Categories: ಹಾವೇರಿ

ಕೇಂದ್ರ ಸರ್ಕಾರ ರಾಜ್ಯಕ್ಕೆ ಅನುದಾನ ನೀಡದೇ ಅನ್ಯಾಯ ಮಾಡುತ್ತಿದೆ- ಸಿಎಂ ಸಿದ್ದರಾಮಯ್ಯ

ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸಿ ದಾಖಲೆ ನಿರ್ಮಿಸಿದ್ದೇವೆ. ರಾಜ್ಯದ ಜಿಡಿಪಿ ಯನ್ನು ದೇಶದಲ್ಲೇ ನಂಬರ್ ಒನ್ ಆಗಿಸಿದ್ದು ನಮ್ಮ ಜನಪರ ಸರ್ಕಾರ.‌ ಕಂದಾಯ ಇಲಾಖೆಗೆ ಕೃಷ್ಣಬೈರೇಗೌಡರು ಸಚಿವರಾದ ಮೇಲೆ ಕ್ರಾಂತಿಕಾರಿ ಪ್ರಗತಿ ಆಗಿದೆ.‌ GST ತೆರಿಗೆ ಸಂಗ್ರಹದಲ್ಲೂ ರಾಜ್ಯ ದಾಖಲೆ ವೇಗದಲ್ಲಿ ಸಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಈ ಎಲ್ಲಾ ಸಾಧನೆ ಮತ್ತು ದಾಖಲೆಗಳನ್ನು ಕೇಂದ್ರ ಸರ್ಕಾರದ ಅನ್ಯಾಯದ ನಡುವೆಯೂ ಮಾಡಿ ತೋರಿಸಿದ್ದೇವೆ. ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಸಂಸದ ಬಸವರಾಜ ಬೊಮ್ಮಾಯಿಯವರೂ, ಪ್ರಹ್ಲಾದ್ ಜೋಶಿ, ಜಗದೀಶ್ ಶೆಟ್ಟರ್ ಕೂಡ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಕೇಂದ್ರದಲ್ಲಿ ಬಾಯಿ ಬಿಡುತ್ತಿಲ್ಲ‌ ಎಂದರು.

ನಮ್ಮ ಸರ್ಕಾರ ಬಂದು 2 ವರ್ಷ 9 ತಿಂಗಳಾಯ್ತು. ನಾವು ಕೊಟ್ಟ ಭರವಸೆಗಳಲ್ಲಿ 243 ಭರವಸೆಗಳನ್ನು ಈಡೇರಿಸಿದ್ದೇವೆ. ಇನ್ನುಳಿದ ಅವಧಿಯಲ್ಲಿ ಬಾಕಿ ಭರವಸೆಗಳನ್ನೂ ಈಡೇರಿಸಲಾಗುವುದು. 2023-18 ರಲ್ಲೂ ಕೊಟ್ಟ ಭರವಸೆಗಳನ್ನೆಲ್ಲಾ ಈಡೇರಿಸಿ, ಪ್ರಣಾಳಿಕೆಯಲ್ಲಿ ಇಲ್ಲದ 30 ಭರವಸೆಗಳನ್ನು ಈಡೇರಿಸಿ “ನುಡಿದಂತೆ ನಡೆದು” ದಾಖಲೆ ಮಾಡಿದ್ದೇವೆ ಎಂದು ಹೇಳಿದರು.

ಅಧಿಕಾರ ಇದ್ದಾಗ ಕೊಟ್ಟ ಭರವಸೆ ಈಡೇರಿಸದ ಬಿಜೆಪಿ ಈಗ ನಮ್ಮ ಖಜಾನೆ ಖಾಲಿ ಆಗಿದೆ ಎನ್ನುವ ಸುಳ್ಳು ಪ್ರಚಾರದಲ್ಲಿ ನಿರತವಾಗಿದೆ. ಇಲ್ಲಿಯವರೆಗೂ ಗ್ಯಾರಂಟಿಗಳ ಮೂಲಕ 1,18,000 ಕೋಟಿ ರೂಪಾಯಿಗಳನ್ನು ನೇರವಾಗಿ ರಾಜ್ಯದ ಜನರಿಗೆ ತಲುಪಿಸಿದ್ದೇವೆ ಎಂದು ತಿಳಿಸಿದರು.

ಅಮಾರ್ತ್ಯಸೇನ್, ಅಭಿಜಿತ್ ಬ್ಯಾನರ್ಜಿ ಮುಂತಾದ ಆರ್ಥಿಕ ತಜ್ಞರ ಜೊತೆಗೆ ದಿನ ಪತ್ರಿಕೆಗಳು ಮತ್ತು ವಿಶ್ವ ವಿದ್ಯಾಲಯಗಳ ಅಧ್ಯಯನಗಳು ನಮ್ಮ ಗ್ಯಾರಂಟಿ ಯೋಜನೆಗಳ ಬಗ್ಗೆ ಸದಾಭಿಪ್ರಾಯ ವ್ಯಕ್ತಪಡಿಸಿವೆ. ಹೀಗಿದ್ದರೂ ಬಿಜೆಪಿಯವರು ಜನರನ್ನು ತಪ್ಪು ದಾರಿಗೆಳೆಯುವುದು ಖಂಡನೀಯ ಎಂದರು.

ಕೇಂದ್ರ ಸರ್ಕಾರ ರಾಜ್ಯಕ್ಕೆ ಅನುದಾನ ನೀಡದೇ ಅನ್ಯಾಯ ಮಾಡುತ್ತಿದೆ. ನಮ್ಮ ಸರ್ಕಾರ 1000 ದಿನಗಳನ್ನು ಯಶಸ್ವಿಯಾಗಿ ಆಡಳಿತ ನಡೆಸಿದ್ದು, ನುಡಿದಂತೆ ನಡೆಯುವುದು ಕಾಂಗ್ರೆಸ್ ಸರ್ಕಾರ ಮಾತ್ರ. 1000 ದಿನಗಳ ಯಶಸ್ವೀ ಆಡಳಿತ ನಮ್ಮ ಜನಪರ ಬದ್ಧತೆಗೆ ಸಾಕ್ಷಿಯಾಗಿದೆ ಎಂದು ಹೇಳಿದರು.

ನಾವು ಎಲ್ಲ ಜಾತಿ ಧರ್ಮ ಭಾಷೆಯ ಜನರಿಗೆ ಸೇರಿದಂತೆ ಎಲ್ಲರನ್ನೊಳಗೊಂಡ ಅಭಿವೃದ್ಧಿಯಲ್ಲಿ ನಂಬಿಕೆಯಿರಿಸಿದ್ದೇವೆ. ನಾವು ಅಸಮಾನತೆ ನೀಗಿಸುವ ಕಾಯಕದಲ್ಲಿ ತೊಡಗಿದ್ದೇವೆ. ಬಿಜೆಪಿಯವರು 4 ವರ್ಷ ಏನು ಮಾಡಿಲ್ಲ. ಈಗ ಬಿಜೆಪಿಯವರ ಮಾತುಗಳನ್ನು ಗಂಭೀರವಾಗಿ ತೆಗೆದುಕೊಳ್ಳುವ ಅಗತ್ಯವಿಲ್ಲ ಎಂದು ತಿಳಿಸಿದರು.

ಸರ್ಕಾರ ನಿನ್ನೆಗೆ ಒಂದು ಸಾವಿರ ದಿನ ಪೂರೈಸಿದ್ದು, ಈ ಸಾವಿರ ದಿನಗಳಲ್ಲಿ ನಮ್ಮ ಸಾಧನೆಯೇ ನಮ್ಮ ಬದ್ಧತೆಯಾಗಿದೆ. ಬಡವರು, ದಲಿತರು, ಹಿಂದುಳಿದ ವರ್ಗದವರು, ಅಲ್ಪಸಂಖ್ಯಾತರು, ಮಹಿಳೆಯರು, ಕಾರ್ಮಿಕರ ಪರವಾಗಿ ನಾವು ನಿಲ್ಲುತ್ತೇವೆ ಎಂದರು.

Ramesh Babu

Journalist

Recent Posts

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

54 minutes ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

3 hours ago

ಗೃಹಜ್ಯೋತಿಗೆ ಮನೆಮನೆ ಬಾಗಿಲು ತಟ್ಟಿದ ಬೆಸ್ಕಾಂ:

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…

4 hours ago

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

17 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

21 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

1 day ago