Categories: ಹವಾಮಾನ

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ: 16 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಕೇರಳಕ್ಕೆ ಮುಂಗಾರು ಮಳೆ ಅವಧಿಗೂ ಮುನ್ನವೇ ಆಗಮನ

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸಿದ್ದು, ಕೇರಳದಾದ್ಯಂತ ಭಾರೀ ಮಳೆಯಾಗುತ್ತಿದೆ. 16 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಕೇರಳಕ್ಕೆ ಮುಂಗಾರು ಮಳೆ ಅವಧಿಗೂ ಮುನ್ನವೇ ಆಗಮಿಸಿದೆ. 2009ರ ನಂತರ ಮೊದಲ ಬಾರಿಗೆ, ಮಾನ್ಸೂನ್ ಭಾರತದ ಮುಖ್ಯ ಭೂಭಾಗವನ್ನು ಇಷ್ಟು ಬೇಗ ತಲುಪಿದೆ.

ನೈಋತ್ಯ ಮಾನ್ಸೂನ್ ಸಾಮಾನ್ಯವಾಗಿ ಜೂನ್ 1ರ ವೇಳೆಗೆ ಕೇರಳವನ್ನು ಪ್ರವೇಶಿಸುತ್ತದೆ. ಜುಲೈ 8ರ ವೇಳೆಗೆ ಇಡೀ ದೇಶವನ್ನು ಆವರಿಸುತ್ತದೆ. ಇದು ಸೆಪ್ಟೆಂಬರ್ 17ರ ಸುಮಾರಿಗೆ ವಾಯುವ್ಯ ಭಾರತದಿಂದ ಹಿಮ್ಮೆಟ್ಟಲು ಪ್ರಾರಂಭಿಸುತ್ತದೆ. ಅಕ್ಟೋಬರ್ 15 ರ ಹೊತ್ತಿಗೆ ಸಂಪೂರ್ಣವಾಗಿ ಹಿಮ್ಮೆಟ್ಟುತ್ತದೆ.

ಮಾನ್ಸೂನ್ ಕಳೆದ ವರ್ಷ ಮೇ 30 ರಂದು, 2023 ರಲ್ಲಿ ಜೂನ್ 8 ರಂದು, 2022 ರಲ್ಲಿ ಮೇ 29 ರಂದು, 2021 ರಲ್ಲಿ ಜೂನ್ 3 ರಂದು, 2020 ರಲ್ಲಿ ಜೂನ್ 1 ರಂದು, 2019 ರಲ್ಲಿ ಜೂನ್ 8 ರಂದು ಮತ್ತು 2018 ರಲ್ಲಿ ಮೇ 29 ರಂದು ದಕ್ಷಿಣ ರಾಜ್ಯಕ್ಕೆ ಆಗಮಿಸಿತು.

ಈ ವರ್ಷದ ಮಾನ್ಸೂನ್‌ನಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಏಪ್ರಿಲ್‌ನಲ್ಲಿ ಐಎಂಡಿ ಮುನ್ಸೂಚನೆ ನೀಡಿತ್ತು.

Ramesh Babu

Journalist

Recent Posts

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

4 hours ago

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

6 hours ago

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

10 hours ago

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪ.ಪಂ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರಿಂದ ಹಲ್ಲೆ: ದೂರು ದಾಖಲು

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ‌ಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…

11 hours ago

ಬೆಂ.ಗ್ರಾ ನೂತನ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಆಗಿ ಎ.ವಿ ಲಕ್ಷ್ಮಿನಾರಾಯಣ ನೇಮಕ

ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…

13 hours ago

ಬೆಳಗಾವಿಯಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾ ದಾಳಿ: ದಾಳಿ ವೇಳೆ ಕೋಟಿ ಕೋಟಿ ಅಕ್ರಮ ಆಸ್ತಿ ಪತ್ತೆ

ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ  14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…

13 hours ago