ಕೇಂದ್ರ ಸರ್ಕಾರದ ಕಳಪೆ ಆರ್ಥಿಕ ನೀತಿಯಿಂದಾಗಿ ಹಣದುಬ್ಬರವು ಗಣನೀಯ ಏರಿಕೆ- ಸಚಿವ ಪ್ರಿಯಾಂಕ್ ಖರ್ಗೆ ಕಿಡಿ

ಕೊನೆಗೂ ಬಿಜೆಪಿಯವರು ಬೆಲೆ ಏರಿಕೆಯ ಬಗ್ಗೆ ಮಾತನಾಡುವ ಮನಸು ಮಾಡಿದ್ದು ಉತ್ತಮ ಬೆಳವಣಿಗೆ. ಬಿಜೆಪಿಯವರು ಅಸಲಿಗೆ ಮಾತನಾಡಬೇಕಿರುವುದು, ಜನಾಕ್ರೋಶ ಪ್ರತಿಭಟನೆ ನಡೆಸಬೇಕಿರುವುದು ಕೇಂದ್ರ ಸರ್ಕಾರದ ವಿರುದ್ಧ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ‌ ಹಾಗೂ ಐಟಿ ಬಿಟಿ‌ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

– ಕಳೆದ ಒಂದು ವರ್ಷದಲ್ಲಿ ಒಂದು ಸಾಮಾನ್ಯ ಸಸ್ಯಾಹಾರಿ ಊಟದ ಬೆಲೆ 57%ನಷ್ಟು ದುಬಾರಿಯಾಗಿದೆ.

– ತರಕಾರಿ ಹಾಗೂ ಬೇಳೆ ಕಾಳುಗಳು ಸೇರಿದಂತೆ ಅಡುಗೆಗೆ ಸಂಬಂಧಿಸಿದ ವಸ್ತುಗಳ ಬೆಲೆಗಳು ಒಂದೂವರೆ ಪಟ್ಟು ಹೆಚ್ಚಾಗಿವೆ.

– ಪ್ರಸ್ತುತ ಕಚ್ಚಾ ತೈಲದ ಬೆಲೆ 34% ಇಳಿಕೆಯಾಗಿದೆ, ಆದರೆ ದೇಶದ ನಾಗರಿಕರಿಗೆ ಪೆಟ್ರೋಲ್ ಹಾಗೂ ಡೀಸೆಲ್ ಮೇಲೆ ದುಬಾರಿ ಸುಂಕ, ತೆರಿಗೆಗಳನ್ನು ವಿಧಿಸಿ ₹36.58 ಲಕ್ಷ ಕೋಟಿ ಸಂಗ್ರಹಿಸಿದೆ ಕೇಂದ್ರ ಸರ್ಕಾರ.

– ಆರೋಗ್ಯ ಕ್ಷೇತ್ರದ ಹಣದುಬ್ಬರ 14% ಹೆಚ್ಚಿದೆ, ಸಾಮಾನ್ಯ ಔಷಧಗಳ ಬೆಲೆಯೂ ಅಧಿಕವಾಗಿ ಹೆಚ್ಚಳವಾಗಿದೆ.

– ಜೀವ ವಿಮೆ, ಅರೋಗ್ಯ ವಿಮೆಗಳ ಮೇಲೂ 18% ಜಿಎಸ್ಟಿ ಹೇರಲಾಗಿದೆ, ಮೊದಲ ಬಾರಿಗೆ ಕೃಷಿ ಉತ್ಪನ್ನಗಳಿಗೂ ಜಿಎಸ್ಟಿ ಹಾಕಲಾಗಿದೆ.

– ಏಪ್ರಿಲ್ ನಿಂದ ಎಟಿಎಂ ಶುಲ್ಕಗಳನ್ನೂ ಏರಿಸುತ್ತಿದೆ ಕೇಂದ್ರ ಸರ್ಕಾರ.

– 2018ರಿಂದ 2024ರವರೆಗೆ ಕನಿಷ್ಠ ಠೇವಣಿ ನಿರ್ವಹಿಸದ ದಂಡವಾಗಿ ಬಡ ಜನರಿಂದ 43,500 ಕೋಟಿ ಹಣ ಲೂಟಿಗೈದಿದೆ.

– ಅಕ್ಕಿ ಸೇರಿದಂತೆ ಎಲ್ಲಾ ಅಗತ್ಯ ವಸ್ತುಗಳ ಬೆಲೆಯಲ್ಲಿ 70% ರಿಂದ 80%ನಷ್ಟು ದುಪ್ಪಟಾಗಿವೆ.

– 100 ಕೋಟಿಗೂ ಅಧಿಕ ಭಾರತೀಯರಿಗೆ ಅಗತ್ಯ ಸೇವೆಗಳಿಗೆ ಖರ್ಚು ಮಾಡಲಾಗದಷ್ಟು ಖರೀದಿ ಸಾಮರ್ಥ್ಯ ಕುಸಿದಿದೆ ಎಂದು ಬ್ಲೂಮ್ ವರದಿ ಮಾಡಿದೆ.

– ಟೋಲ್ ದರ ಏರಿಕೆಯು ಭಾರತೀಯರನ್ನು ಕಂಗಾಲಾಗಿಸಿದೆ, ಗ್ಯಾಸ್ ಸಿಲಿಂಡರ್ ದರ ಜನರನ್ನು ಒಲೆ ಹಚ್ಚದೆಯೇ ಸುಡುತ್ತಿದೆ!

ಕೇಂದ್ರ ಸರ್ಕಾರದ ಕಳಪೆ ಆರ್ಥಿಕ ನೀತಿಯಿಂದಾಗಿ ಹಣದುಬ್ಬರವು ಗಣನೀಯ ಏರಿಕೆಯಾಗಿದೆ, ಇದಕ್ಕೆ ಸರಿ ಹೊಂದಿಸಲು ಅನಿವಾರ್ಯವಾಗಿ ನಮ್ಮ ಸರ್ಕಾರ ಕೆಲವೊಂದಿಷ್ಟು ಬೆಲೆಗಳನ್ನು ಪರಿಷ್ಕರಿಸಿದೆ. ಆದರೆ ಅದಕ್ಕೆ ಮೂಲ ಕಾರಣ ಕೇಂದ್ರ ಸರ್ಕಾರ. ರಾಜ್ಯ ಬಿಜೆಪಿ ನಾಯಕರು ಜನರ ಎದೆಗೆ ಕಿವಿಗೊಟ್ಟರೆ ಆ ಆಕ್ರೋಶ ಕೇಳಿಸಲಿದೆ ಎಂದು ಕಿಡಿಕಾರಿದ್ದಾರೆ.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

9 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

9 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

12 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

13 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

17 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

21 hours ago