Categories: ಕೋಲಾರ

ಕೇಂದ್ರ ಸರ್ಕಾರದ ವಿರುದ್ದ ಫೆ 12 ರಂದು ಅಖಿಲ ಭಾರತ ಮುಷ್ಕರ

ಕೋಲಾರ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ನಾಲ್ಕು ಕಾರ್ಮಿಕ ಕಾಯ್ದೆಗಳನ್ನು ರದ್ದುಪಡಿಸಬೇಕು. ನರೇಗಾ ಯೋಜನೆ ಮರು ಜಾರಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಫೆ.12 ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ಹಮ್ಮಿಕೊಂಡಿದ್ದು ಎಲ್ಲಾ ದುಡಿಯುವ ವರ್ಗದ ಜನ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ವಿಜಯಕೃಷ್ಣ ಮನವಿ ಮಾಡಿದರು.

ನಗರದ ಪತ್ರಕರ್ತರ ಭವನದಲ್ಲಿ ಸೋಮವಾರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿಯು) ಹಾಗೂ ಸಂಯುಕ್ತ ಹೋರಾಟ– ಕರ್ನಾಟಕ ವತಿಯಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕೇಂದ್ರ ಸರ್ಕಾರ ಜಾರಿಗೊಳಿಸಿರುವ ವಿ ಬಿ ಜಿ ರಾಮ್‌ ಜಿ ಕಾಯ್ದೆಯನ್ನು ರದ್ದುಗೊಳಿಸಬೇಕು. ಭೂಸ್ವಾಧೀನ ಕಾಯ್ದೆಗಳನ್ನು ಹಿಂಪಡೆಯಬೇಕು ಕೈಗಾರಿಕಾ ಸಂಬಂಧಗಳ (ಕರ್ನಾಟಕ) ಕರಡು ನಿಯಮಗಳನ್ನು ಪ್ರಕಟಿಸುವ ಮೂಲಕ ರಾಜ್ಯ ಸರ್ಕಾರ ಕಾರ್ಮಿಕರಿಗೆ ದ್ರೋಹ ಬಗೆದಿದೆ. ಕಾರ್ಮಿಕ ವಿರೋಧಿಯಾಗಿರುವ ಈ ಕರಡು ನಿಯಮಗಳನ್ನು ಕೂಡಲೇ ಹಿಂಪಡೆಯಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಾರಿಗೊಳಿಸಿರುವ ಭೂ ಸುಧಾರಣಾ, ಎಪಿಎಂಸಿ, ಜಾನುವಾರು ಸಂರಕ್ಷಣಾ ತಿದ್ದುಪಡಿ ಕಾಯ್ದೆಗಳನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಿದರು.

ದೇಶಾದ್ಯಂತ ಕಾರ್ಮಿಕರ ಕಾಯ್ದೆಗಳು ದುಡಿಯುವ ವರ್ಗಕ್ಕೆ ವಿರುದ್ಧವಾಗಿದೆ ದೇಶದ ಸಂಪತ್ತಿನ ಸಂರಕ್ಷಣೆ, ದುಡಿಯುವ ಜನರ ಹಕ್ಕುಗಳ ರಕ್ಷಣೆ ಮತ್ತು ಮಾನವ ವಿರೋಧಿ ನೀತಿಗಳ ವಿರುದ್ಧ ಫೆಬ್ರವರಿ 12 ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ನಡೆಯಲಿದೆ. ಈ ಮುಷ್ಕರವನ್ನು ಉತ್ಪಾದನೆ ಸೇವೆ ಸ್ಥಗಿತಗೊಳಿಸುವ ಮೂಲಕ ಕಾರ್ಮಿಕರು, ರೈತರು, ಯುವ ಸಮುದಾಯ ಮಹಿಳಾ ಸಂಘಟನೆಗಳು, ವಿಧ್ಯಾರ್ಥಿಗಳು ಹಾಗೂ ಎಲ್ಲಾ ದುಡಿಯುವ ವರ್ಗದ ಜನ ತಮ್ಮ ಎಲ್ಲಾ ರೀತಿಯ ವ್ಯಾಪಾರ ವಹಿವಾಟುಗಳನ್ನು ಸ್ಥಗಿತಗೊಳಿಸಿ ಸ್ವಯಂ ಪ್ರೇರಿತ ಮುಷ್ಕರಕ್ಕೆ ಬೆಂಬಲ ನೀಡಬೇಕೆಂದು ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಮತ್ತು ಸಂಯುಕ್ತ ಹೋರಾಟದ ಪರವಾಗಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಗಾಂಧಿನಗರ ನಾರಾಯಣಸ್ವಾಮಿ ಮಾತನಾಡಿ ಕೇಂದ್ರದ ಕಾರ್ಮಿಕರ ನೀತಿಗಳಿಂದ ನೇರವಾದ ಹೊಡೆತ ಸ್ಥಳೀಯ ಕೈಗಾರಿಕೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಬೀಳಲಿದೆ ಸರ್ಕಾರ ಕಾರ್ಮಿಕರ ಹಿತ ಕಾಪಾಡುವ ಬದಲಿಗೆ ಬಂಡವಾಳಶಾಹಿಗಳ ಹಿತ ಮುಖ್ಯವಾಗಿದೆ ಈ ಮಸೂದೆಗಳು ವಾಪಸು ಪಡೆಯಲು ನಡೆಯಲಿರುವ ಮುಷ್ಕರವು ಕೋಲಾರ ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಹಾಗೂ ಸ್ಥಳೀಯ ಕೈಗಾರಿಕೆಗಳಲ್ಲಿ ನಡೆಯಲಿದೆ ನಗರದಲ್ಲಿ ಗಾಂಧಿವನದಿಂದ ಬೃಹತ್ ಮೆರವಣಿಗೆ ನಡೆದು ಮೆಕ್ಕೆ ವೃತ್ತದಲ್ಲಿ ಪ್ರತಿಭಟನೆ ನಡೆಯಲಿದ್ದು ಸ್ಥಳೀಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮುಷ್ಕರವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.

ಈ ಪತ್ರಿಕಾಗೋಷ್ಠಿಯಲ್ಲಿ ಸಿಐಟಿಯು ಜಿಲ್ಲಾ ಖಜಾಂಚಿ ಹೆಚ್.ಬಿ ಕೃಷ್ಣಪ್ಪ, ಕಾರ್ಯದರ್ಶಿ ಎಂ.ಭೀಮರಾಜ್, ಪ್ರಾಂತ ರೈತ ಸಂಘದ ತಾಲೂಕು ಅಧ್ಯಕ್ಷ ವಿ.ನಾರಾಯಣರೆಡ್ಡಿ, ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನ್ನೆಹೊಸಹಳ್ಳಿ ರಮೇಶ್, ಸಿಐಟಿಯು ಸಹ ಕಾರ್ಯದರ್ಶಿ ಹರೀಷ್, ಕೇಶವರಾವ್ ಇದ್ದರು.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

10 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

14 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

21 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

22 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago