ಕೇಂದ್ರ ಸರ್ಕಾರದಿಂದ ವೈಜ್ಞಾನಿಕ, ಪಾರದರ್ಶಕ ಜಾತಿಗಣತಿ ನಡೆಯಲಿದೆ- ವಿಧಾನ ಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್

ರಾಷ್ಟ್ರೀಯ ಜನಗಣತಿಯೊಂದಿಗೆ ಜಾತಿ ಗಣತಿಯನ್ನೂ ಕೂಡ ನಡೆಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಕೇಂದ್ರ ಸರ್ಕಾರದ ಜಾತಿ ಗಣತಿ ನಿರ್ಧಾರಕ್ಕೆ ಕರ್ನಾಟಕದಲ್ಲಿ ಬಹುತೇಕ ವಿಭಿನ್ನ ಪ್ರತಿಕ್ರಿಯೆಗಳು ವ್ಯಕ್ತವಾಗಿತ್ತಿವೆ.

ಸಾಮಾಜಿಕ-ಆರ್ಥಿಕ ಅಂಶಗಳನ್ನು ಒಳಗೊಂಡ ಗಣತಿಯ ಅಗತ್ಯವನ್ನು ಕಾಂಗ್ರೆಸ್ ನಾಯಕರು ಒತ್ತಿ ಹೇಳಿದರೆ, ಬಿಜೆಪಿ ನಾಯಕರು ಈ ನಿರ್ಧಾರವನ್ನು ಸ್ವಾಗತಿಸಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಈ ವಿಷಯದಲ್ಲಿ ತೀವ್ರವಾದ ರಾಜಕೀಯ ವಾಗ್ವಾದಗಳು ನಡೆಯುತ್ತಿವೆ. ಜಾತಿ ಗಣತಿಯ ಪಾರದರ್ಶಕತೆ ಮತ್ತು ಅದರ ಅನುಷ್ಠಾನದ ಬಗ್ಗೆ ಪ್ರಶ್ನೆಗಳು ಎದ್ದಿವೆ.

ಈ ಕುರಿತು ನಗರದಲ್ಲಿನ ಜಿಲ್ಲಾ ಬಿಜೆಪಿ‌ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ವಿಧಾನ ಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಮಾತನಾಡಿ, ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತ ಮಾಡುತ್ತೇವೆ. ಕೇಂದ್ರ ಸರ್ಕಾರದಿಂದ ವೈಜ್ಞಾನಿಕ ಗಣತಿ ನಡೆಯಲಿದೆ. ಕಾಂಗ್ರೆಸ್ ಯಾವತ್ತೂ ಜಾತಿಗಣತಿ ಮಾಡಲು ಯತ್ನಿಸಿಲ್ಲ. ಈಗ ಪ್ರಧಾನಿ ಮೋದಿ ಸಂಪುಟ ತೀರ್ಮಾನ ಮಾಡಿದೆ ಎಂದು ಹೇಳಿದರು.

ಕರ್ನಾಟಕದಲ್ಲಿ ಜಾತಿಗಣತಿ ಬಹಳ ಗೊಂದಲ ಆಗಿತ್ತು. ರಾಜ್ಯ ಸರ್ಕಾರ ಕದ್ದುಮುಚ್ಚಿ ಜಾತಿಗಣತಿಯನ್ನ ಮಾಡಿತ್ತು. ಎಲ್ಲ ಜಾತಿಗಳ ಗಣತಿ ಮಾಡಿಲ್ಲ ಎಂದು ದೂರು ಬಂದಿತ್ತು. ಆದ್ದರಿಂದ ಕೇಂದ್ರ ಸರ್ಕಾರ ವೈಜ್ಞಾನಿಕ, ಸ್ಪಷ್ಟವಾಗಿ ಜಾತಿ ಸಮೀಕ್ಷೆ ಮಾಡುತ್ತೆ ಎಂದರು.

ಭಾರತದಲ್ಲಿಜಾತಿಗಣತಿಗೆ ಶತಮಾನಗಳ ಇತಿಹಾಸವಿದೆ. ದೇಶದಲ್ಲಿ ಮೊದಲ ಬಾರಿಗೆ 1891ರಲ್ಲಿ ಜಾತಿಗಣತಿ ಮಾಡಲಾಯಿತು. ಇದಾದ ಬಳಿಕ ಬ್ರಿಟಿಷರು 10 ವರ್ಷಕ್ಕೊಮ್ಮೆ ಜಾತಿಗಣತಿ ನಡೆಸಿದರು. 1931 ರವರೆಗೂ ಜಾತಿಗಣತಿ ಮುಂದುವರಿಯಿತು. ಆದರೆ, ಅದೇ ವರ್ಷ ಜಾತಿಗಣತಿಯನ್ನು ರದ್ದುಪಡಿಸಲಾಯಿತು. ಭಾರತದಲ್ಲಿ 1931ರಿಂದ ಇದುವರೆಗೆ ಜಾತಿವಾರು ಸಮೀಕ್ಷೆ ಅಥವಾ ಗಣತಿ ಮಾಡಿಲ್ಲ. ಜನಗಣತಿ ವೇಳೆಯೇ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರನ್ನು ಹೊರತುಪಡಿಸಿ 1931ರಿಂದ ಬೇರೆ ಸಮುದಾಯದವರ ಜಾತಿ ಕುರಿತ ಮಾಹಿತಿಯನ್ನು ಸಂಗ್ರಹಿಸಿಲ್ಲ ಎಂದರು.

ಜಾತಿಗಣತಿಯಿಂದ ತಳ ಸಮುದಾಯದವರಿಗೂ ಮೀಸಲು ಹಾಗೂ ಸರಕಾರದ ಯೋಜನೆ ನೀಡಲು ಸಾಧ್ಯ ಸಮುದಾಯಗಳ ಸಾಮಾಜಿಕ-ಆರ್ಥಿಕ ಸ್ಥಿತಿಯನ್ನು ನಿಖರವಾಗಿ ತಿಳಿದು, ಸಮಾನ ಅವಕಾಶ ನೀಡುವುದು ಜಾತಿ, ಒಳಜಾತಿಗಳಲ್ಲೇ ಇರುವ ಅಸಮಾನತೆ, ಕೆಲವೇ ಜಾತಿಗೆ ಸೌಕರ್ಯಗಳು ಸೀಮಿತವಾಗಿರುವುದನ್ನು ತಡೆಯಬಹುದು ಎಂದು ತಿಳಿಸಿದರು.

ಈ ವೇಳೆ ನಿವೃತ್ತ ಐಎಎಸ್ ಅಧಿಕಾರಿ ಲಕ್ಷ್ಮಿ ನಾರಾಯಣ್, ಬಿಜೆಪಿ ಮಹಿಳಾ ಮೋರ್ಚಾ ಮಾಜಿ ರಾಜ್ಯ ಕಾರ್ಯದರ್ಶಿ ಕು.ನಿಶ್ವಿತಾ, ಎಸ್ಸಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜಣ್ಣ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಎಚ್.ರಾಮಕೃಷ್ಣಪ್ಪ, ಮಂಜುನಾಥ್ ಸೇರಿದಂತೆ ಇತರರು‌ ಉಪಸ್ಥಿತರಿದ್ದರು.

Ramesh Babu

Journalist

Recent Posts

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

3 hours ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

5 hours ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

11 hours ago

ಹೃದಯ ವೈಶಾಲ್ಯತೆ ಮತ್ತು ಶುದ್ಧತೆ…

" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…

12 hours ago

ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ: ಪಿಡಿಒ ಗೌರಮ್ಮ

ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…

24 hours ago

ಅರ್ಹ ರೈತರು ಸೌಲಭ್ಯಗಳನ್ನು ಪಡೆದುಕೊಳ್ಳಿ : ಪಿಡಿಒ ರಂಜಿತ

ಚಿಕ್ಕನಾಯಕನಹಳ್ಳಿ ಸೆ.08: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

24 hours ago