Categories: Home

ಕೇಂದ್ರ ಸರ್ಕಾರದಿಂದ ಜನವಿರೋಧಿ ನೀತಿಗಳ ವಿರುದ್ಧ ಪ್ರಚಾರೋಂದಲನ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಸಾಮಾನ್ಯ ಜನ, ರೈತ, ಕಾರ್ಮಿಕ ವಿರೋಧಿ ಯೋಜನೆ, ನೀತಿಗಳನ್ನು ಜಾರಿಗೊಳಿಸಿರುವುದನ್ನು ವಿರೋಧಿಸಿ ಆಗಸ್ಟ್ 1ರಿಂದ 14 ರವರೆಗೆ ದೇಶವ್ಯಾಪಿ ಪ್ರಚಾರಾಂದೋಲನಕ್ಕೆ ಕರೆ ನೀಡಲಾಗಿದೆ. ಆಗಸ್ಟ್ 14ರ ಸಂಜೆಯಿಂದ ಆ.15ರ ಬೆಳಗಿನ ಜಾವವರೆಗೆ ಸರ್ಕಾರದ ಜನ ವಿರೋಧಿ ನೀತಿಗಳನ್ನು ತಿಳಿಸಲು ಅಹೋರಾತ್ರಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ರೈತ ಪ್ರಾಂತ ಸಂಘದ ಜಿಲ್ಲಾ ಕಾರ್ಯದರ್ಶಿ ಆರ್.ಚಂದ್ರತೇಜಸ್ವಿ ತಿಳಿಸಿದರು.

ನಗರದಲ್ಲಿ ಸಿಐಟಿಯು, ಎಐಕೆಎಸ್, ಪ್ರಾಂತ ರೈತ ಸಂಘ ಸೇರಿದಂತೆ ವಿವಿಧ ಸಂಘಟನೆಗಳಿಂದ ಸೋಮವಾರ ಹಮ್ಮಿಕೊಂಡಿದ್ದ ಕೇಂದ್ರ ಸರ್ಕಾರದ ಜನ ವಿರೋಧಿ ನಿತಿಗಳ ಪ್ರಚಾರೋಂದಲನದಲ್ಲಿ ಅವರು ಮಾತನಾಡಿ, ದೇಶಾದ್ಯಂತ ಪೆಟ್ರೋಲ್, ಡೀಸೆಲ್, ಹಾಲು, ಅಡುಗೆ ಎಣ್ಣೆ, ತರಕಾರಿ, ಗ್ಯಾಸ್ ಸೇರಿದಂತೆ ದಿನನಿತ್ಯ ಬಳಕೆಯ ಅಗತ್ಯ ವಸ್ತುಗಳ ಬೆಲೆ ಏರಿಕೆ‌ ಮಾಡಿ, ತೆರಿಗೆ ವಿಧಿಸಿ ಬಡ, ಮಧ್ಯಮ ವರ್ಗದ ಜನರ ಜೀವನದ ಜೊತೆ ಪ್ರಧಾನಿ ನರೇಂದ್ರ ಮೊದಿ ಸರ್ಕಾರ ಚೆಲ್ಲಾಟವಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದೇಶದಲ್ಲಿ ಕಳೆದ ಒಂಭತ್ತು ವರ್ಷಗಳಿಂದ ಹಣದುಬ್ಬರ ತಾಂಡವಾಡುತ್ತಿದೆ. ಬೆಲೆ ಏರಿಕೆಯಿಂದ ಬಡ ಜನರನ್ನು ರಕ್ಷಿಸಲು ಮೋದಿ ಸರ್ಕಾರ ಯಾವುದೇ ಕ್ರಮಗಳನ್ನು ಈವರೆಗೆ ತೆಗೆದುಕೊಂಡಿಲ್ಲ. ಬಡ ಜನರಿಗೆ ಪಡಿತರ ನೀಡಲು ಸಿದ್ಧವಿರದ ಕೇಂದ್ರ ಸರ್ಕಾರ ಆಹಾರ ಭದ್ರತೆಗೆ ಧಕ್ಕೆ ತರುವಂತಹ ಕೆಲಸ ಮಾಡುತ್ತಿದೆ. ದೇಶದಲ್ಲಿ ದಿನೇ ದಿನೇ ನಿರುದ್ಯೋಗ ಪ್ರಮಾಣ ಹೆಚ್ಚಾಗುತ್ತಿದೆ, ಜನರ ನಿಜವಾದ ಆದಾಯ ಕುಸಿಯುತ್ತಿದೆ. ವೆಚ್ಚಕ್ಕೆ, ಬೆಲೆ ಏರಿಕೆ ತಕ್ಕಂತೆ ಕಾರ್ಮಿಕರ ವೇತನ ಹೆಚ್ಚಾಗುತ್ತಿಲ್ಲ. ಪ್ರಸ್ತುತ ರೈತರು ಸಂಕಷ್ಟದಲ್ಲಿದ್ದಾರೆ. ಸ್ವಾಮಿನಾಥನ್ ಶಿಫಾರಸು ನ್ನು ಜಾರಿ ಮಾಡುತ್ತಿಲ್ಲ, ರೈತರು ಉತ್ಪಾದಿಸಿದ ಬೆಳೆಗಳಿಗೆ ಬೆಂಬಲ ಬೆಲೆ ನಿಗದಿ ಮಾಡದೆ ರೈತ ವಿರೋಧಿ ಕಾನೂನನ್ನು ಜಾರಿ‌ ಮಾಡಲು ಹೊರಟಿದ್ದಾರೆ ಎಂದರು.

ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಪಿಎ.ವೆಂಕಟೇಶ ಮಾತನಾಡಿ, ಪ್ರಧಾನಿ ಮೋದಿ ಅವರು ಜನರ ಕಷ್ಟಗಳನ್ನು ನೇರವಾಗಿ ಕೇಳದೆ ಮನ್ ಕೀ ಬಾತ್ ಮಾಡಿ ಅವರಷ್ಟಕ್ಕೆ ಅವರೆ ಮಾತನಾಡಿಕೊಳ್ಳುತ್ತಿದ್ದಾರೆ. 9 ವರ್ಷಗಳ ಅಧಿಕಾರಾವಧಿಯಲ್ಲಿ ಇಲ್ಲಿವರೆಗೆ ಒಂದೇ ಒಂದು ಪತ್ರಿಕಾಗೋಷ್ಠಿ ನಡೆಸಿ ಸರ್ಕಾರದ ಸಾಧನೆ ಬಗ್ಗೆ ಹಾಗೂ ಜನರ ಅಹವಾಲು ಸ್ವೀಕರಿಸಿಲ್ಲ. ಹಲವು ದೇಶಗಳಿಗೆ ಪ್ರಧಾನಿ ಮೋದಿ ಹೋಗಿ ಬಂದಿದ್ದಾರೆ ಅದರ ಪ್ರತಿಫಲವೇನು, 20ಲಕ್ಷ ಕೋಟಿ ಕೋವಿಡ್ ಪರಿಹಾರ ಧನ ಎಲ್ಲಿಗೆ ಹೋಯ್ತು..? ಪ್ರಧಾನಿ ಕೇರ್ಸ್ ಫಂಡ್ ಖಾತೆಗೆ ಜನರು ಹಾಕಿದ ದುಡ್ಡಿಗೆ ಲೆಕ್ಕವನ್ನು ನೀಡಿಲ್ಲ. ರೈಲು, ಬ್ಯಾಂಕ್, ಬಂದರು, ಶಿಕ್ಷಣ, ಆರೋಗ್ಯ ಕ್ಷೇತ್ರಗಳನ್ನು ಖಾಸಗೀಕರಣ ಮಾಡಲು ಹೊರಟ್ಟಿದ್ದಾರೆ.

ಸಿಐಟಿಯು ಮುಖಂಡ ರೇಣುಕಾರಾದ್ಯ, ಸಿಹೆಚ್ ರಾಮಕೃಷ್ಣ, ವಿಜಯಕುಮಾರ್, ಸಾದಿಕ್ ಪಾಷಾ, ಎ.ಜಾರ್ಜ್, ಮಣೀಶ್, ಅನಿಲ್ ಗುಪ್ತಾ,‌ ಕೆ‌ ರಘು‌ಕುಮಾರ್, ಚೌಡಯ್ಯ ಸೈಯದ್ ಅಲಿ ಮತ್ತಿತರರು ಇದ್ದರು.

Ramesh Babu

Journalist

Recent Posts

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು- ಎಸ್ಪಿ ಸಿ.ಕೆ ಬಾಬಾ

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…

7 hours ago

ಗೊತ್ತಿರದ ವಿಷಯ ಕಲಿಯುವ ಕಡೆ ಗಮನ ಕೇಂದ್ರೀಕರಿಸಿ- ಡಾ. ಸೀಮಾ ಚೋಪ್ರಾ

"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…

7 hours ago

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

15 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

1 day ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

2 days ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

2 days ago