ಕೊನೆಗೂ ಬಿಜೆಪಿಯವರು ಬೆಲೆ ಏರಿಕೆಯ ಬಗ್ಗೆ ಮಾತನಾಡುವ ಮನಸು ಮಾಡಿದ್ದು ಉತ್ತಮ ಬೆಳವಣಿಗೆ. ಬಿಜೆಪಿಯವರು ಅಸಲಿಗೆ ಮಾತನಾಡಬೇಕಿರುವುದು, ಜನಾಕ್ರೋಶ ಪ್ರತಿಭಟನೆ ನಡೆಸಬೇಕಿರುವುದು ಕೇಂದ್ರ ಸರ್ಕಾರದ ವಿರುದ್ಧ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
– ಕಳೆದ ಒಂದು ವರ್ಷದಲ್ಲಿ ಒಂದು ಸಾಮಾನ್ಯ ಸಸ್ಯಾಹಾರಿ ಊಟದ ಬೆಲೆ 57%ನಷ್ಟು ದುಬಾರಿಯಾಗಿದೆ.
– ತರಕಾರಿ ಹಾಗೂ ಬೇಳೆ ಕಾಳುಗಳು ಸೇರಿದಂತೆ ಅಡುಗೆಗೆ ಸಂಬಂಧಿಸಿದ ವಸ್ತುಗಳ ಬೆಲೆಗಳು ಒಂದೂವರೆ ಪಟ್ಟು ಹೆಚ್ಚಾಗಿವೆ.
– ಪ್ರಸ್ತುತ ಕಚ್ಚಾ ತೈಲದ ಬೆಲೆ 34% ಇಳಿಕೆಯಾಗಿದೆ, ಆದರೆ ದೇಶದ ನಾಗರಿಕರಿಗೆ ಪೆಟ್ರೋಲ್ ಹಾಗೂ ಡೀಸೆಲ್ ಮೇಲೆ ದುಬಾರಿ ಸುಂಕ, ತೆರಿಗೆಗಳನ್ನು ವಿಧಿಸಿ ₹36.58 ಲಕ್ಷ ಕೋಟಿ ಸಂಗ್ರಹಿಸಿದೆ ಕೇಂದ್ರ ಸರ್ಕಾರ.
– ಆರೋಗ್ಯ ಕ್ಷೇತ್ರದ ಹಣದುಬ್ಬರ 14% ಹೆಚ್ಚಿದೆ, ಸಾಮಾನ್ಯ ಔಷಧಗಳ ಬೆಲೆಯೂ ಅಧಿಕವಾಗಿ ಹೆಚ್ಚಳವಾಗಿದೆ.
– ಜೀವ ವಿಮೆ, ಅರೋಗ್ಯ ವಿಮೆಗಳ ಮೇಲೂ 18% ಜಿಎಸ್ಟಿ ಹೇರಲಾಗಿದೆ, ಮೊದಲ ಬಾರಿಗೆ ಕೃಷಿ ಉತ್ಪನ್ನಗಳಿಗೂ ಜಿಎಸ್ಟಿ ಹಾಕಲಾಗಿದೆ.
– ಏಪ್ರಿಲ್ ನಿಂದ ಎಟಿಎಂ ಶುಲ್ಕಗಳನ್ನೂ ಏರಿಸುತ್ತಿದೆ ಕೇಂದ್ರ ಸರ್ಕಾರ.
– 2018ರಿಂದ 2024ರವರೆಗೆ ಕನಿಷ್ಠ ಠೇವಣಿ ನಿರ್ವಹಿಸದ ದಂಡವಾಗಿ ಬಡ ಜನರಿಂದ 43,500 ಕೋಟಿ ಹಣ ಲೂಟಿಗೈದಿದೆ.
– ಅಕ್ಕಿ ಸೇರಿದಂತೆ ಎಲ್ಲಾ ಅಗತ್ಯ ವಸ್ತುಗಳ ಬೆಲೆಯಲ್ಲಿ 70% ರಿಂದ 80%ನಷ್ಟು ದುಪ್ಪಟಾಗಿವೆ.
– 100 ಕೋಟಿಗೂ ಅಧಿಕ ಭಾರತೀಯರಿಗೆ ಅಗತ್ಯ ಸೇವೆಗಳಿಗೆ ಖರ್ಚು ಮಾಡಲಾಗದಷ್ಟು ಖರೀದಿ ಸಾಮರ್ಥ್ಯ ಕುಸಿದಿದೆ ಎಂದು ಬ್ಲೂಮ್ ವರದಿ ಮಾಡಿದೆ.
– ಟೋಲ್ ದರ ಏರಿಕೆಯು ಭಾರತೀಯರನ್ನು ಕಂಗಾಲಾಗಿಸಿದೆ, ಗ್ಯಾಸ್ ಸಿಲಿಂಡರ್ ದರ ಜನರನ್ನು ಒಲೆ ಹಚ್ಚದೆಯೇ ಸುಡುತ್ತಿದೆ!
ಕೇಂದ್ರ ಸರ್ಕಾರದ ಕಳಪೆ ಆರ್ಥಿಕ ನೀತಿಯಿಂದಾಗಿ ಹಣದುಬ್ಬರವು ಗಣನೀಯ ಏರಿಕೆಯಾಗಿದೆ, ಇದಕ್ಕೆ ಸರಿ ಹೊಂದಿಸಲು ಅನಿವಾರ್ಯವಾಗಿ ನಮ್ಮ ಸರ್ಕಾರ ಕೆಲವೊಂದಿಷ್ಟು ಬೆಲೆಗಳನ್ನು ಪರಿಷ್ಕರಿಸಿದೆ. ಆದರೆ ಅದಕ್ಕೆ ಮೂಲ ಕಾರಣ ಕೇಂದ್ರ ಸರ್ಕಾರ. ರಾಜ್ಯ ಬಿಜೆಪಿ ನಾಯಕರು ಜನರ ಎದೆಗೆ ಕಿವಿಗೊಟ್ಟರೆ ಆ ಆಕ್ರೋಶ ಕೇಳಿಸಲಿದೆ ಎಂದು ಕಿಡಿಕಾರಿದ್ದಾರೆ.
ಉಡುಪಿ : ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ನಡೆದ ಲೋಕಾಯುಕ್ತ ದಾಳಿಯ ಭಾಗವಾಗಿ ಉಡುಪಿ ಜಿಲ್ಲಾ ಅಬಕಾರಿ ಡಿಸಿ ಶ್ರೀನಿವಾಸ್ ಟಿ.ಎಂ…
ಬೆಂಗಳೂರು: ಸಿಲಿಕಾನ್ ಸಿಟಿಯ ವರ್ತೂರಿನಲ್ಲಿ ಭಯಾನಕ ಕೊಲೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪ್ರೀತಿಯ ಹೆಸರಿನಲ್ಲಿ ಮದುವೆಯ ಸತ್ಯವನ್ನು ಮುಚ್ಚಿಟ್ಟು, ಲಿವ್-ಇನ್…
ಜವಳಿ ಅಭಿವೃದ್ಧಿ ಆಯುಕ್ತರು ಮತ್ತು ಕೈಮಗ್ಗ ಮತ್ತು ಜವಳಿ ನಿರ್ದೇಶಕರಾಗಿ ಎ.ಬಿ.ಬಸವರಾಜು ಅವರು ನೇಮಕಗೊಂಡಿದ್ದಾರೆ... ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿದ್ದ ಎ.ಬಿ…
ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ ಆರಂಭವಾಗಿದ್ದು, ನಗರಸಭೆಯಿಂದ ವಾರಕ್ಕೊಮ್ಮೆ ಕೇವಲ ಅರ್ಧ ಗಂಟೆ ನೀರು ಬಿಡುತ್ತಿರುವುದು ಸರಿಯಲ್ಲ.…
ಕೊಲ್ಲಿ ರಾಷ್ಟ್ರಗಳ ಯುದ್ಧದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಮುಂದಿಟ್ಟುಕೊಂಡು ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಅಂತಹ ಗ್ಯಾಸ್…
ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸಪ್ಲೆ, ಕಾಲೇಜುಗಳ ಬಳಿ ಸುಖಾ ಸುಮ್ಮನೆ ಓಡಾಟ, ಏರಿಯಾಗಳಲ್ಲಿ ಹವಾ ಮೇಂಟೈನ್ ಮಾಡೋದು, ಹಫ್ತಾ ವಸೂಲಿ…