ಕೇಂದ್ರ ಸರ್ಕಾರದ ಕಳಪೆ ಆರ್ಥಿಕ ನೀತಿಯಿಂದಾಗಿ ಹಣದುಬ್ಬರವು ಗಣನೀಯ ಏರಿಕೆ- ಸಚಿವ ಪ್ರಿಯಾಂಕ್ ಖರ್ಗೆ ಕಿಡಿ

ಕೊನೆಗೂ ಬಿಜೆಪಿಯವರು ಬೆಲೆ ಏರಿಕೆಯ ಬಗ್ಗೆ ಮಾತನಾಡುವ ಮನಸು ಮಾಡಿದ್ದು ಉತ್ತಮ ಬೆಳವಣಿಗೆ. ಬಿಜೆಪಿಯವರು ಅಸಲಿಗೆ ಮಾತನಾಡಬೇಕಿರುವುದು, ಜನಾಕ್ರೋಶ ಪ್ರತಿಭಟನೆ ನಡೆಸಬೇಕಿರುವುದು ಕೇಂದ್ರ ಸರ್ಕಾರದ ವಿರುದ್ಧ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ‌ ಹಾಗೂ ಐಟಿ ಬಿಟಿ‌ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

– ಕಳೆದ ಒಂದು ವರ್ಷದಲ್ಲಿ ಒಂದು ಸಾಮಾನ್ಯ ಸಸ್ಯಾಹಾರಿ ಊಟದ ಬೆಲೆ 57%ನಷ್ಟು ದುಬಾರಿಯಾಗಿದೆ.

– ತರಕಾರಿ ಹಾಗೂ ಬೇಳೆ ಕಾಳುಗಳು ಸೇರಿದಂತೆ ಅಡುಗೆಗೆ ಸಂಬಂಧಿಸಿದ ವಸ್ತುಗಳ ಬೆಲೆಗಳು ಒಂದೂವರೆ ಪಟ್ಟು ಹೆಚ್ಚಾಗಿವೆ.

– ಪ್ರಸ್ತುತ ಕಚ್ಚಾ ತೈಲದ ಬೆಲೆ 34% ಇಳಿಕೆಯಾಗಿದೆ, ಆದರೆ ದೇಶದ ನಾಗರಿಕರಿಗೆ ಪೆಟ್ರೋಲ್ ಹಾಗೂ ಡೀಸೆಲ್ ಮೇಲೆ ದುಬಾರಿ ಸುಂಕ, ತೆರಿಗೆಗಳನ್ನು ವಿಧಿಸಿ ₹36.58 ಲಕ್ಷ ಕೋಟಿ ಸಂಗ್ರಹಿಸಿದೆ ಕೇಂದ್ರ ಸರ್ಕಾರ.

– ಆರೋಗ್ಯ ಕ್ಷೇತ್ರದ ಹಣದುಬ್ಬರ 14% ಹೆಚ್ಚಿದೆ, ಸಾಮಾನ್ಯ ಔಷಧಗಳ ಬೆಲೆಯೂ ಅಧಿಕವಾಗಿ ಹೆಚ್ಚಳವಾಗಿದೆ.

– ಜೀವ ವಿಮೆ, ಅರೋಗ್ಯ ವಿಮೆಗಳ ಮೇಲೂ 18% ಜಿಎಸ್ಟಿ ಹೇರಲಾಗಿದೆ, ಮೊದಲ ಬಾರಿಗೆ ಕೃಷಿ ಉತ್ಪನ್ನಗಳಿಗೂ ಜಿಎಸ್ಟಿ ಹಾಕಲಾಗಿದೆ.

– ಏಪ್ರಿಲ್ ನಿಂದ ಎಟಿಎಂ ಶುಲ್ಕಗಳನ್ನೂ ಏರಿಸುತ್ತಿದೆ ಕೇಂದ್ರ ಸರ್ಕಾರ.

– 2018ರಿಂದ 2024ರವರೆಗೆ ಕನಿಷ್ಠ ಠೇವಣಿ ನಿರ್ವಹಿಸದ ದಂಡವಾಗಿ ಬಡ ಜನರಿಂದ 43,500 ಕೋಟಿ ಹಣ ಲೂಟಿಗೈದಿದೆ.

– ಅಕ್ಕಿ ಸೇರಿದಂತೆ ಎಲ್ಲಾ ಅಗತ್ಯ ವಸ್ತುಗಳ ಬೆಲೆಯಲ್ಲಿ 70% ರಿಂದ 80%ನಷ್ಟು ದುಪ್ಪಟಾಗಿವೆ.

– 100 ಕೋಟಿಗೂ ಅಧಿಕ ಭಾರತೀಯರಿಗೆ ಅಗತ್ಯ ಸೇವೆಗಳಿಗೆ ಖರ್ಚು ಮಾಡಲಾಗದಷ್ಟು ಖರೀದಿ ಸಾಮರ್ಥ್ಯ ಕುಸಿದಿದೆ ಎಂದು ಬ್ಲೂಮ್ ವರದಿ ಮಾಡಿದೆ.

– ಟೋಲ್ ದರ ಏರಿಕೆಯು ಭಾರತೀಯರನ್ನು ಕಂಗಾಲಾಗಿಸಿದೆ, ಗ್ಯಾಸ್ ಸಿಲಿಂಡರ್ ದರ ಜನರನ್ನು ಒಲೆ ಹಚ್ಚದೆಯೇ ಸುಡುತ್ತಿದೆ!

ಕೇಂದ್ರ ಸರ್ಕಾರದ ಕಳಪೆ ಆರ್ಥಿಕ ನೀತಿಯಿಂದಾಗಿ ಹಣದುಬ್ಬರವು ಗಣನೀಯ ಏರಿಕೆಯಾಗಿದೆ, ಇದಕ್ಕೆ ಸರಿ ಹೊಂದಿಸಲು ಅನಿವಾರ್ಯವಾಗಿ ನಮ್ಮ ಸರ್ಕಾರ ಕೆಲವೊಂದಿಷ್ಟು ಬೆಲೆಗಳನ್ನು ಪರಿಷ್ಕರಿಸಿದೆ. ಆದರೆ ಅದಕ್ಕೆ ಮೂಲ ಕಾರಣ ಕೇಂದ್ರ ಸರ್ಕಾರ. ರಾಜ್ಯ ಬಿಜೆಪಿ ನಾಯಕರು ಜನರ ಎದೆಗೆ ಕಿವಿಗೊಟ್ಟರೆ ಆ ಆಕ್ರೋಶ ಕೇಳಿಸಲಿದೆ ಎಂದು ಕಿಡಿಕಾರಿದ್ದಾರೆ.

Ramesh Babu

Journalist

Recent Posts

ಮಳೆ ಕೈಕೊಟ್ಟಿತು, ರಾಗಿ ಕೈಬಿಟ್ಟಿತು: ಬೆಳೆಗೇ ಟ್ರ್ಯಾಕ್ಟರ್ ಹರಿಸಿದ ರೈತ: ದೊಡ್ಡಬಳ್ಳಾಪುರವನ್ನೂ ಬರಪೀಡಿತ ತಾಲೂಕು ಎಂದು ಘೋಷಿಸಲು ಆಗ್ರಹ: 3.5 ಎಕರೆ ರಾಗಿ ಬೆಳೆ ನಾಶ

ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…

9 hours ago

ಚಿಕ್ಕನಹಳ್ಳಿ ಡೇರಿಗೆ 2.07 ಲಕ್ಷ ನಿವ್ವಳ ಲಾಭ: ಹೈನುಗಾರಿಕೆ ರೈತರ ಆರ್ಥಿಕ ಮೂಲ- ಸಿ.ಅಮರೇಶ್

ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…

14 hours ago

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

1 day ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

2 days ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

2 days ago

ಹೃದಯ ವೈಶಾಲ್ಯತೆ ಮತ್ತು ಶುದ್ಧತೆ…

" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…

2 days ago