ಕೊನೆಗೂ ಬಿಜೆಪಿಯವರು ಬೆಲೆ ಏರಿಕೆಯ ಬಗ್ಗೆ ಮಾತನಾಡುವ ಮನಸು ಮಾಡಿದ್ದು ಉತ್ತಮ ಬೆಳವಣಿಗೆ. ಬಿಜೆಪಿಯವರು ಅಸಲಿಗೆ ಮಾತನಾಡಬೇಕಿರುವುದು, ಜನಾಕ್ರೋಶ ಪ್ರತಿಭಟನೆ ನಡೆಸಬೇಕಿರುವುದು ಕೇಂದ್ರ ಸರ್ಕಾರದ ವಿರುದ್ಧ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
– ಕಳೆದ ಒಂದು ವರ್ಷದಲ್ಲಿ ಒಂದು ಸಾಮಾನ್ಯ ಸಸ್ಯಾಹಾರಿ ಊಟದ ಬೆಲೆ 57%ನಷ್ಟು ದುಬಾರಿಯಾಗಿದೆ.
– ತರಕಾರಿ ಹಾಗೂ ಬೇಳೆ ಕಾಳುಗಳು ಸೇರಿದಂತೆ ಅಡುಗೆಗೆ ಸಂಬಂಧಿಸಿದ ವಸ್ತುಗಳ ಬೆಲೆಗಳು ಒಂದೂವರೆ ಪಟ್ಟು ಹೆಚ್ಚಾಗಿವೆ.
– ಪ್ರಸ್ತುತ ಕಚ್ಚಾ ತೈಲದ ಬೆಲೆ 34% ಇಳಿಕೆಯಾಗಿದೆ, ಆದರೆ ದೇಶದ ನಾಗರಿಕರಿಗೆ ಪೆಟ್ರೋಲ್ ಹಾಗೂ ಡೀಸೆಲ್ ಮೇಲೆ ದುಬಾರಿ ಸುಂಕ, ತೆರಿಗೆಗಳನ್ನು ವಿಧಿಸಿ ₹36.58 ಲಕ್ಷ ಕೋಟಿ ಸಂಗ್ರಹಿಸಿದೆ ಕೇಂದ್ರ ಸರ್ಕಾರ.
– ಆರೋಗ್ಯ ಕ್ಷೇತ್ರದ ಹಣದುಬ್ಬರ 14% ಹೆಚ್ಚಿದೆ, ಸಾಮಾನ್ಯ ಔಷಧಗಳ ಬೆಲೆಯೂ ಅಧಿಕವಾಗಿ ಹೆಚ್ಚಳವಾಗಿದೆ.
– ಜೀವ ವಿಮೆ, ಅರೋಗ್ಯ ವಿಮೆಗಳ ಮೇಲೂ 18% ಜಿಎಸ್ಟಿ ಹೇರಲಾಗಿದೆ, ಮೊದಲ ಬಾರಿಗೆ ಕೃಷಿ ಉತ್ಪನ್ನಗಳಿಗೂ ಜಿಎಸ್ಟಿ ಹಾಕಲಾಗಿದೆ.
– ಏಪ್ರಿಲ್ ನಿಂದ ಎಟಿಎಂ ಶುಲ್ಕಗಳನ್ನೂ ಏರಿಸುತ್ತಿದೆ ಕೇಂದ್ರ ಸರ್ಕಾರ.
– 2018ರಿಂದ 2024ರವರೆಗೆ ಕನಿಷ್ಠ ಠೇವಣಿ ನಿರ್ವಹಿಸದ ದಂಡವಾಗಿ ಬಡ ಜನರಿಂದ 43,500 ಕೋಟಿ ಹಣ ಲೂಟಿಗೈದಿದೆ.
– ಅಕ್ಕಿ ಸೇರಿದಂತೆ ಎಲ್ಲಾ ಅಗತ್ಯ ವಸ್ತುಗಳ ಬೆಲೆಯಲ್ಲಿ 70% ರಿಂದ 80%ನಷ್ಟು ದುಪ್ಪಟಾಗಿವೆ.
– 100 ಕೋಟಿಗೂ ಅಧಿಕ ಭಾರತೀಯರಿಗೆ ಅಗತ್ಯ ಸೇವೆಗಳಿಗೆ ಖರ್ಚು ಮಾಡಲಾಗದಷ್ಟು ಖರೀದಿ ಸಾಮರ್ಥ್ಯ ಕುಸಿದಿದೆ ಎಂದು ಬ್ಲೂಮ್ ವರದಿ ಮಾಡಿದೆ.
– ಟೋಲ್ ದರ ಏರಿಕೆಯು ಭಾರತೀಯರನ್ನು ಕಂಗಾಲಾಗಿಸಿದೆ, ಗ್ಯಾಸ್ ಸಿಲಿಂಡರ್ ದರ ಜನರನ್ನು ಒಲೆ ಹಚ್ಚದೆಯೇ ಸುಡುತ್ತಿದೆ!
ಕೇಂದ್ರ ಸರ್ಕಾರದ ಕಳಪೆ ಆರ್ಥಿಕ ನೀತಿಯಿಂದಾಗಿ ಹಣದುಬ್ಬರವು ಗಣನೀಯ ಏರಿಕೆಯಾಗಿದೆ, ಇದಕ್ಕೆ ಸರಿ ಹೊಂದಿಸಲು ಅನಿವಾರ್ಯವಾಗಿ ನಮ್ಮ ಸರ್ಕಾರ ಕೆಲವೊಂದಿಷ್ಟು ಬೆಲೆಗಳನ್ನು ಪರಿಷ್ಕರಿಸಿದೆ. ಆದರೆ ಅದಕ್ಕೆ ಮೂಲ ಕಾರಣ ಕೇಂದ್ರ ಸರ್ಕಾರ. ರಾಜ್ಯ ಬಿಜೆಪಿ ನಾಯಕರು ಜನರ ಎದೆಗೆ ಕಿವಿಗೊಟ್ಟರೆ ಆ ಆಕ್ರೋಶ ಕೇಳಿಸಲಿದೆ ಎಂದು ಕಿಡಿಕಾರಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…
ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…
ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…
ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…
ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…
ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ…