ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಸಾಮಾನ್ಯ ಜನ, ರೈತ, ಕಾರ್ಮಿಕ ವಿರೋಧಿ ಯೋಜನೆ, ನೀತಿಗಳನ್ನು ಜಾರಿಗೊಳಿಸಿರುವುದನ್ನು ವಿರೋಧಿಸಿ ಆಗಸ್ಟ್ 1ರಿಂದ 14 ರವರೆಗೆ ದೇಶವ್ಯಾಪಿ ಪ್ರಚಾರಾಂದೋಲನಕ್ಕೆ ಕರೆ ನೀಡಲಾಗಿದೆ. ಆಗಸ್ಟ್ 14ರ ಸಂಜೆಯಿಂದ ಆ.15ರ ಬೆಳಗಿನ ಜಾವವರೆಗೆ ಸರ್ಕಾರದ ಜನ ವಿರೋಧಿ ನೀತಿಗಳನ್ನು ತಿಳಿಸಲು ಅಹೋರಾತ್ರಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ರೈತ ಪ್ರಾಂತ ಸಂಘದ ಜಿಲ್ಲಾ ಕಾರ್ಯದರ್ಶಿ ಆರ್.ಚಂದ್ರತೇಜಸ್ವಿ ತಿಳಿಸಿದರು.
ನಗರದಲ್ಲಿ ಸಿಐಟಿಯು, ಎಐಕೆಎಸ್, ಪ್ರಾಂತ ರೈತ ಸಂಘ ಸೇರಿದಂತೆ ವಿವಿಧ ಸಂಘಟನೆಗಳಿಂದ ಸೋಮವಾರ ಹಮ್ಮಿಕೊಂಡಿದ್ದ ಕೇಂದ್ರ ಸರ್ಕಾರದ ಜನ ವಿರೋಧಿ ನಿತಿಗಳ ಪ್ರಚಾರೋಂದಲನದಲ್ಲಿ ಅವರು ಮಾತನಾಡಿ, ದೇಶಾದ್ಯಂತ ಪೆಟ್ರೋಲ್, ಡೀಸೆಲ್, ಹಾಲು, ಅಡುಗೆ ಎಣ್ಣೆ, ತರಕಾರಿ, ಗ್ಯಾಸ್ ಸೇರಿದಂತೆ ದಿನನಿತ್ಯ ಬಳಕೆಯ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ, ತೆರಿಗೆ ವಿಧಿಸಿ ಬಡ, ಮಧ್ಯಮ ವರ್ಗದ ಜನರ ಜೀವನದ ಜೊತೆ ಪ್ರಧಾನಿ ನರೇಂದ್ರ ಮೊದಿ ಸರ್ಕಾರ ಚೆಲ್ಲಾಟವಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಪಿಎ.ವೆಂಕಟೇಶ ಮಾತನಾಡಿ, ಪ್ರಧಾನಿ ಮೋದಿ ಅವರು ಜನರ ಕಷ್ಟಗಳನ್ನು ನೇರವಾಗಿ ಕೇಳದೆ ಮನ್ ಕೀ ಬಾತ್ ಮಾಡಿ ಅವರಷ್ಟಕ್ಕೆ ಅವರೆ ಮಾತನಾಡಿಕೊಳ್ಳುತ್ತಿದ್ದಾರೆ. 9 ವರ್ಷಗಳ ಅಧಿಕಾರಾವಧಿಯಲ್ಲಿ ಇಲ್ಲಿವರೆಗೆ ಒಂದೇ ಒಂದು ಪತ್ರಿಕಾಗೋಷ್ಠಿ ನಡೆಸಿ ಸರ್ಕಾರದ ಸಾಧನೆ ಬಗ್ಗೆ ಹಾಗೂ ಜನರ ಅಹವಾಲು ಸ್ವೀಕರಿಸಿಲ್ಲ. ಹಲವು ದೇಶಗಳಿಗೆ ಪ್ರಧಾನಿ ಮೋದಿ ಹೋಗಿ ಬಂದಿದ್ದಾರೆ ಅದರ ಪ್ರತಿಫಲವೇನು, 20ಲಕ್ಷ ಕೋಟಿ ಕೋವಿಡ್ ಪರಿಹಾರ ಧನ ಎಲ್ಲಿಗೆ ಹೋಯ್ತು..? ಪ್ರಧಾನಿ ಕೇರ್ಸ್ ಫಂಡ್ ಖಾತೆಗೆ ಜನರು ಹಾಕಿದ ದುಡ್ಡಿಗೆ ಲೆಕ್ಕವನ್ನು ನೀಡಿಲ್ಲ. ರೈಲು, ಬ್ಯಾಂಕ್, ಬಂದರು, ಶಿಕ್ಷಣ, ಆರೋಗ್ಯ ಕ್ಷೇತ್ರಗಳನ್ನು ಖಾಸಗೀಕರಣ ಮಾಡಲು ಹೊರಟ್ಟಿದ್ದಾರೆ.
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…
ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…
ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ 14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…