ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಸಾಮಾನ್ಯ ಜನ, ರೈತ, ಕಾರ್ಮಿಕ ವಿರೋಧಿ ಯೋಜನೆ, ನೀತಿಗಳನ್ನು ಜಾರಿಗೊಳಿಸಿರುವುದನ್ನು ವಿರೋಧಿಸಿ ಆಗಸ್ಟ್ 1ರಿಂದ 14 ರವರೆಗೆ ದೇಶವ್ಯಾಪಿ ಪ್ರಚಾರಾಂದೋಲನಕ್ಕೆ ಕರೆ ನೀಡಲಾಗಿದೆ. ಆಗಸ್ಟ್ 14ರ ಸಂಜೆಯಿಂದ ಆ.15ರ ಬೆಳಗಿನ ಜಾವವರೆಗೆ ಸರ್ಕಾರದ ಜನ ವಿರೋಧಿ ನೀತಿಗಳನ್ನು ತಿಳಿಸಲು ಅಹೋರಾತ್ರಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ರೈತ ಪ್ರಾಂತ ಸಂಘದ ಜಿಲ್ಲಾ ಕಾರ್ಯದರ್ಶಿ ಆರ್.ಚಂದ್ರತೇಜಸ್ವಿ ತಿಳಿಸಿದರು.
ನಗರದಲ್ಲಿ ಸಿಐಟಿಯು, ಎಐಕೆಎಸ್, ಪ್ರಾಂತ ರೈತ ಸಂಘ ಸೇರಿದಂತೆ ವಿವಿಧ ಸಂಘಟನೆಗಳಿಂದ ಸೋಮವಾರ ಹಮ್ಮಿಕೊಂಡಿದ್ದ ಕೇಂದ್ರ ಸರ್ಕಾರದ ಜನ ವಿರೋಧಿ ನಿತಿಗಳ ಪ್ರಚಾರೋಂದಲನದಲ್ಲಿ ಅವರು ಮಾತನಾಡಿ, ದೇಶಾದ್ಯಂತ ಪೆಟ್ರೋಲ್, ಡೀಸೆಲ್, ಹಾಲು, ಅಡುಗೆ ಎಣ್ಣೆ, ತರಕಾರಿ, ಗ್ಯಾಸ್ ಸೇರಿದಂತೆ ದಿನನಿತ್ಯ ಬಳಕೆಯ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ, ತೆರಿಗೆ ವಿಧಿಸಿ ಬಡ, ಮಧ್ಯಮ ವರ್ಗದ ಜನರ ಜೀವನದ ಜೊತೆ ಪ್ರಧಾನಿ ನರೇಂದ್ರ ಮೊದಿ ಸರ್ಕಾರ ಚೆಲ್ಲಾಟವಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಪಿಎ.ವೆಂಕಟೇಶ ಮಾತನಾಡಿ, ಪ್ರಧಾನಿ ಮೋದಿ ಅವರು ಜನರ ಕಷ್ಟಗಳನ್ನು ನೇರವಾಗಿ ಕೇಳದೆ ಮನ್ ಕೀ ಬಾತ್ ಮಾಡಿ ಅವರಷ್ಟಕ್ಕೆ ಅವರೆ ಮಾತನಾಡಿಕೊಳ್ಳುತ್ತಿದ್ದಾರೆ. 9 ವರ್ಷಗಳ ಅಧಿಕಾರಾವಧಿಯಲ್ಲಿ ಇಲ್ಲಿವರೆಗೆ ಒಂದೇ ಒಂದು ಪತ್ರಿಕಾಗೋಷ್ಠಿ ನಡೆಸಿ ಸರ್ಕಾರದ ಸಾಧನೆ ಬಗ್ಗೆ ಹಾಗೂ ಜನರ ಅಹವಾಲು ಸ್ವೀಕರಿಸಿಲ್ಲ. ಹಲವು ದೇಶಗಳಿಗೆ ಪ್ರಧಾನಿ ಮೋದಿ ಹೋಗಿ ಬಂದಿದ್ದಾರೆ ಅದರ ಪ್ರತಿಫಲವೇನು, 20ಲಕ್ಷ ಕೋಟಿ ಕೋವಿಡ್ ಪರಿಹಾರ ಧನ ಎಲ್ಲಿಗೆ ಹೋಯ್ತು..? ಪ್ರಧಾನಿ ಕೇರ್ಸ್ ಫಂಡ್ ಖಾತೆಗೆ ಜನರು ಹಾಕಿದ ದುಡ್ಡಿಗೆ ಲೆಕ್ಕವನ್ನು ನೀಡಿಲ್ಲ. ರೈಲು, ಬ್ಯಾಂಕ್, ಬಂದರು, ಶಿಕ್ಷಣ, ಆರೋಗ್ಯ ಕ್ಷೇತ್ರಗಳನ್ನು ಖಾಸಗೀಕರಣ ಮಾಡಲು ಹೊರಟ್ಟಿದ್ದಾರೆ.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…