Categories: ಹಾವೇರಿ

ಕೇಂದ್ರ ಸರ್ಕಾರ ರಾಜ್ಯಕ್ಕೆ ಅನುದಾನ ನೀಡದೇ ಅನ್ಯಾಯ ಮಾಡುತ್ತಿದೆ- ಸಿಎಂ ಸಿದ್ದರಾಮಯ್ಯ

ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸಿ ದಾಖಲೆ ನಿರ್ಮಿಸಿದ್ದೇವೆ. ರಾಜ್ಯದ ಜಿಡಿಪಿ ಯನ್ನು ದೇಶದಲ್ಲೇ ನಂಬರ್ ಒನ್ ಆಗಿಸಿದ್ದು ನಮ್ಮ ಜನಪರ ಸರ್ಕಾರ.‌ ಕಂದಾಯ ಇಲಾಖೆಗೆ ಕೃಷ್ಣಬೈರೇಗೌಡರು ಸಚಿವರಾದ ಮೇಲೆ ಕ್ರಾಂತಿಕಾರಿ ಪ್ರಗತಿ ಆಗಿದೆ.‌ GST ತೆರಿಗೆ ಸಂಗ್ರಹದಲ್ಲೂ ರಾಜ್ಯ ದಾಖಲೆ ವೇಗದಲ್ಲಿ ಸಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಈ ಎಲ್ಲಾ ಸಾಧನೆ ಮತ್ತು ದಾಖಲೆಗಳನ್ನು ಕೇಂದ್ರ ಸರ್ಕಾರದ ಅನ್ಯಾಯದ ನಡುವೆಯೂ ಮಾಡಿ ತೋರಿಸಿದ್ದೇವೆ. ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಸಂಸದ ಬಸವರಾಜ ಬೊಮ್ಮಾಯಿಯವರೂ, ಪ್ರಹ್ಲಾದ್ ಜೋಶಿ, ಜಗದೀಶ್ ಶೆಟ್ಟರ್ ಕೂಡ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಕೇಂದ್ರದಲ್ಲಿ ಬಾಯಿ ಬಿಡುತ್ತಿಲ್ಲ‌ ಎಂದರು.

ನಮ್ಮ ಸರ್ಕಾರ ಬಂದು 2 ವರ್ಷ 9 ತಿಂಗಳಾಯ್ತು. ನಾವು ಕೊಟ್ಟ ಭರವಸೆಗಳಲ್ಲಿ 243 ಭರವಸೆಗಳನ್ನು ಈಡೇರಿಸಿದ್ದೇವೆ. ಇನ್ನುಳಿದ ಅವಧಿಯಲ್ಲಿ ಬಾಕಿ ಭರವಸೆಗಳನ್ನೂ ಈಡೇರಿಸಲಾಗುವುದು. 2023-18 ರಲ್ಲೂ ಕೊಟ್ಟ ಭರವಸೆಗಳನ್ನೆಲ್ಲಾ ಈಡೇರಿಸಿ, ಪ್ರಣಾಳಿಕೆಯಲ್ಲಿ ಇಲ್ಲದ 30 ಭರವಸೆಗಳನ್ನು ಈಡೇರಿಸಿ “ನುಡಿದಂತೆ ನಡೆದು” ದಾಖಲೆ ಮಾಡಿದ್ದೇವೆ ಎಂದು ಹೇಳಿದರು.

ಅಧಿಕಾರ ಇದ್ದಾಗ ಕೊಟ್ಟ ಭರವಸೆ ಈಡೇರಿಸದ ಬಿಜೆಪಿ ಈಗ ನಮ್ಮ ಖಜಾನೆ ಖಾಲಿ ಆಗಿದೆ ಎನ್ನುವ ಸುಳ್ಳು ಪ್ರಚಾರದಲ್ಲಿ ನಿರತವಾಗಿದೆ. ಇಲ್ಲಿಯವರೆಗೂ ಗ್ಯಾರಂಟಿಗಳ ಮೂಲಕ 1,18,000 ಕೋಟಿ ರೂಪಾಯಿಗಳನ್ನು ನೇರವಾಗಿ ರಾಜ್ಯದ ಜನರಿಗೆ ತಲುಪಿಸಿದ್ದೇವೆ ಎಂದು ತಿಳಿಸಿದರು.

ಅಮಾರ್ತ್ಯಸೇನ್, ಅಭಿಜಿತ್ ಬ್ಯಾನರ್ಜಿ ಮುಂತಾದ ಆರ್ಥಿಕ ತಜ್ಞರ ಜೊತೆಗೆ ದಿನ ಪತ್ರಿಕೆಗಳು ಮತ್ತು ವಿಶ್ವ ವಿದ್ಯಾಲಯಗಳ ಅಧ್ಯಯನಗಳು ನಮ್ಮ ಗ್ಯಾರಂಟಿ ಯೋಜನೆಗಳ ಬಗ್ಗೆ ಸದಾಭಿಪ್ರಾಯ ವ್ಯಕ್ತಪಡಿಸಿವೆ. ಹೀಗಿದ್ದರೂ ಬಿಜೆಪಿಯವರು ಜನರನ್ನು ತಪ್ಪು ದಾರಿಗೆಳೆಯುವುದು ಖಂಡನೀಯ ಎಂದರು.

ಕೇಂದ್ರ ಸರ್ಕಾರ ರಾಜ್ಯಕ್ಕೆ ಅನುದಾನ ನೀಡದೇ ಅನ್ಯಾಯ ಮಾಡುತ್ತಿದೆ. ನಮ್ಮ ಸರ್ಕಾರ 1000 ದಿನಗಳನ್ನು ಯಶಸ್ವಿಯಾಗಿ ಆಡಳಿತ ನಡೆಸಿದ್ದು, ನುಡಿದಂತೆ ನಡೆಯುವುದು ಕಾಂಗ್ರೆಸ್ ಸರ್ಕಾರ ಮಾತ್ರ. 1000 ದಿನಗಳ ಯಶಸ್ವೀ ಆಡಳಿತ ನಮ್ಮ ಜನಪರ ಬದ್ಧತೆಗೆ ಸಾಕ್ಷಿಯಾಗಿದೆ ಎಂದು ಹೇಳಿದರು.

ನಾವು ಎಲ್ಲ ಜಾತಿ ಧರ್ಮ ಭಾಷೆಯ ಜನರಿಗೆ ಸೇರಿದಂತೆ ಎಲ್ಲರನ್ನೊಳಗೊಂಡ ಅಭಿವೃದ್ಧಿಯಲ್ಲಿ ನಂಬಿಕೆಯಿರಿಸಿದ್ದೇವೆ. ನಾವು ಅಸಮಾನತೆ ನೀಗಿಸುವ ಕಾಯಕದಲ್ಲಿ ತೊಡಗಿದ್ದೇವೆ. ಬಿಜೆಪಿಯವರು 4 ವರ್ಷ ಏನು ಮಾಡಿಲ್ಲ. ಈಗ ಬಿಜೆಪಿಯವರ ಮಾತುಗಳನ್ನು ಗಂಭೀರವಾಗಿ ತೆಗೆದುಕೊಳ್ಳುವ ಅಗತ್ಯವಿಲ್ಲ ಎಂದು ತಿಳಿಸಿದರು.

ಸರ್ಕಾರ ನಿನ್ನೆಗೆ ಒಂದು ಸಾವಿರ ದಿನ ಪೂರೈಸಿದ್ದು, ಈ ಸಾವಿರ ದಿನಗಳಲ್ಲಿ ನಮ್ಮ ಸಾಧನೆಯೇ ನಮ್ಮ ಬದ್ಧತೆಯಾಗಿದೆ. ಬಡವರು, ದಲಿತರು, ಹಿಂದುಳಿದ ವರ್ಗದವರು, ಅಲ್ಪಸಂಖ್ಯಾತರು, ಮಹಿಳೆಯರು, ಕಾರ್ಮಿಕರ ಪರವಾಗಿ ನಾವು ನಿಲ್ಲುತ್ತೇವೆ ಎಂದರು.

Ramesh Babu

Journalist

Recent Posts

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

21 hours ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

1 day ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

4 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

4 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

4 days ago