ಕೇಂದ್ರ ಸರ್ಕಾರದ ಕಳಪೆ ಆರ್ಥಿಕ ನೀತಿಯಿಂದಾಗಿ ಹಣದುಬ್ಬರವು ಗಣನೀಯ ಏರಿಕೆ- ಸಚಿವ ಪ್ರಿಯಾಂಕ್ ಖರ್ಗೆ ಕಿಡಿ

ಕೊನೆಗೂ ಬಿಜೆಪಿಯವರು ಬೆಲೆ ಏರಿಕೆಯ ಬಗ್ಗೆ ಮಾತನಾಡುವ ಮನಸು ಮಾಡಿದ್ದು ಉತ್ತಮ ಬೆಳವಣಿಗೆ. ಬಿಜೆಪಿಯವರು ಅಸಲಿಗೆ ಮಾತನಾಡಬೇಕಿರುವುದು, ಜನಾಕ್ರೋಶ ಪ್ರತಿಭಟನೆ ನಡೆಸಬೇಕಿರುವುದು ಕೇಂದ್ರ ಸರ್ಕಾರದ ವಿರುದ್ಧ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ‌ ಹಾಗೂ ಐಟಿ ಬಿಟಿ‌ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

– ಕಳೆದ ಒಂದು ವರ್ಷದಲ್ಲಿ ಒಂದು ಸಾಮಾನ್ಯ ಸಸ್ಯಾಹಾರಿ ಊಟದ ಬೆಲೆ 57%ನಷ್ಟು ದುಬಾರಿಯಾಗಿದೆ.

– ತರಕಾರಿ ಹಾಗೂ ಬೇಳೆ ಕಾಳುಗಳು ಸೇರಿದಂತೆ ಅಡುಗೆಗೆ ಸಂಬಂಧಿಸಿದ ವಸ್ತುಗಳ ಬೆಲೆಗಳು ಒಂದೂವರೆ ಪಟ್ಟು ಹೆಚ್ಚಾಗಿವೆ.

– ಪ್ರಸ್ತುತ ಕಚ್ಚಾ ತೈಲದ ಬೆಲೆ 34% ಇಳಿಕೆಯಾಗಿದೆ, ಆದರೆ ದೇಶದ ನಾಗರಿಕರಿಗೆ ಪೆಟ್ರೋಲ್ ಹಾಗೂ ಡೀಸೆಲ್ ಮೇಲೆ ದುಬಾರಿ ಸುಂಕ, ತೆರಿಗೆಗಳನ್ನು ವಿಧಿಸಿ ₹36.58 ಲಕ್ಷ ಕೋಟಿ ಸಂಗ್ರಹಿಸಿದೆ ಕೇಂದ್ರ ಸರ್ಕಾರ.

– ಆರೋಗ್ಯ ಕ್ಷೇತ್ರದ ಹಣದುಬ್ಬರ 14% ಹೆಚ್ಚಿದೆ, ಸಾಮಾನ್ಯ ಔಷಧಗಳ ಬೆಲೆಯೂ ಅಧಿಕವಾಗಿ ಹೆಚ್ಚಳವಾಗಿದೆ.

– ಜೀವ ವಿಮೆ, ಅರೋಗ್ಯ ವಿಮೆಗಳ ಮೇಲೂ 18% ಜಿಎಸ್ಟಿ ಹೇರಲಾಗಿದೆ, ಮೊದಲ ಬಾರಿಗೆ ಕೃಷಿ ಉತ್ಪನ್ನಗಳಿಗೂ ಜಿಎಸ್ಟಿ ಹಾಕಲಾಗಿದೆ.

– ಏಪ್ರಿಲ್ ನಿಂದ ಎಟಿಎಂ ಶುಲ್ಕಗಳನ್ನೂ ಏರಿಸುತ್ತಿದೆ ಕೇಂದ್ರ ಸರ್ಕಾರ.

– 2018ರಿಂದ 2024ರವರೆಗೆ ಕನಿಷ್ಠ ಠೇವಣಿ ನಿರ್ವಹಿಸದ ದಂಡವಾಗಿ ಬಡ ಜನರಿಂದ 43,500 ಕೋಟಿ ಹಣ ಲೂಟಿಗೈದಿದೆ.

– ಅಕ್ಕಿ ಸೇರಿದಂತೆ ಎಲ್ಲಾ ಅಗತ್ಯ ವಸ್ತುಗಳ ಬೆಲೆಯಲ್ಲಿ 70% ರಿಂದ 80%ನಷ್ಟು ದುಪ್ಪಟಾಗಿವೆ.

– 100 ಕೋಟಿಗೂ ಅಧಿಕ ಭಾರತೀಯರಿಗೆ ಅಗತ್ಯ ಸೇವೆಗಳಿಗೆ ಖರ್ಚು ಮಾಡಲಾಗದಷ್ಟು ಖರೀದಿ ಸಾಮರ್ಥ್ಯ ಕುಸಿದಿದೆ ಎಂದು ಬ್ಲೂಮ್ ವರದಿ ಮಾಡಿದೆ.

– ಟೋಲ್ ದರ ಏರಿಕೆಯು ಭಾರತೀಯರನ್ನು ಕಂಗಾಲಾಗಿಸಿದೆ, ಗ್ಯಾಸ್ ಸಿಲಿಂಡರ್ ದರ ಜನರನ್ನು ಒಲೆ ಹಚ್ಚದೆಯೇ ಸುಡುತ್ತಿದೆ!

ಕೇಂದ್ರ ಸರ್ಕಾರದ ಕಳಪೆ ಆರ್ಥಿಕ ನೀತಿಯಿಂದಾಗಿ ಹಣದುಬ್ಬರವು ಗಣನೀಯ ಏರಿಕೆಯಾಗಿದೆ, ಇದಕ್ಕೆ ಸರಿ ಹೊಂದಿಸಲು ಅನಿವಾರ್ಯವಾಗಿ ನಮ್ಮ ಸರ್ಕಾರ ಕೆಲವೊಂದಿಷ್ಟು ಬೆಲೆಗಳನ್ನು ಪರಿಷ್ಕರಿಸಿದೆ. ಆದರೆ ಅದಕ್ಕೆ ಮೂಲ ಕಾರಣ ಕೇಂದ್ರ ಸರ್ಕಾರ. ರಾಜ್ಯ ಬಿಜೆಪಿ ನಾಯಕರು ಜನರ ಎದೆಗೆ ಕಿವಿಗೊಟ್ಟರೆ ಆ ಆಕ್ರೋಶ ಕೇಳಿಸಲಿದೆ ಎಂದು ಕಿಡಿಕಾರಿದ್ದಾರೆ.

Ramesh Babu

Journalist

Recent Posts

ಧರ್ಮಸ್ಥಳ ಕೇಸ್ ವಿಚಾರ: ತನಿಖೆ ಬೇಗ ಮುಗಿಸಿ ನ್ಯಾಯ ಕೊಡಿಸಿ ಭಾರತೀಯ ಪರಂಪರೆಯನ್ನ ಉಳಿಸಬೇಕು- ಸಚಿವ ವಿ.ಸೋಮಣ್ಣ

ಧರ್ಮಸ್ಥಳ ಕೇಸ್ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ವಿ.ಸೋಮಣ್ಣ ಪ್ರತಿಕ್ರಿಯೆ ನೀಡಿ, ಧರ್ಮಸ್ಥಳ ವಿಶ್ವದಲ್ಲೇ ಪವಿತ್ರವಾದ ಸ್ಥಳ. ಅವಷೇಶ ಮತ್ತೊಂದು…

25 minutes ago

ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರ ಖಾತೆಗೆ 20ನೇ ಕಂತಿನ ಹಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾಡೋನಹಳ್ಳಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ…

42 minutes ago

ಪ್ರಜ್ವಲ್ ರೇವಣ್ಣ ಕೇಸ್: ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ: ಜೀವನ‌ಪರ್ಯಂತ ಸೆರೆಮನೆ ವಾಸ

ಮೈಸೂರಿನ ಕೆಆರ್​​ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ  ದೋಷಿ ಎಂದು…

3 hours ago

ಸೂಫಿಗಳ ಸಾಹಿತ್ಯ ಸಂಸ್ಕೃತಿ ಅನುಸಂಧಾನ ಕಾರ್ಯಕ್ರಮ

ಬೆಂಗಳೂರು ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಕೇಂದ್ರದಲ್ಲಿ ನಡೆದ ಕರ್ನಾಟಕ ಸೂಫಿಗಳ ಸಾಹಿತ್ಯ ಸಂಸ್ಕೃತಿ ಅನುಸಂಧಾನ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ…

12 hours ago

ಪ್ರಥಮ್ ಜೀವ ಬೆದರಿಕೆ ಪ್ರಕರಣ: ವಿಚಾರಣೆ ಬಳಿಕ ರಕ್ಷಕ್ ಬುಲೆಟ್ ಫಸ್ಟ್ ರಿಯಾಕ್ಟ್

ನಟ ಪ್ರಥಮ್ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸ್ ನೋಟಿಸ್ ನ್ನು ರಕ್ಷಕ್ ಬುಲೆಟ್ ಗೆ ನೀಡಲಾಗುತ್ತು.…

22 hours ago

ನಟ ಪ್ರಥಮ್ ಜೀವ ಬೆದರಿಕೆ ಪ್ರಕರಣ: ವಿಚಾರಣೆಗೆ ಹಾಜರಾದ ರಕ್ಷಕ್ ಬುಲೆಟ್: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಿಚಾರಣೆ

ನಟ ಪ್ರಥಮ್ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ರಕ್ಷಕ್ ಬುಲೆಟ್ ಇಂದು ವಿಚಾರಣೆಗೆ ಹಾಜರಾಗಿದ್ದರು. ಇನ್ಸ್ ಪೆಕ್ಟರ್ ಸಾಧಿಕ್…

23 hours ago