ಕೇಂದ್ರ ಸರ್ಕಾರ ರಾಜ್ಯಕ್ಕೆ ಮಾಡುತ್ತಿರುವ ಅನ್ಯಾಯದ ವಿರುದ್ಧ ನಮ್ಮ ಸಂಸದರು ಧ್ವನಿ ಎತ್ತಬೇಕು- ಕನ್ನಡ ಪಕ್ಷದ ಮುಖಂಡ ಸಂಜೀವ್ ನಾಯಕ ಒತ್ತಾಯ

ಕೇಂದ್ರ ಸರ್ಕಾರದ ಕಳಸಾ ಬಂಡೂರಿ ನಾಲಾ ಯೋಜನೆ ಜಾರಿಗೆ ಒಪ್ಪಿಗೆ ನೀಡಬೇಕು. ಕುಡಿಯುವ ನೀರಿನ ವಿಚಾರದಲ್ಲಿಯೂ ಮಹಾರಾಷ್ಟ್ರ ಮತ್ತು ಗೋವಾ ಸರ್ಕಾರಗಳು ರಾಜಕೀಯ ಮಾಡುತ್ತಿವೆ. ಇದನ್ನು ಕನ್ನಡಿಗರು ಪ್ರತಿಭಟಿಸಬೇಕು ಕನ್ನಡಿಗರು ಇಂದು ನಮ್ಮ ಹಕ್ಕಿಗಾಗಿ ಹೋರಾಟ ಮಾಡುವ ಅನಿವಾರ್ಯತೆ ಎದುರಾಗಿದೆ. ಕೇಂದ್ರ ಸರಕಾರ ಮಾಡುತ್ತಿರುವ ಅನ್ಯಾಯದ ವಿರುದ್ಧ ನಮ್ಮ ಸಂಸದರು ಧ್ವನಿ ಎತ್ತಬೇಕು. ಸರಕಾರ ಕನ್ನಡಿಗರ ಭಾವನೆಗಳನ್ನು ಅರ್ಥ ಮಾಡಿಕೊಂಡು ಸ್ಪಂದಿಸದಿದ್ದರೆ ಮುಂದೆ ಉಗ್ರ ಹೋರಾಟ ಮಾಡುತ್ತೇವೆ ಎಂದು ಕನ್ನಡ ಪಕ್ಷದ ಮುಖಂಡರಾದ ಸಂಜೀವ್ ನಾಯಕ ಅವರು ಎಚ್ಚರಿಕೆ ನೀಡಿದರು.

ನಗರದ ಅಂಚೆ ಕಚೇರಿಯ ಆವರಣದಲ್ಲಿ ಕನ್ನಡ ಪಕ್ಷದ ವತಿಯಿಂದ ಕೇಂದ್ರ ಸರ್ಕಾರದ ಧೋರಣೆ ಖಂಡಿಸಿ ನಡೆದ  ಪ್ರತಿಭಟನೆಯಲ್ಲಿ ಭಾಗಿಯಾಗಿ ಅವರು ಮಾತನಾಡಿದರು‌.

ಒಕ್ಕೂಟ ವ್ಯವಸ್ಥೆಯಲ್ಲಿ ಕರ್ನಾಟಕ ರಾಜ್ಯಕ್ಕೆ ಕೇಂದ್ರ ಸರಕಾರ ಮಲತಾಯಿ ಧೋರಣೆಯನ್ನು ಅನುಸರಿಸುತ್ತಾ ಬಂದಿದೆ. ಇದರಿಂದ ರಾಜ್ಯದ ಭಾಷೆ ರಾಜ್ಯದ ಅಭಿವೃದ್ಧಿಗೆ ಹಿನ್ನಡೆಯುಂಟಾಗಿತ್ತಿದೆ. ಕೇಂದ್ರ ಸರಕಾರಿದಿಂದ  ಕನ್ನಡ ಭಾಷೆಯನ್ನು ನಿಷ್ಕ್ರಿಯಗೊಳಿಸುವ ಹುನ್ನಾರ ನಡೆಯುತ್ತಿದೆ. ಕನ್ನಡಿಗರೇ ಸ್ಥಾಪಿಸಿ ಬೆಳೆಸಿದ ಬ್ಯಾಂಕ್ ಗಳನ್ನು  ವಿಲೀನಗೊಳಿಸಿ ರಾಜ್ಯಕ್ಕೆ ಅನ್ಯಾಯ ಎಸೆಯಲಾಗಿದೆ. ಒಂದೇ ಭಾಷೆ ಒಂದೇ ದೇಶ ಎಂಬ ಕಲ್ಪನೆ ಅಡಿಯಲ್ಲಿ  ಕೇಂದ್ರ ಸರಕಾರ ಪ್ರಾದೇಶಿಕ ಭಾಷೆಗಳನ್ನು ಕಡೆಗಣಿಸುತ್ತಾ ಬಂದಿದೆ ಈ ಬಗ್ಗೆ ನಾಗರಿಕರು ಎಚ್ಚೆತ್ತುಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಕನ್ನಡಿಗರಿಗೆ ಅಪಾಯ ಕಟ್ಟಿಟ್ಟ ಬುತ್ತಿ ಎಂದರು.

ಈ ವೇಳೆ ಕನ್ನಡ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಡಿ.ಪಿ ಆಂಜನೇಯ, ಜಿಲ್ಲಾಧ್ಯಕ್ಷ ಮುನಿಪಾಪಯ್ಯ, ತಾ.ಗೌ.ಅಧ್ಯಕ್ಷ ರಂಗನಾಥ್, ತಾ. ಅಧ್ಯಕ್ಷ. ಡಿ.ವೆಂಕಟೇಶ್, ತಾ.ಪ್ರಧಾನ ಕಾರ್ಯದರ್ಶಿ ಬೋರೇಗೌಡ, ಕರವೇ ಪ್ರವೀಣ್ ಶೆಟ್ಟಿ ಬಳಗದ ವೆಂಕಟೇಶ್, ಕನ್ನಡ ಸಂಘಟನೆಗಳ ಒಕ್ಕೂಟದ ಜಿಲ್ಲಾಧ್ಯಕ್ಷ ನಂಜಪ್ಪ, ಛಲವಾದ ಮಹಾಸಭದ ಗುರುರಾಜು ಪ್ರಜಾವಿಮೋಚನಾ ಚಳುವಳಿಯ ಗುಳ್ಯಹನುಮಣ್ಣ, ಶಿವರಾಜಕುಮಾರ್ ಸೇನಾ ಸಮಿತಿ ಅಧ್ಯಕ್ಷ ರಮೇಶ್‌ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

22 hours ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

1 day ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

1 day ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

2 days ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

2 days ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

2 days ago