254.800ವರೆಗೆ Two Lane with Paved Shoulders ಗೆ ಅಗಲೀಕರಣ ಯೋಜನೆ.
ಕರ್ನಾಟಕ ಸರ್ಕಾರವು ರಾಜ್ಯದ ರಾಷ್ಟ್ರೀಯ ಹೆದ್ದಾರಿ ಸಂಪರ್ಕ ಜಾಲದ ಅಭಿವೃದ್ಧಿಯನ್ನು ಬೆಂಬಲಿಸುತ್ತಿದ್ದು, ರಸ್ತೆ ನಿರ್ಮಾಣಕ್ಕೆ ಅಗತ್ಯವಿರುವ ಭೂಸ್ವಾಧೀನ ಪ್ರಕ್ರಿಯೆಗಳನ್ನು ಚುರುಕುಗೊಳಿಸಲು ಕಂದಾಯ ಇಲಾಖೆಯೊಂದಿಗೆ ಹಾಗೂ ಅರಣ್ಯ ತೀರುವಳಿ ಪ್ರಕ್ರಿಯೆ ತ್ವರಿತಗೊಳಿಸಲು ಅರಣ್ಯ ಇಲಾಖೆಯೊಂದಿಗೆ ಪ್ರಗತಿ ಪರಿಶೀಲನಾ ಸಭೆಗಳನ್ನು ನಡೆಸುತ್ತಿದೆ. ನೀರು ಹಾಗೂ ವಿದ್ಯುತ್ ಸಂಪರ್ಕ ಸೇರಿದಂತೆ Utility Shifting ಕಾರ್ಯವನ್ನು ಚುರುಕುಗೊಳಿಸಲು ಸಂಬಂಧಪಟ್ಟ ಇಲಾಖೆಗೊಂದಿಗೆ ಸಭೆ ನಡೆಸುವ ಮೂಲಕ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಆದ್ಯತೆ ನೀಡಲಾಗಿದೆ.
10,000 ಪಿ.ಯು.ಸಿ ಗಿಂತಲೂ ಸಂಚಾರ ತೀವ್ರತೆ ಹೆಚ್ಚಿರುವ ಇರುವ ರಾಜ್ಯ ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಹಾಗೂ ರಾಜ್ಯದ ಸಮಾಜಿಕ ಮತ್ತು ಆರ್ಥಿಕ ಅಭಿವೃದ್ದಿಗಾಗಿ ಈ ಕೆಳಕಂಡ ಯೋಜನೆಗಳನ್ನು ಮಂಜೂರು ಮಾಡಬೇಕೆಂದು ಮಾನ್ಯ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಕೇಂದ್ರ ಸಚಿವರಲ್ಲಿ ಕರ್ನಾಟಕ ಸರ್ಕಾರದ ಪರವಾಗಿ ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ.
1. ಸಂಚಾರ ದಟ್ಟಣೆಯನ್ನು ಸುಗಮಗೊಳಿಸಲು ಮೈಸೂರಿನ ರಾಷ್ಟ್ರೀಯ ಹೆದ್ದಾರಿ -275ರಲ್ಲಿ 9 ಗ್ರೇಡ್ ಸಪರೇಟರ್ಗಳ ನಿರ್ಮಾಣ.
2. ರಾಷ್ಟ್ರೀಯ ಹೆದ್ದಾರಿ -75 ( ಹಳೆಯ ರಾ.ಹೆ 48) ರ ಶಿರಾಡಿ ಘಾಟ್ ನ 237+000 ರಿಂದ 263+000 ( ಮಾರನಹಳ್ಳಿಯಿಂದ ಅಡ್ಡಹೊಳೆ ಸೆಕ್ಷನ್) ವರೆಗೆ ಸುರಂಗ ನಿರ್ಮಾಣ ಮಾಡುವ ಮೂಲಕ ಮಂಗಳೂರು ಬಂದರು (ದೇಶದ 7 ನೇ ಅತಿ ದೊಡ್ಡ ಬಂದರು) ಮತ್ತು ರಾಜ್ಯ ರಾಜಧಾನಿ ಬೆಂಗಳೂರಿನ ನಡುವೆ ಸಂಪರ್ಕವನ್ನು ಸುಧಾರಿಸುವುದು.
3. ಪುಣೆ- ಬೆಂಗಳೂರು ಗ್ರೀನ್ ಫೀಲ್ಡ್ ಎಕ್ಸ್ ಪ್ರೆಸ್ ವೇ ನ್ನು ಶೀಘ್ರವಾಗಿ ಮಂಜೂರು ಮಾಡುವುದು.
4. ಮುಂಬರಲಿರುವ ವಾರ್ಷಿಕ ಯೋಜನೆ 20205-26 ರಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು 24000 ಕೋಟಿಗಳಿಗೆ ಹೆಚ್ಚಿಸಿ ಇಮಂಜೂರು ಮಾಡುವುದು.
5. ಬೆಂಗಳೂರಿ ನಗರದ ಹೆಬ್ಬಾಳ ಜಂಕ್ಷನ್ ನ ರಾಷ್ಟ್ರೀಯ ಹೆದ್ದಾರಿ- 44 ರಲ್ಲಿ ಮೇಲ್ಸೇತುವೆ ನಿರ್ಮಾಣ.
6. ತಾತ್ವಿಕವಾಗಿ ಘೋಷಿತವಾಗಿರುವ ರಸ್ತೆಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಆದ್ಯತೆ ಮೇಲೆ ಮೇಲ್ದರ್ಜೆಗೇರಿಸುವುದು.
7. ಬೆಂಗಳೂರು ನಗರದಲ್ಲಿ ಮೈಸೂರು ರಸ್ತೆಯನ್ನು ಸಂಪರ್ಕಿಸುವ ಸುರಂಗದ ನಿರ್ಮಾಣ ( ರಾ.ಹೆ- 275) ಮತ್ತು ಹೊಸೂರು ರಸ್ತೆ ( ರಾ.ಹೆ-48 ಮತ್ತು ರಾ.ಹೆ-75) ( ಎಲೆಕ್ಟ್ರಾನಿಕ್ ಸಿಟಿ) ಮಾರ್ಗವಾಗಿ ತುಮಕೂರು ರಸ್ತೆ (ರಾ.ಹೆ-48), ಬಳ್ಳಾರಿ ರಸ್ತೆ ( ರಾ.ಹೆ-44) ಮತ್ತು ಹಳೆ ಮದ್ರಾಸು ರಸ್ತೆ ( ಹಳೆ ರಾ.ಹೆ -4)
8. ಬೆಳಗಾವಿ ನಗರ ಸಂಚಾರ ದಟ್ಟಣೆಯನ್ನು ಸುಗಮಗೊಳಿಸಲು ಬೆಳಗಾವಿ ನಗರದ ರಾ.ಹೆ-4 ರಲ್ಲಿ ಎಲಿವೇಟೆಡ್ ಕಾರಿಡಾರ್ ನಿರ್ಮಾಣ
9. ಕಲಬುರ್ಗಿ-ವಾಡಿ-ಯಾದಗಿರಿ-ಕೆಂದೆಚೂರ್-ಜಡ್ ಚೇರ್ಲಾ ವಿಭಾಗದಲ್ಲಿ ಚತುಷ್ಪಥ ರಸ್ತೆ ನಿರ್ಮಿಸಿ ರಸ್ತೆ ಅಗಲೀಕರಣ ಕೈಗೊಳ್ಳುವುದು.
10. ರಾಜ್ಯದ ಯಾದಗಿರಿ ಜಿಲ್ಲೆಯಲ್ಲಿ ರಾ.ಹೆ 150ಎ ( ಜೇವರ್ಗಿ- ಚಾಮರಾಜನಗರ ವಿಭಾಗ) ರಲ್ಲಿ ಭೀಮರಾಯನಗುಡಿ ಮತ್ತು ಶಹಪುರ ಪಟ್ಟಣ ಕ್ಕೆ 2 ಎಲ್+ ಪಿಎಸ್ ಗ್ರೀನ್ ಫೀಲ್ಡ್ ಸಂಯೋಜಿತ ಬೈಪಾಸ್ ನಿರ್ಮಾಣ
11. ಕರ್ನಾಟಕ ರಾಜ್ಯದಲ್ಲಿ ಎಸ್ ಪಿ ಯು ಆರ್ ಅಡಿಯಲ್ಲಿ ರಾ.ಹೆ-752ಕೆ ನಿಂದ ರಾ.ಹೆ -65 ವರೆಗೆ ರಾಷ್ಟ್ರೀಯ ಹೆದ್ದಾರಿ ಎಂದು ಘೋಷಿಸುವುದು
12. ಕರ್ನಾಟಕ ರಾಜ್ಯದಲ್ಲಿ ಎಸ್ ಪಿ ಯು ಆರ್ ಅಡಿಯಲ್ಲಿ ದೇವಲ್ ಗಾಣಗಾಪುರದಿಂದ ಪಂಡರಾಪುರವರೆಗಿನ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿ ಎಂದು ಘೋಷಿಸುವುದು
ಈ ಎಲ್ಲಾ ಪ್ರಸ್ತಾವನೆಗಳನ್ನು ಪರಿಗಣಿಸಿ ಮಂಜೂರಾತಿಗಳನ್ನು ನೀಡಲು ಸಂಬಂಧಿಸಿದವರಿಗೆ ಅಗತ್ಯ ನಿರ್ದೇಶನಗಳನ್ನು ನೀಡುವಂತೆ ಕೋರಲಾಗಿದೆ.
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…