ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಸಾಮಾನ್ಯ ಜನ, ರೈತ, ಕಾರ್ಮಿಕ ವಿರೋಧಿ ಯೋಜನೆ, ನೀತಿಗಳನ್ನು ಜಾರಿಗೊಳಿಸಿರುವುದನ್ನು ವಿರೋಧಿಸಿ ಆಗಸ್ಟ್ 1ರಿಂದ 14 ರವರೆಗೆ ದೇಶವ್ಯಾಪಿ ಪ್ರಚಾರಾಂದೋಲನಕ್ಕೆ ಕರೆ ನೀಡಲಾಗಿದೆ. ಆಗಸ್ಟ್ 14ರ ಸಂಜೆಯಿಂದ ಆ.15ರ ಬೆಳಗಿನ ಜಾವವರೆಗೆ ಸರ್ಕಾರದ ಜನ ವಿರೋಧಿ ನೀತಿಗಳನ್ನು ತಿಳಿಸಲು ಅಹೋರಾತ್ರಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ರೈತ ಪ್ರಾಂತ ಸಂಘದ ಜಿಲ್ಲಾ ಕಾರ್ಯದರ್ಶಿ ಆರ್.ಚಂದ್ರತೇಜಸ್ವಿ ತಿಳಿಸಿದರು.
ನಗರದಲ್ಲಿ ಸಿಐಟಿಯು, ಎಐಕೆಎಸ್, ಪ್ರಾಂತ ರೈತ ಸಂಘ ಸೇರಿದಂತೆ ವಿವಿಧ ಸಂಘಟನೆಗಳಿಂದ ಸೋಮವಾರ ಹಮ್ಮಿಕೊಂಡಿದ್ದ ಕೇಂದ್ರ ಸರ್ಕಾರದ ಜನ ವಿರೋಧಿ ನಿತಿಗಳ ಪ್ರಚಾರೋಂದಲನದಲ್ಲಿ ಅವರು ಮಾತನಾಡಿ, ದೇಶಾದ್ಯಂತ ಪೆಟ್ರೋಲ್, ಡೀಸೆಲ್, ಹಾಲು, ಅಡುಗೆ ಎಣ್ಣೆ, ತರಕಾರಿ, ಗ್ಯಾಸ್ ಸೇರಿದಂತೆ ದಿನನಿತ್ಯ ಬಳಕೆಯ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ, ತೆರಿಗೆ ವಿಧಿಸಿ ಬಡ, ಮಧ್ಯಮ ವರ್ಗದ ಜನರ ಜೀವನದ ಜೊತೆ ಪ್ರಧಾನಿ ನರೇಂದ್ರ ಮೊದಿ ಸರ್ಕಾರ ಚೆಲ್ಲಾಟವಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಪಿಎ.ವೆಂಕಟೇಶ ಮಾತನಾಡಿ, ಪ್ರಧಾನಿ ಮೋದಿ ಅವರು ಜನರ ಕಷ್ಟಗಳನ್ನು ನೇರವಾಗಿ ಕೇಳದೆ ಮನ್ ಕೀ ಬಾತ್ ಮಾಡಿ ಅವರಷ್ಟಕ್ಕೆ ಅವರೆ ಮಾತನಾಡಿಕೊಳ್ಳುತ್ತಿದ್ದಾರೆ. 9 ವರ್ಷಗಳ ಅಧಿಕಾರಾವಧಿಯಲ್ಲಿ ಇಲ್ಲಿವರೆಗೆ ಒಂದೇ ಒಂದು ಪತ್ರಿಕಾಗೋಷ್ಠಿ ನಡೆಸಿ ಸರ್ಕಾರದ ಸಾಧನೆ ಬಗ್ಗೆ ಹಾಗೂ ಜನರ ಅಹವಾಲು ಸ್ವೀಕರಿಸಿಲ್ಲ. ಹಲವು ದೇಶಗಳಿಗೆ ಪ್ರಧಾನಿ ಮೋದಿ ಹೋಗಿ ಬಂದಿದ್ದಾರೆ ಅದರ ಪ್ರತಿಫಲವೇನು, 20ಲಕ್ಷ ಕೋಟಿ ಕೋವಿಡ್ ಪರಿಹಾರ ಧನ ಎಲ್ಲಿಗೆ ಹೋಯ್ತು..? ಪ್ರಧಾನಿ ಕೇರ್ಸ್ ಫಂಡ್ ಖಾತೆಗೆ ಜನರು ಹಾಕಿದ ದುಡ್ಡಿಗೆ ಲೆಕ್ಕವನ್ನು ನೀಡಿಲ್ಲ. ರೈಲು, ಬ್ಯಾಂಕ್, ಬಂದರು, ಶಿಕ್ಷಣ, ಆರೋಗ್ಯ ಕ್ಷೇತ್ರಗಳನ್ನು ಖಾಸಗೀಕರಣ ಮಾಡಲು ಹೊರಟ್ಟಿದ್ದಾರೆ.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…