Categories: ವಿಜಯನಗರ

ಕೇಂದ್ರ ಸರ್ಕಾರದಿಂದ ಪ್ರತೀ ವರ್ಷ ನಮಗೆ ನಷ್ಟ ಆಗುತ್ತಿದೆ- ಸಿಎಂ ಸಿದ್ದರಾಮಯ್ಯ

ಚುನಾವಣೆ ವೇಳೆ ನಾವು ಕೊಟ್ಟಿದ್ದ ಭರವಸೆಗಳಲ್ಲಿ ಐದು ಗ್ಯಾರಂಟಿಗಳ ಜೊತೆಗೆ 142 ಭರವಸೆಗಳನ್ನು ಎರಡು ವರ್ಷಗಳಲ್ಲಿ ಪೂರೈಸಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ ಅಷ್ಟೂ ಭರವಸೆಗಳನ್ನು ಈಡೇರಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ರಾಜ್ಯ ಸರ್ಕಾರ ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಆಯೋಜಿಸಿದ್ದ “ಪ್ರಗತಿಯತ್ತ ಕರ್ನಾಟಕ- ಸಮರ್ಪಣೆ ಸಂಕಲ್ಪ” ಸಮಾವೇಶದಲ್ಲಿ 1,11,111 ಮಂದಿಗೆ ಹಕ್ಕುಪತ್ರ ವಿತರಣೆ ಮಾಡಿ, ಉಕ್ಕಿನ ಮಹಿಳೆ ಇಂದಿರಾ ಗಾಂಧಿಯವರ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ಮೊದಲ ಬಾರಿ ಮುಖ್ಯಮಂತ್ರಿಯಾಗಿ ನಾವು ನೀಡಿದ್ದ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದಲ್ಲದೆ, ಪ್ರಣಾಳಿಕೆಯಲ್ಲಿ ಘೋಷಿಸದ ಹೊಸದಾದ 30 ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೊಳಿಸಿದ್ದೇವೆ. ಬಿಜೆಪಿ ಏಕೆ ತಾನು ಕೊಟ್ಟಿದ್ದ ಭರವಸೆಗಳನ್ನು ಈಡೇರಿಸದೆ, ಜನರ ಎದುರು ಸುಳ್ಳು ಹೇಳಿಕೊಂಡು ತಿರುಗುತ್ತಿದೆ? ಎಂದು ಪ್ರಶ್ನೆ ಮಾಡಿದರು.

ನಮ್ಮ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟ. ಸರ್ವರನ್ನೂ ಸಮಾನವಾಗಿ ಗೌರವಿಸುವ ರಾಜ್ಯ. ಸಂವಿಧಾನದ ಅಡಿಯಲ್ಲಿ ಸರ್ವ ಧರ್ಮಗಳನ್ನೂ ಸಮಾನವಾಗಿ ಕಾಣಬೇಕು. ನಾವು ಇದೇ ಮೌಲ್ಯವನ್ನು ಪಾಲಿಸುತ್ತಿದ್ದೇವೆ ಎಂದರು.

ಕೇಂದ್ರ ಸರ್ಕಾರದಿಂದ ಪ್ರತೀ ವರ್ಷ ನಮಗೆ ನಷ್ಟ ಆಗುತ್ತಿದೆ. ನಾವು ಪ್ರತೀ ವರ್ಷ 4.5 ಲಕ್ಷ ಕೋಟಿ ತೆರಿಗೆ ರೂಪದಲ್ಲಿ ಕೊಟ್ಟರೆ ನಮಗೆ ವಾಪಾಸ್ ಬರುವುದು ಒಂದು ರೂಪಾಯಿಗೆ 14 ಪೈಸೆ ಮಾತ್ರ. ಇದರಿಂದ ಒಕ್ಕೂಟ ವ್ಯವಸ್ಥೆಯ ಘನತೆ ಹಾಳು ಮಾಡುತ್ತಿದ್ದಾರೆ ಎಂದು ಹೇಳಿದರು.

ಕೇಂದ್ರ ಪ್ರಾಯೋಜಿತ ಯೋಜನೆಗಳಿಗೂ ಕೇಂದ್ರದಿಂದ ಪೂರ್ತಿ ಅನುದಾನ ಬಂದೇ ಇಲ್ಲ. ಕೇಂದ್ರದ ಯೋಜನೆಗಳಿಗೆ ರಾಜ್ಯ ಸರ್ಕಾರ ತನ್ನ ಪಾಲನ್ನು ಪೂರ್ತಿ ಕೊಟ್ಟಿದೆ. ಆದರೆ ಕೇಂದ್ರ ಸರ್ಕಾರ ತಮ್ನ ಪಾಲನ್ನು ಕೊಡದೆ ಉಳಿಸಿಕೊಂಡು ಅನ್ಯಾಯ ಮಾಡುತ್ತಿದೆ ಎಂದರು.

15 ನೇ ಹಣಕಾಸು ಆಯೋಗದ ಕಾಲದಲ್ಲಿ ರಾಜ್ಯಕ್ಕೆ ಕೇಂದ್ರ ಮಾಡಿರುವ ಅನ್ಯಾಯ ನಿಮಗೆಲ್ಲಾ ಗೊತ್ತೇ ಇದೆ. ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಿದ್ದ ₹5,300 ಕೋಟಿ ಹಣದಲ್ಲಿ ಬಿಡಿಗಾಸನ್ನೂ ಬಿಡುಗಡೆ ಮಾಡಲಿಲ್ಲ. ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸುವುದಾಗಿ ಭರವಸೆ ನೀಡಿದರು. ಇದನ್ನೂ ಈಡೇರಿಸಲಿಲ್ಲ ಎಂದು ಹೇಳಿದರು.

ಈಗ ಜೆಡಿಎಸ್ ಮತ್ತು ಬಿಜೆಪಿ ಕೂಡಿಕೊಂಡಿವೆ. ಆದರೆ ಬಿಜೆಪಿ ಇದುವರೆಗೂ ಸ್ವಂತ ಶಕ್ತಿಯಿಂದ ಅಧಿಕಾರಕ್ಕೆ ಬರಲೇ ಇಲ್ಲ. ಆಪರೇಷನ್ ಕಮಲ ಮಾಡಿ ಅಧಿಕಾರಕ್ಕೆ ಬಂದದ್ದು ಬಿಟ್ಟರೆ ರಾಜ್ಯದಲ್ಲಿ ಬಿಜೆಪಿ ಇವತ್ತಿನವರೆಗೂ ಜನರಿಂದ ಬಹುಮತ ಗಳಿಸಿ ಆಯ್ಕೆಯೇ ಆಗಿಲ್ಲ ಎಂದರು.

ಹಿಂದಿನ ಬಿಜೆಪಿ ಸರ್ಕಾರದ ಮೇಲೆ 40% ಕಮಿಷನ್ ಆರೋಪ ಇತ್ತು. ನಾವು ಇದರ ವಿರುದ್ಧ ಹೋರಾಟ ಮಾಡಿದೆವು, ಅಧಿಕಾರಕ್ಕೆ ಬಂದ ಬಳಿಕ ತನಿಖೆಗೆ ನಾಗಮೋಹನ್ ದಾಸ್ ಸಮಿತಿ ರಚಿಸಿದೆವು. ಸಮಿತಿ ಕೊಟ್ಟಿರುವ ವರದಿಯಲ್ಲಿ ಕಮಿಷನ್ ವ್ಯವಹಾರ ಸಾಬೀತಾಗಿದೆ ಎಂದರು.

1.22 ಕೋಟಿ ಕುಟುಂಬಗಳ ಯಜಮಾನಿಯರಿಗೆ ಗೃಹಲಕ್ಷ್ಮಿ ಯೋಜನೆಯಡಿ 2000 ರೂಪಾಯಿ ಕೊಡುತ್ತಿದ್ದೇವೆ. 1.30 ಕೋಟಿ ಕುಟುಂಬಗಳಿಗೆ ಗೃಹಜ್ಯೋತಿ ಯೋಜನೆಯಡಿ ಅನುಕೂಲ ಒದಗಿಸಿದ್ದೇವೆ. ಜೊತೆಗೆ ಇಡೀ ರಾಜ್ಯದ ಮಹಿಳೆಯರಿಗೆ ಶಕ್ತಿ ಯೋಜನೆಯಡಿ ಉಚಿತ ಪ್ರಯಾಣದ ವ್ಯವಸ್ಥೆ ಮಾಡಿದ್ದೇವೆ ಎಂದು ತಿಳಿಸಿದರು.

2014 ರಲ್ಲಿ ₹28,000 ಇದ್ದ ಚಿನ್ನದ ಬೆಲೆ ಈಗ ಲಕ್ಷ ಆಗಿದೆ. ಗ್ಯಾಸ್ ಬೆಲೆ ₹414 ಇದ್ದದ್ದು ಈಗ ₹850 ಆಗಿದೆ. ಡೀಸೆಲ್, ಪೆಟ್ರೋಲ್, ಎಣ್ಣೆ, ಕಾಳು, ಬೇಳೆ, ರಸಗೊಬ್ಬರ ಎಲ್ಲದರ ಬೆಲೆಯನ್ನೂ ಆಕಾಶಕ್ಕೆ ಏರಿಸಿರುವ ಕೇಂದ್ರದ ನರೇಂದ್ರ ಮೋದಿ ಅವರ ಸರ್ಕಾರದ ವಿರುದ್ಧ ಜನಾಕ್ರೋಶ ಇದೆಯೇ ಹೊರತು ನಮ್ಮ ಸರ್ಕಾರದ ವಿರುದ್ಧ ಅಲ್ಲ. ಜನ ನಮ್ಮ ಪರವಾಗಿಯೇ ಇದ್ದಾರೆ. ಹೀಗಾಗಿ ಬಿಜೆಪಿ ಹಮ್ಮಿಕೊಂಡಿರುವ ಜನಾಕ್ರೋಶ ಕಾರ್ಯಕ್ರಮವೇ ನಕಲಿ ಎಂದರು.

ರಾಜ್ಯದ ಜನತೆ ನಮ್ಮ ಮಾಲೀಕರು. ನಮ್ಮ ಮಾಲೀಕರಿಗೆ ನಾವು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ. ನಿಮ್ಮ ಆಶೀರ್ವಾದ ಇರುವವರೆಗೂ ಬಿಜೆಪಿಯ ಸುಳ್ಳಿನ ರಾಶಿಗೆ ನಾವು ಹೆದರುವ, ಅಂಜುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

Ramesh Babu

Journalist

Share
Published by
Ramesh Babu

Recent Posts

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

2 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

8 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

22 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

23 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

24 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

24 hours ago