ಕೇಂದ್ರ ಸರ್ಕಾರದಿಂದ ವೈಜ್ಞಾನಿಕ, ಪಾರದರ್ಶಕ ಜಾತಿಗಣತಿ ನಡೆಯಲಿದೆ- ವಿಧಾನ ಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್

ರಾಷ್ಟ್ರೀಯ ಜನಗಣತಿಯೊಂದಿಗೆ ಜಾತಿ ಗಣತಿಯನ್ನೂ ಕೂಡ ನಡೆಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಕೇಂದ್ರ ಸರ್ಕಾರದ ಜಾತಿ ಗಣತಿ ನಿರ್ಧಾರಕ್ಕೆ ಕರ್ನಾಟಕದಲ್ಲಿ ಬಹುತೇಕ ವಿಭಿನ್ನ ಪ್ರತಿಕ್ರಿಯೆಗಳು ವ್ಯಕ್ತವಾಗಿತ್ತಿವೆ.

ಸಾಮಾಜಿಕ-ಆರ್ಥಿಕ ಅಂಶಗಳನ್ನು ಒಳಗೊಂಡ ಗಣತಿಯ ಅಗತ್ಯವನ್ನು ಕಾಂಗ್ರೆಸ್ ನಾಯಕರು ಒತ್ತಿ ಹೇಳಿದರೆ, ಬಿಜೆಪಿ ನಾಯಕರು ಈ ನಿರ್ಧಾರವನ್ನು ಸ್ವಾಗತಿಸಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಈ ವಿಷಯದಲ್ಲಿ ತೀವ್ರವಾದ ರಾಜಕೀಯ ವಾಗ್ವಾದಗಳು ನಡೆಯುತ್ತಿವೆ. ಜಾತಿ ಗಣತಿಯ ಪಾರದರ್ಶಕತೆ ಮತ್ತು ಅದರ ಅನುಷ್ಠಾನದ ಬಗ್ಗೆ ಪ್ರಶ್ನೆಗಳು ಎದ್ದಿವೆ.

ಈ ಕುರಿತು ನಗರದಲ್ಲಿನ ಜಿಲ್ಲಾ ಬಿಜೆಪಿ‌ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ವಿಧಾನ ಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಮಾತನಾಡಿ, ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತ ಮಾಡುತ್ತೇವೆ. ಕೇಂದ್ರ ಸರ್ಕಾರದಿಂದ ವೈಜ್ಞಾನಿಕ ಗಣತಿ ನಡೆಯಲಿದೆ. ಕಾಂಗ್ರೆಸ್ ಯಾವತ್ತೂ ಜಾತಿಗಣತಿ ಮಾಡಲು ಯತ್ನಿಸಿಲ್ಲ. ಈಗ ಪ್ರಧಾನಿ ಮೋದಿ ಸಂಪುಟ ತೀರ್ಮಾನ ಮಾಡಿದೆ ಎಂದು ಹೇಳಿದರು.

ಕರ್ನಾಟಕದಲ್ಲಿ ಜಾತಿಗಣತಿ ಬಹಳ ಗೊಂದಲ ಆಗಿತ್ತು. ರಾಜ್ಯ ಸರ್ಕಾರ ಕದ್ದುಮುಚ್ಚಿ ಜಾತಿಗಣತಿಯನ್ನ ಮಾಡಿತ್ತು. ಎಲ್ಲ ಜಾತಿಗಳ ಗಣತಿ ಮಾಡಿಲ್ಲ ಎಂದು ದೂರು ಬಂದಿತ್ತು. ಆದ್ದರಿಂದ ಕೇಂದ್ರ ಸರ್ಕಾರ ವೈಜ್ಞಾನಿಕ, ಸ್ಪಷ್ಟವಾಗಿ ಜಾತಿ ಸಮೀಕ್ಷೆ ಮಾಡುತ್ತೆ ಎಂದರು.

ಭಾರತದಲ್ಲಿಜಾತಿಗಣತಿಗೆ ಶತಮಾನಗಳ ಇತಿಹಾಸವಿದೆ. ದೇಶದಲ್ಲಿ ಮೊದಲ ಬಾರಿಗೆ 1891ರಲ್ಲಿ ಜಾತಿಗಣತಿ ಮಾಡಲಾಯಿತು. ಇದಾದ ಬಳಿಕ ಬ್ರಿಟಿಷರು 10 ವರ್ಷಕ್ಕೊಮ್ಮೆ ಜಾತಿಗಣತಿ ನಡೆಸಿದರು. 1931 ರವರೆಗೂ ಜಾತಿಗಣತಿ ಮುಂದುವರಿಯಿತು. ಆದರೆ, ಅದೇ ವರ್ಷ ಜಾತಿಗಣತಿಯನ್ನು ರದ್ದುಪಡಿಸಲಾಯಿತು. ಭಾರತದಲ್ಲಿ 1931ರಿಂದ ಇದುವರೆಗೆ ಜಾತಿವಾರು ಸಮೀಕ್ಷೆ ಅಥವಾ ಗಣತಿ ಮಾಡಿಲ್ಲ. ಜನಗಣತಿ ವೇಳೆಯೇ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರನ್ನು ಹೊರತುಪಡಿಸಿ 1931ರಿಂದ ಬೇರೆ ಸಮುದಾಯದವರ ಜಾತಿ ಕುರಿತ ಮಾಹಿತಿಯನ್ನು ಸಂಗ್ರಹಿಸಿಲ್ಲ ಎಂದರು.

ಜಾತಿಗಣತಿಯಿಂದ ತಳ ಸಮುದಾಯದವರಿಗೂ ಮೀಸಲು ಹಾಗೂ ಸರಕಾರದ ಯೋಜನೆ ನೀಡಲು ಸಾಧ್ಯ ಸಮುದಾಯಗಳ ಸಾಮಾಜಿಕ-ಆರ್ಥಿಕ ಸ್ಥಿತಿಯನ್ನು ನಿಖರವಾಗಿ ತಿಳಿದು, ಸಮಾನ ಅವಕಾಶ ನೀಡುವುದು ಜಾತಿ, ಒಳಜಾತಿಗಳಲ್ಲೇ ಇರುವ ಅಸಮಾನತೆ, ಕೆಲವೇ ಜಾತಿಗೆ ಸೌಕರ್ಯಗಳು ಸೀಮಿತವಾಗಿರುವುದನ್ನು ತಡೆಯಬಹುದು ಎಂದು ತಿಳಿಸಿದರು.

ಈ ವೇಳೆ ನಿವೃತ್ತ ಐಎಎಸ್ ಅಧಿಕಾರಿ ಲಕ್ಷ್ಮಿ ನಾರಾಯಣ್, ಬಿಜೆಪಿ ಮಹಿಳಾ ಮೋರ್ಚಾ ಮಾಜಿ ರಾಜ್ಯ ಕಾರ್ಯದರ್ಶಿ ಕು.ನಿಶ್ವಿತಾ, ಎಸ್ಸಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜಣ್ಣ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಎಚ್.ರಾಮಕೃಷ್ಣಪ್ಪ, ಮಂಜುನಾಥ್ ಸೇರಿದಂತೆ ಇತರರು‌ ಉಪಸ್ಥಿತರಿದ್ದರು.

Ramesh Babu

Journalist

Recent Posts

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

4 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

8 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

9 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

10 hours ago

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

20 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

21 hours ago