Categories: ಕೋಲಾರ

ಕೇಂದ್ರ ಸರ್ಕಾರದ ವಿರುದ್ದ ಫೆ 12 ರಂದು ಅಖಿಲ ಭಾರತ ಮುಷ್ಕರ

ಕೋಲಾರ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ನಾಲ್ಕು ಕಾರ್ಮಿಕ ಕಾಯ್ದೆಗಳನ್ನು ರದ್ದುಪಡಿಸಬೇಕು. ನರೇಗಾ ಯೋಜನೆ ಮರು ಜಾರಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಫೆ.12 ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ಹಮ್ಮಿಕೊಂಡಿದ್ದು ಎಲ್ಲಾ ದುಡಿಯುವ ವರ್ಗದ ಜನ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ವಿಜಯಕೃಷ್ಣ ಮನವಿ ಮಾಡಿದರು.

ನಗರದ ಪತ್ರಕರ್ತರ ಭವನದಲ್ಲಿ ಸೋಮವಾರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿಯು) ಹಾಗೂ ಸಂಯುಕ್ತ ಹೋರಾಟ– ಕರ್ನಾಟಕ ವತಿಯಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕೇಂದ್ರ ಸರ್ಕಾರ ಜಾರಿಗೊಳಿಸಿರುವ ವಿ ಬಿ ಜಿ ರಾಮ್‌ ಜಿ ಕಾಯ್ದೆಯನ್ನು ರದ್ದುಗೊಳಿಸಬೇಕು. ಭೂಸ್ವಾಧೀನ ಕಾಯ್ದೆಗಳನ್ನು ಹಿಂಪಡೆಯಬೇಕು ಕೈಗಾರಿಕಾ ಸಂಬಂಧಗಳ (ಕರ್ನಾಟಕ) ಕರಡು ನಿಯಮಗಳನ್ನು ಪ್ರಕಟಿಸುವ ಮೂಲಕ ರಾಜ್ಯ ಸರ್ಕಾರ ಕಾರ್ಮಿಕರಿಗೆ ದ್ರೋಹ ಬಗೆದಿದೆ. ಕಾರ್ಮಿಕ ವಿರೋಧಿಯಾಗಿರುವ ಈ ಕರಡು ನಿಯಮಗಳನ್ನು ಕೂಡಲೇ ಹಿಂಪಡೆಯಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಾರಿಗೊಳಿಸಿರುವ ಭೂ ಸುಧಾರಣಾ, ಎಪಿಎಂಸಿ, ಜಾನುವಾರು ಸಂರಕ್ಷಣಾ ತಿದ್ದುಪಡಿ ಕಾಯ್ದೆಗಳನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಿದರು.

ದೇಶಾದ್ಯಂತ ಕಾರ್ಮಿಕರ ಕಾಯ್ದೆಗಳು ದುಡಿಯುವ ವರ್ಗಕ್ಕೆ ವಿರುದ್ಧವಾಗಿದೆ ದೇಶದ ಸಂಪತ್ತಿನ ಸಂರಕ್ಷಣೆ, ದುಡಿಯುವ ಜನರ ಹಕ್ಕುಗಳ ರಕ್ಷಣೆ ಮತ್ತು ಮಾನವ ವಿರೋಧಿ ನೀತಿಗಳ ವಿರುದ್ಧ ಫೆಬ್ರವರಿ 12 ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ನಡೆಯಲಿದೆ. ಈ ಮುಷ್ಕರವನ್ನು ಉತ್ಪಾದನೆ ಸೇವೆ ಸ್ಥಗಿತಗೊಳಿಸುವ ಮೂಲಕ ಕಾರ್ಮಿಕರು, ರೈತರು, ಯುವ ಸಮುದಾಯ ಮಹಿಳಾ ಸಂಘಟನೆಗಳು, ವಿಧ್ಯಾರ್ಥಿಗಳು ಹಾಗೂ ಎಲ್ಲಾ ದುಡಿಯುವ ವರ್ಗದ ಜನ ತಮ್ಮ ಎಲ್ಲಾ ರೀತಿಯ ವ್ಯಾಪಾರ ವಹಿವಾಟುಗಳನ್ನು ಸ್ಥಗಿತಗೊಳಿಸಿ ಸ್ವಯಂ ಪ್ರೇರಿತ ಮುಷ್ಕರಕ್ಕೆ ಬೆಂಬಲ ನೀಡಬೇಕೆಂದು ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಮತ್ತು ಸಂಯುಕ್ತ ಹೋರಾಟದ ಪರವಾಗಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಗಾಂಧಿನಗರ ನಾರಾಯಣಸ್ವಾಮಿ ಮಾತನಾಡಿ ಕೇಂದ್ರದ ಕಾರ್ಮಿಕರ ನೀತಿಗಳಿಂದ ನೇರವಾದ ಹೊಡೆತ ಸ್ಥಳೀಯ ಕೈಗಾರಿಕೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಬೀಳಲಿದೆ ಸರ್ಕಾರ ಕಾರ್ಮಿಕರ ಹಿತ ಕಾಪಾಡುವ ಬದಲಿಗೆ ಬಂಡವಾಳಶಾಹಿಗಳ ಹಿತ ಮುಖ್ಯವಾಗಿದೆ ಈ ಮಸೂದೆಗಳು ವಾಪಸು ಪಡೆಯಲು ನಡೆಯಲಿರುವ ಮುಷ್ಕರವು ಕೋಲಾರ ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಹಾಗೂ ಸ್ಥಳೀಯ ಕೈಗಾರಿಕೆಗಳಲ್ಲಿ ನಡೆಯಲಿದೆ ನಗರದಲ್ಲಿ ಗಾಂಧಿವನದಿಂದ ಬೃಹತ್ ಮೆರವಣಿಗೆ ನಡೆದು ಮೆಕ್ಕೆ ವೃತ್ತದಲ್ಲಿ ಪ್ರತಿಭಟನೆ ನಡೆಯಲಿದ್ದು ಸ್ಥಳೀಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮುಷ್ಕರವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.

ಈ ಪತ್ರಿಕಾಗೋಷ್ಠಿಯಲ್ಲಿ ಸಿಐಟಿಯು ಜಿಲ್ಲಾ ಖಜಾಂಚಿ ಹೆಚ್.ಬಿ ಕೃಷ್ಣಪ್ಪ, ಕಾರ್ಯದರ್ಶಿ ಎಂ.ಭೀಮರಾಜ್, ಪ್ರಾಂತ ರೈತ ಸಂಘದ ತಾಲೂಕು ಅಧ್ಯಕ್ಷ ವಿ.ನಾರಾಯಣರೆಡ್ಡಿ, ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನ್ನೆಹೊಸಹಳ್ಳಿ ರಮೇಶ್, ಸಿಐಟಿಯು ಸಹ ಕಾರ್ಯದರ್ಶಿ ಹರೀಷ್, ಕೇಶವರಾವ್ ಇದ್ದರು.

Ramesh Babu

Journalist

Recent Posts

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

32 minutes ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

2 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

7 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

9 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

12 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

1 day ago