ಕೇಂದ್ರ ಸರ್ಕಾರದ ಕಳಪೆ ಆರ್ಥಿಕ ನೀತಿಯಿಂದಾಗಿ ಹಣದುಬ್ಬರವು ಗಣನೀಯ ಏರಿಕೆ- ಸಚಿವ ಪ್ರಿಯಾಂಕ್ ಖರ್ಗೆ ಕಿಡಿ

ಕೊನೆಗೂ ಬಿಜೆಪಿಯವರು ಬೆಲೆ ಏರಿಕೆಯ ಬಗ್ಗೆ ಮಾತನಾಡುವ ಮನಸು ಮಾಡಿದ್ದು ಉತ್ತಮ ಬೆಳವಣಿಗೆ. ಬಿಜೆಪಿಯವರು ಅಸಲಿಗೆ ಮಾತನಾಡಬೇಕಿರುವುದು, ಜನಾಕ್ರೋಶ ಪ್ರತಿಭಟನೆ ನಡೆಸಬೇಕಿರುವುದು ಕೇಂದ್ರ ಸರ್ಕಾರದ ವಿರುದ್ಧ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ‌ ಹಾಗೂ ಐಟಿ ಬಿಟಿ‌ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

– ಕಳೆದ ಒಂದು ವರ್ಷದಲ್ಲಿ ಒಂದು ಸಾಮಾನ್ಯ ಸಸ್ಯಾಹಾರಿ ಊಟದ ಬೆಲೆ 57%ನಷ್ಟು ದುಬಾರಿಯಾಗಿದೆ.

– ತರಕಾರಿ ಹಾಗೂ ಬೇಳೆ ಕಾಳುಗಳು ಸೇರಿದಂತೆ ಅಡುಗೆಗೆ ಸಂಬಂಧಿಸಿದ ವಸ್ತುಗಳ ಬೆಲೆಗಳು ಒಂದೂವರೆ ಪಟ್ಟು ಹೆಚ್ಚಾಗಿವೆ.

– ಪ್ರಸ್ತುತ ಕಚ್ಚಾ ತೈಲದ ಬೆಲೆ 34% ಇಳಿಕೆಯಾಗಿದೆ, ಆದರೆ ದೇಶದ ನಾಗರಿಕರಿಗೆ ಪೆಟ್ರೋಲ್ ಹಾಗೂ ಡೀಸೆಲ್ ಮೇಲೆ ದುಬಾರಿ ಸುಂಕ, ತೆರಿಗೆಗಳನ್ನು ವಿಧಿಸಿ ₹36.58 ಲಕ್ಷ ಕೋಟಿ ಸಂಗ್ರಹಿಸಿದೆ ಕೇಂದ್ರ ಸರ್ಕಾರ.

– ಆರೋಗ್ಯ ಕ್ಷೇತ್ರದ ಹಣದುಬ್ಬರ 14% ಹೆಚ್ಚಿದೆ, ಸಾಮಾನ್ಯ ಔಷಧಗಳ ಬೆಲೆಯೂ ಅಧಿಕವಾಗಿ ಹೆಚ್ಚಳವಾಗಿದೆ.

– ಜೀವ ವಿಮೆ, ಅರೋಗ್ಯ ವಿಮೆಗಳ ಮೇಲೂ 18% ಜಿಎಸ್ಟಿ ಹೇರಲಾಗಿದೆ, ಮೊದಲ ಬಾರಿಗೆ ಕೃಷಿ ಉತ್ಪನ್ನಗಳಿಗೂ ಜಿಎಸ್ಟಿ ಹಾಕಲಾಗಿದೆ.

– ಏಪ್ರಿಲ್ ನಿಂದ ಎಟಿಎಂ ಶುಲ್ಕಗಳನ್ನೂ ಏರಿಸುತ್ತಿದೆ ಕೇಂದ್ರ ಸರ್ಕಾರ.

– 2018ರಿಂದ 2024ರವರೆಗೆ ಕನಿಷ್ಠ ಠೇವಣಿ ನಿರ್ವಹಿಸದ ದಂಡವಾಗಿ ಬಡ ಜನರಿಂದ 43,500 ಕೋಟಿ ಹಣ ಲೂಟಿಗೈದಿದೆ.

– ಅಕ್ಕಿ ಸೇರಿದಂತೆ ಎಲ್ಲಾ ಅಗತ್ಯ ವಸ್ತುಗಳ ಬೆಲೆಯಲ್ಲಿ 70% ರಿಂದ 80%ನಷ್ಟು ದುಪ್ಪಟಾಗಿವೆ.

– 100 ಕೋಟಿಗೂ ಅಧಿಕ ಭಾರತೀಯರಿಗೆ ಅಗತ್ಯ ಸೇವೆಗಳಿಗೆ ಖರ್ಚು ಮಾಡಲಾಗದಷ್ಟು ಖರೀದಿ ಸಾಮರ್ಥ್ಯ ಕುಸಿದಿದೆ ಎಂದು ಬ್ಲೂಮ್ ವರದಿ ಮಾಡಿದೆ.

– ಟೋಲ್ ದರ ಏರಿಕೆಯು ಭಾರತೀಯರನ್ನು ಕಂಗಾಲಾಗಿಸಿದೆ, ಗ್ಯಾಸ್ ಸಿಲಿಂಡರ್ ದರ ಜನರನ್ನು ಒಲೆ ಹಚ್ಚದೆಯೇ ಸುಡುತ್ತಿದೆ!

ಕೇಂದ್ರ ಸರ್ಕಾರದ ಕಳಪೆ ಆರ್ಥಿಕ ನೀತಿಯಿಂದಾಗಿ ಹಣದುಬ್ಬರವು ಗಣನೀಯ ಏರಿಕೆಯಾಗಿದೆ, ಇದಕ್ಕೆ ಸರಿ ಹೊಂದಿಸಲು ಅನಿವಾರ್ಯವಾಗಿ ನಮ್ಮ ಸರ್ಕಾರ ಕೆಲವೊಂದಿಷ್ಟು ಬೆಲೆಗಳನ್ನು ಪರಿಷ್ಕರಿಸಿದೆ. ಆದರೆ ಅದಕ್ಕೆ ಮೂಲ ಕಾರಣ ಕೇಂದ್ರ ಸರ್ಕಾರ. ರಾಜ್ಯ ಬಿಜೆಪಿ ನಾಯಕರು ಜನರ ಎದೆಗೆ ಕಿವಿಗೊಟ್ಟರೆ ಆ ಆಕ್ರೋಶ ಕೇಳಿಸಲಿದೆ ಎಂದು ಕಿಡಿಕಾರಿದ್ದಾರೆ.

Ramesh Babu

Journalist

Recent Posts

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

2 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

4 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

7 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

21 hours ago

ಕೃಷಿ ಹೊಂಡಗಳಲ್ಲಿ ಅನಾಹುತ ತಡೆಗೆ ಜಾಗೃತಿ ಸಭೆ: ಸುರಕ್ಷತೆಗೆ ಕಟ್ಟುನಿಟ್ಟಿನ ಸೂಚನೆ

ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…

1 day ago

0% ಭ್ರಷ್ಟಾಚಾರ: ಯಾರು ಕೂಡ ಸರ್ಕಾರಿ ಕಚೇರಿಗಳಲ್ಲಿ 10 ರೂಪಾಯಿ ಕೂಡಾ ಲಂಚ ನೀಡಬಾರದು- ಸಿಎಂ‌ ಡಿಕೆಶಿ

ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್‌ಪಿ, ಸಿಇಒ, ಡಿಎಫ್‌ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…

1 day ago