ಕೇಂದ್ರ ಸರ್ಕಾರ ಎಂದರೆ ಅರಸೊತ್ತಿಗೆ ಅಲ್ಲ: ಮೋದಿಯವರು ಅರಸರೂ ಅಲ್ಲ. ಅವರೂ ಜನರಿಂದ ಆಯ್ಕೆಯಾಗಿರುವ ಜನಪ್ರತಿನಿಧಿ ಅಷ್ಟೆ- ಸಿಎಂ ಸಿದ್ದರಾಮಯ್ಯ

ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿರುವುದನ್ನು ಯಡಿಯೂರಪ್ಪನವರು ಮರೆತುಬಿಟ್ಟಂತಿದೆ. ಕೇಂದ್ರ ಸರ್ಕಾರ ಎಂದರೆ ಅರಸೊತ್ತಿಗೆಯೂ ಅಲ್ಲ, ಮೋದಿಯವರು ಅರಸರೂ ಅಲ್ಲ. ಅವರೂ ಜನರಿಂದ ಆಯ್ಕೆಯಾಗಿರುವ ಜನಪ್ರತಿನಿಧಿ ಅಷ್ಟೆ. ಒಕ್ಕೂಟ ವ್ಯವಸ್ಥೆಯಲ್ಲಿರುವ ಮುಖ್ಯಮಂತ್ರಿಗಳು ಪ್ರಧಾನಿಯ ಗುಲಾಮರಲ್ಲ. ಇಷ್ಟೊಂದು ದೀರ್ಘಕಾಲ ರಾಜಕೀಯದಲ್ಲಿರುವ ಯಡಿಯೂರಪ್ಪನವರಿಗೆ ಪ್ರಜಾಪ್ರಭುತ್ವದ ಈ ಮೂಲ ಪಾಠ ತಿಳಿಯದೆ ಇರುವುದು ದುರಂತವೇ ಸರಿ ಎಂದು ಸಿಎಂ ಸಿದ್ದರಾಮಯ್ಯ ಅವರು ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಕಿಡಿಕಾರಿದ್ದಾರೆ.

ಪ್ರತಿನಿತ್ಯ ಬೈದರೆ ಪ್ರಧಾನಿ ನರೇಂದ್ರ ಮೋದಿ ಏಕೆ ಸಿದ್ದು ಭೇಟಿ ಆಗ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿರುವುದು ರಾಜ್ಯದ ಆರೂವರೆ ಕೋಟಿ ಕನ್ನಡಿಗರಿಗೆ ಮಾಡಿರುವ ಅವಮಾನ. ಒಂದು ಕಾಲದಲ್ಲಿ ನರೇಂದ್ರ ಮೋದಿ ಅವರನ್ನು ಬಾಯಿಗೆ ಬಂದಂತೆ ಬೈದಾಡಿದ್ದ ಯಡಿಯೂಪರಪ್ಪನವರು ತನ್ನ ರಾಜಕೀಯ ಅಸ್ವಿತ್ವ ಉಳಿಸಿಕೊಳ್ಳಲು ಇಂತಹ ಗುಲಾಮಿ ಮನೋಭಾವ ಬೆಳೆಸಿಕೊಂಡಿರುವುದು ವಿಷಾದನೀಯ ಎಂದು ಗುಡುಗಿದ್ದಾರೆ.

ನರೇಂದ್ರ ಮೋದಿಯವರ ವಿರುದ್ಧ ವೈಯಕ್ತಿಕವಾಗಿ ನನಗೇನು ಪ್ರೀತಿ ಇಲ್ಲವೇ ದ್ವೇಷ ಇಲ್ಲ. ವೈಯಕ್ತಿಕವಾಗಿ ಅವರೇನು ನನಗೆ ಹಾನಿ ಮಾಡಿಲ್ಲ. ಆದರೆ ಆರೂವರೆ ಕೋಟಿ ಜನರನ್ನು ಪ್ರತಿನಿಧಿಸುತ್ತಿರುವ ಮುಖ್ಯಮಂತ್ರಿಯಾಗಿ ನಮ್ಮ ಜನರಿಗೆ ಕೇಂದ್ರ ಸರ್ಕಾರ ಮಾಡುತ್ತಿರುವ ಅನ್ಯಾಯವನ್ನು ಕಂಡು ಕಣ್ಣುಮುಚ್ಚಿಕೊಂಡು ಇರಲಾಗುವುದಿಲ್ಲ. ಈ ಪ್ರಶ್ನಿಸುವ ಕೆಲಸವನ್ನು ಮಾಡದೆ ಇದ್ದರೆ ಅದು ಜನದ್ರೋಹವಾಗುತ್ತದೆ ಎಂದು ಹೇಳಿದ್ದಾರೆ.

ಬಹಳ ಮುಖ್ಯವಾಗಿ ಬಿ.ಎಸ್. ಯಡಿಯೂರಪ್ಪನವರಿಗೆ ಈ ರೀತಿ ಹೇಳಿಕೆ ನೀಡುವ ಯಾವ ನೈತಿಕತೆ ಇಲ್ಲವೇ ಇಲ್ಲ. ಬಿಜೆಪಿ ತೊರೆದು ಸ್ವಂತ ಪಕ್ಷ ಕಟ್ಟಿಕೊಂಡ ದಿನಗಳಲ್ಲಿ ಯಡಿಯೂರಪ್ಪ ಮತ್ತು ಬೆಂಬಲಿಗರು ಕೇವಲ ಮೋದಿಯವರ ವಿರುದ್ಧ ಮಾತ್ರ ಅಲ್ಲ ಎಲ್.ಕೆ.ಅಡ್ವಾನಿಯವರಂತಹ ಪಕ್ಷದ ಹಿರಿಯ ನಾಯಕರ ವಿರುದ್ಧ ಹೇಗೆಲ್ಲಾ ಬೈದಿದ್ದಾರೆ ಎನ್ನುವುದನ್ನು ರಾಜ್ಯದ ಜನ ಕಂಡಿದ್ದಾರೆ ಎಂದಿದ್ದಾರೆ.

ಬಿ.ಎಸ್.ಯಡಿಯೂರಪ್ಪನವರು ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಮೂರೂ ಹೊತ್ತು ಹಾಡಿ ಹೊಗಳುತ್ತಿದ್ದಾರೆ. ಹೀಗಿದ್ದರೂ ಈಗಲೂ ಅವರಿಗೆ ಕೂತು ನಿರಾಳವಾಗಿ ಮಾತನಾಡಲು ಮೋದಿಯವರು ಒಂದು ಅಪಾಯ್ಟ್‌ಮೆಂಟ್ ಕೊಡುತ್ತಿಲ್ಲ. ದೆಹಲಿಗೆ ಹೋಗಿ ದಿನಗಟ್ಟಲೆ ಅವರು ಕಾಯಬೇಕಾಗುತ್ತದೆ. ಕರ್ನಾಟಕದಲ್ಲಿ ರಾಜಾ ಹುಲಿ ಎಂದು ಕರೆಸಿಕೊಳ್ಳುವ ಯಡಿಯೂರಪ್ಪನವರು ನರೇಂದ್ರ ಮೋದಿಯವರ ಮುಂದೆ ಇಲಿಯಂತೆ ವರ್ತಿಸುವುದು ಅವರ ವ್ಯಕ್ತಿತ್ವಕ್ಕೆ ಭೂಷಣ ಅಲ್ಲ ಎಂದು ತಿಳಿಸಿದ್ದಾರೆ.

ಮೊನ್ನೆಮೊನ್ನೆಯ ವರೆಗೆ ಆರ್.ಎಸ್.ಎಸ್, ಬಿಜೆಪಿ ಮತ್ತು ನರೇಂದ್ರಮೋದಿ ಅವರ ವಿರುದ್ಧ ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರು ಆದ ಹೆಚ್. ಡಿ ಕುಮಾರಸ್ವಾಮಿ ಅವರು ಹಿಗ್ಗಾಮುಗ್ಗಾ ಬೈದಾಡುತ್ತಿದ್ದರು. ಹೀಗಿದ್ದರೂ ಪ್ರಧಾನಿ ನರೇಂದ್ರ ಮೋದಿಯವರು ಕುಮಾರಸ್ವಾಮಿಯವರನ್ನು ಕರೆಸಿ ಮಾತನಾಡಿ ಬೆನ್ನು ತಟ್ಟಿ ಕಳುಹಿಸುತ್ತಾರೆ. ಕುಮಾರಸ್ವಾಮಿ ಬೈದಾಡಿದ್ದು ಮೋದಿಯವರಿಗೆ ತಿಳಿದಿರಲಿಲ್ಲವೇ? ಇದ್ಯಾವ ಸೀಮೆಯ ಸ್ವಾಭಿಮಾನಿ ನಡವಳಿಕೆ ಎಂದು ಗುಡುಗಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ವಿರೋಧ ಪಕ್ಷದ ನಾಯಕರನ್ನು ನಡೆಸಿಕೊಳ್ಳುವ ರೀತಿ ಬಗ್ಗೆ ನನಗೆ ತೀವ್ರ ಅಸಮಾಧಾನ ಇದೆ. ಇದಕ್ಕಿಂತಲೂ ಅಸಮಾಧಾನ ಎಲ್.ಕೆ.ಅಡ್ವಾಣಿ, ಬಿ.ಎಸ್. ಯಡಿಯೂರಪ್ಪನವರಂತಹ ತಮ್ಮದೇ ಪಕ್ಷದ ಹಿರಿಯ ನಾಯಕರನ್ನು ನಡೆಸಿಕೊಳ್ಳುವ ಬಗ್ಗೆಯೂ ಇದೆ ಎಂದಿದ್ದಾರೆ.

ಯಡಿಯೂರಪ್ಪನವರೇ, ನೀವು ನಿಮ್ಮ ನಾಯಕರ ಮೇಲೆ ಬರಪೂರ ಹೊಗಳಿಕೆಯ ಮಳೆ ಸುರಿಸಿ, ಮನಸ್ಸಿಗೆ ತೃಪ್ತಿ ಆಗುವಷ್ಟು ಓಲೈಸಿ, ಬೇಕಿದ್ದರೆ ಕಾಲುಗಳನ್ನು ಬೇಕಾದರೂ ಹಿಡಿಯಿರಿ, ನಮಗೇನು ಅಭ್ಯಂತರ ಇಲ್ಲ. ಅದರಿಂದಾದರೂ ರಾಜ್ಯದ ಜನತೆಗೆ ನ್ಯಾಯ ಸಿಗಲಿ ಎಂದು ಹೇಳಿದ್ದಾರೆ.

Ramesh Babu

Journalist

Recent Posts

ಸೆಲೆಬ್ರಿಟಿ…………….

ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…

9 hours ago

ಎಲ್-ನಿನೋ ಪರಿಣಾಮ, ಮಳೆಯ ಕೊರತೆ, ತಾಪಮಾನದ ಏರಿಕೆ, ಒಣ ಹವಾಮಾನ ಹೆಚ್ಚಳ ಸಾಧ್ಯತೆ: ತೋಟಗಾರಿಕಾ ಬೆಳೆಗಳ ರಕ್ಷಣೆಗೆ ಇರಲಿ ಆದ್ಯತೆ

ಎಲ್-ನಿನೋ ಪರಿಣಾಮದಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಕೊರತೆ, ತಾಪಮಾನದ ಏರಿಕೆ ಹಾಗೂ ಒಣ ಹವಾಮಾನ ಹೆಚ್ಚಾಗುವ ಸಾಧ್ಯತೆ ಇರುವ…

9 hours ago

ರೋಗಿಗಳೊಂದಿಗೆ ದುರ್ವರ್ತನೆ ಆರೋಪ: ಕೊನಘಟ್ಟ ಸರ್ಕಾರಿ ಆಸ್ಪತ್ರೆ ವೈದ್ಯೆ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…

21 hours ago

ಬಹಿರ್ದೆಸೆಗೆ ಹೋದ ಬಾಲಕನ ಜೀವ ಕಸಿದ ವೇಗದ ಆಟೋ

ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…

24 hours ago

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

2 days ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

2 days ago