ಕೋಲಾರ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ನಾಲ್ಕು ಕಾರ್ಮಿಕ ಕಾಯ್ದೆಗಳನ್ನು ರದ್ದುಪಡಿಸಬೇಕು. ನರೇಗಾ ಯೋಜನೆ ಮರು ಜಾರಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಫೆ.12 ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ಹಮ್ಮಿಕೊಂಡಿದ್ದು ಎಲ್ಲಾ ದುಡಿಯುವ ವರ್ಗದ ಜನ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ವಿಜಯಕೃಷ್ಣ ಮನವಿ ಮಾಡಿದರು.
ನಗರದ ಪತ್ರಕರ್ತರ ಭವನದಲ್ಲಿ ಸೋಮವಾರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿಯು) ಹಾಗೂ ಸಂಯುಕ್ತ ಹೋರಾಟ– ಕರ್ನಾಟಕ ವತಿಯಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕೇಂದ್ರ ಸರ್ಕಾರ ಜಾರಿಗೊಳಿಸಿರುವ ವಿ ಬಿ ಜಿ ರಾಮ್ ಜಿ ಕಾಯ್ದೆಯನ್ನು ರದ್ದುಗೊಳಿಸಬೇಕು. ಭೂಸ್ವಾಧೀನ ಕಾಯ್ದೆಗಳನ್ನು ಹಿಂಪಡೆಯಬೇಕು ಕೈಗಾರಿಕಾ ಸಂಬಂಧಗಳ (ಕರ್ನಾಟಕ) ಕರಡು ನಿಯಮಗಳನ್ನು ಪ್ರಕಟಿಸುವ ಮೂಲಕ ರಾಜ್ಯ ಸರ್ಕಾರ ಕಾರ್ಮಿಕರಿಗೆ ದ್ರೋಹ ಬಗೆದಿದೆ. ಕಾರ್ಮಿಕ ವಿರೋಧಿಯಾಗಿರುವ ಈ ಕರಡು ನಿಯಮಗಳನ್ನು ಕೂಡಲೇ ಹಿಂಪಡೆಯಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಾರಿಗೊಳಿಸಿರುವ ಭೂ ಸುಧಾರಣಾ, ಎಪಿಎಂಸಿ, ಜಾನುವಾರು ಸಂರಕ್ಷಣಾ ತಿದ್ದುಪಡಿ ಕಾಯ್ದೆಗಳನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಿದರು.
ದೇಶಾದ್ಯಂತ ಕಾರ್ಮಿಕರ ಕಾಯ್ದೆಗಳು ದುಡಿಯುವ ವರ್ಗಕ್ಕೆ ವಿರುದ್ಧವಾಗಿದೆ ದೇಶದ ಸಂಪತ್ತಿನ ಸಂರಕ್ಷಣೆ, ದುಡಿಯುವ ಜನರ ಹಕ್ಕುಗಳ ರಕ್ಷಣೆ ಮತ್ತು ಮಾನವ ವಿರೋಧಿ ನೀತಿಗಳ ವಿರುದ್ಧ ಫೆಬ್ರವರಿ 12 ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ನಡೆಯಲಿದೆ. ಈ ಮುಷ್ಕರವನ್ನು ಉತ್ಪಾದನೆ ಸೇವೆ ಸ್ಥಗಿತಗೊಳಿಸುವ ಮೂಲಕ ಕಾರ್ಮಿಕರು, ರೈತರು, ಯುವ ಸಮುದಾಯ ಮಹಿಳಾ ಸಂಘಟನೆಗಳು, ವಿಧ್ಯಾರ್ಥಿಗಳು ಹಾಗೂ ಎಲ್ಲಾ ದುಡಿಯುವ ವರ್ಗದ ಜನ ತಮ್ಮ ಎಲ್ಲಾ ರೀತಿಯ ವ್ಯಾಪಾರ ವಹಿವಾಟುಗಳನ್ನು ಸ್ಥಗಿತಗೊಳಿಸಿ ಸ್ವಯಂ ಪ್ರೇರಿತ ಮುಷ್ಕರಕ್ಕೆ ಬೆಂಬಲ ನೀಡಬೇಕೆಂದು ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಮತ್ತು ಸಂಯುಕ್ತ ಹೋರಾಟದ ಪರವಾಗಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಗಾಂಧಿನಗರ ನಾರಾಯಣಸ್ವಾಮಿ ಮಾತನಾಡಿ ಕೇಂದ್ರದ ಕಾರ್ಮಿಕರ ನೀತಿಗಳಿಂದ ನೇರವಾದ ಹೊಡೆತ ಸ್ಥಳೀಯ ಕೈಗಾರಿಕೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಬೀಳಲಿದೆ ಸರ್ಕಾರ ಕಾರ್ಮಿಕರ ಹಿತ ಕಾಪಾಡುವ ಬದಲಿಗೆ ಬಂಡವಾಳಶಾಹಿಗಳ ಹಿತ ಮುಖ್ಯವಾಗಿದೆ ಈ ಮಸೂದೆಗಳು ವಾಪಸು ಪಡೆಯಲು ನಡೆಯಲಿರುವ ಮುಷ್ಕರವು ಕೋಲಾರ ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಹಾಗೂ ಸ್ಥಳೀಯ ಕೈಗಾರಿಕೆಗಳಲ್ಲಿ ನಡೆಯಲಿದೆ ನಗರದಲ್ಲಿ ಗಾಂಧಿವನದಿಂದ ಬೃಹತ್ ಮೆರವಣಿಗೆ ನಡೆದು ಮೆಕ್ಕೆ ವೃತ್ತದಲ್ಲಿ ಪ್ರತಿಭಟನೆ ನಡೆಯಲಿದ್ದು ಸ್ಥಳೀಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮುಷ್ಕರವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.
ಈ ಪತ್ರಿಕಾಗೋಷ್ಠಿಯಲ್ಲಿ ಸಿಐಟಿಯು ಜಿಲ್ಲಾ ಖಜಾಂಚಿ ಹೆಚ್.ಬಿ ಕೃಷ್ಣಪ್ಪ, ಕಾರ್ಯದರ್ಶಿ ಎಂ.ಭೀಮರಾಜ್, ಪ್ರಾಂತ ರೈತ ಸಂಘದ ತಾಲೂಕು ಅಧ್ಯಕ್ಷ ವಿ.ನಾರಾಯಣರೆಡ್ಡಿ, ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನ್ನೆಹೊಸಹಳ್ಳಿ ರಮೇಶ್, ಸಿಐಟಿಯು ಸಹ ಕಾರ್ಯದರ್ಶಿ ಹರೀಷ್, ಕೇಶವರಾವ್ ಇದ್ದರು.
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…