Categories: ಕೋಲಾರ

ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಮೇ.20 ರಂದು ದೇಶಾದ್ಯಂತ ಪ್ರತಿಭಟನೆ

ಕೋಲಾರ: ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ಹಾಗೂ ಬಂಡವಾಳಶಾಹಿ ಪರವಾದ ನಿಲುವಿನ ವಿರುದ್ಧ ವಿವಿಧ ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ ದೇಶಾದ್ಯಂತ ಎಲ್ಲಾ ತಾಲೂಕು ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಿಐಟಿಯು ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸುಂದರಂ

ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯು (ಜೆಸಿಟಿಯು) ವತಿಯಿಂದ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಕಾರ್ಮಿಕರ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಬಂಡವಾಳಶಾಹಿಯು ಕಾರ್ಮಿಕರ ಶ್ರಮಕ್ಕೆ ತಕ್ಕಂತೆ ವೇತನ ನೀಡಬೇಕು. ಆದರೆ, ಕೇಂದ್ರ ಸರ್ಕಾರವು ಬಂಡವಾಳಶಾಹಿಗಳ ಪರವಾದ ಕಾನೂನು ಜಾರಿಗೆ ತಂದು ಕಾರ್ಮಿಕರನ್ನು ಶೋಷಿಸುತ್ತಿದೆ ಎಂದು ಕಿಡಿಕಾರಿದರು.

ಕೇಂದ್ರ ಸರ್ಕಾರವು ಕಾರ್ಮಿಕ ವರ್ಗವನ್ನು ಬಂಡವಾಳಶಾಹಿ ವ್ಯವಸ್ಥೆಗೆ ಶರಣಾಗುವಂತೆ ಮಾಡಿದೆ. ಕಾರ್ಪೊರೇಟ್‌ ಕಂಪನಿಗಳ ಕೈಗೊಂಬೆಯಾಗಿರುವ ಕೇಂದ್ರ ಸರ್ಕಾರವು ಕಾರ್ಮಿಕರ ಬಗ್ಗೆ ನಿರ್ಲಕ್ಷ್ಯ ಧೋರಣೆ ತಳೆದಿದೆ. ಉಳ್ಳವರ ಪರ ಆಡಳಿತ ನಡೆಸಿ ಮತ್ತು ಅವರ ಪರ ಕಾಯ್ದೆ ರೂಪಿಸಿ ದೇಶದಲ್ಲಿ ಆರ್ಥಿಕ ಅರಾಜಕತೆ ಸೃಷ್ಟಿಸುತ್ತಿದೆ ಎಂದರು.

ಕಾರ್ಮಿಕ ಸಂಹಿತೆ ಹಿಂಪಡೆಯಬೇಕು. ಸಾರ್ವಜನಿಕ ವಲಯದ ಉದ್ದಿಮೆಗಳನ್ನು ಖಾಸಗೀಕರಣಗೊಳಿಸುವ ನಿರ್ಧಾರ ಕೈಬಿಡಬೇಕು. ವಿವಿಧ ಕಾರ್ಮಿಕ ವರ್ಗದ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮೇ 20 ರಂದು ಕಾರ್ಮಿಕ ಸಂಘಗಳ ಸಹಕಾರದೊಂದಿಗೆ ಅಖಲ ಭಾರತ ಮಟ್ಟದ ಮುಷ್ಕರ ನಡೆಸಲಾಗುತ್ತಿದ್ದು, ತಾಲ್ಲೂಕು ಮತ್ತು ಜಿಲ್ಲಾ ಕೇಂದ್ರದಲ್ಲಿ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಹೋರಾಟ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಎಐಸಿಟಿಯುಸಿ ರಾಜ್ಯ ಕಾರ್ಯದರ್ಶಿ ಅಪ್ಪಣ್ಣ ಮಾತನಾಡಿ ದುಡಿಯುವ ವರ್ಗದ ಜನರಿಗೆ ಸರ್ಕಾರಗಳು ಘೋರ ಅನ್ಯಾಯ ಮಾಡುತ್ತಿವೆ. ಕಾರ್ಮಿಕರಿಗೆ ಸಮಾನ ವೇತನ ನೀಡದೆ ಜೀತದಾಳುಗಳಂತೆ ದುಡಿಸಿಕೊಳ್ಳುತ್ತಿವೆ. ಕಾರ್ಮಿಕರ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ನಡೆಸುತ್ತಿರುವ ಹೋರಾಟಕ್ಕೆ ಸಂಘ ಸಂಸ್ಥೆಗಳು ಪಕ್ಷಾತೀತವಾಗಿ ಬೆಂಬಲ ನೀಡಬೇಕು ಎಂದು ಮನವಿ ಮಾಡಿದರು.

ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಗಾಂಧಿನಗರ ನಾರಾಯಣಸ್ವಾಮಿ ಮಾತನಾಡಿ, ಕಾರ್ಮಿಕರಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ಆದರೆ, ಕಾರ್ಮಿಕರ ಕಷ್ಟಕ್ಕೆ ಸ್ಪಂದಿಸಬೇಕಾದ ಸರ್ಕಾರಗಳು ಮಾಲೀಕನ ಪರವಾಗಿವೆ. ಕಾರ್ಮಿಕರನ್ನು ಬೀದಿಗೆ ತಳ್ಳುವ ಪ್ರಯತ್ನ ಸದ್ದಿಲ್ಲದೆ ನಡೆದಿದ್ದು, ಇದರ ವಿರುದ್ಧ ತೀವ್ರ ಹೋರಾಟ ನಡೆಸಬೇಕು ಎಂದರು.

ಈ ಸಂದರ್ಭದಲ್ಲಿ ಬೆಮೆಲ್ ಕಾರ್ಮಿಕ ಸಂಘದ ಉಪಾಧ್ಯಕ್ಷ ಸಣ್ಣ ಹನುಮಂತಪ್ಪ, ಅಂಗನವಾಡಿ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ ಕಲ್ಪನಾ, ಕಟ್ಟಡ ಕಾರ್ಮಿಕ‌ ಸಂಘದ ಮುಖಂಡರಾದ ಕೃಷ್ಣಮೂರ್ತಿ, ಇಂಟಕ್ ಮುಖಂಡರಾದ ಗಂಗಿರೆಡ್ಡಿ, ಎಂ ವಿಜಯಕೃಷ್ವ ಆರ್ ಪ್ರಭಾಕರ್, ಮುಂತಾದವರು ಇದ್ದರು.

Ramesh Babu

Journalist

Recent Posts

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

2 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

4 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

4 hours ago

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

15 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

16 hours ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

2 days ago