ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸಿದ್ದು, ಕೇರಳದಾದ್ಯಂತ ಭಾರೀ ಮಳೆಯಾಗುತ್ತಿದೆ. 16 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಕೇರಳಕ್ಕೆ ಮುಂಗಾರು ಮಳೆ ಅವಧಿಗೂ ಮುನ್ನವೇ ಆಗಮಿಸಿದೆ. 2009ರ ನಂತರ ಮೊದಲ ಬಾರಿಗೆ, ಮಾನ್ಸೂನ್ ಭಾರತದ ಮುಖ್ಯ ಭೂಭಾಗವನ್ನು ಇಷ್ಟು ಬೇಗ ತಲುಪಿದೆ.
ನೈಋತ್ಯ ಮಾನ್ಸೂನ್ ಸಾಮಾನ್ಯವಾಗಿ ಜೂನ್ 1ರ ವೇಳೆಗೆ ಕೇರಳವನ್ನು ಪ್ರವೇಶಿಸುತ್ತದೆ. ಜುಲೈ 8ರ ವೇಳೆಗೆ ಇಡೀ ದೇಶವನ್ನು ಆವರಿಸುತ್ತದೆ. ಇದು ಸೆಪ್ಟೆಂಬರ್ 17ರ ಸುಮಾರಿಗೆ ವಾಯುವ್ಯ ಭಾರತದಿಂದ ಹಿಮ್ಮೆಟ್ಟಲು ಪ್ರಾರಂಭಿಸುತ್ತದೆ. ಅಕ್ಟೋಬರ್ 15 ರ ಹೊತ್ತಿಗೆ ಸಂಪೂರ್ಣವಾಗಿ ಹಿಮ್ಮೆಟ್ಟುತ್ತದೆ.
ಮಾನ್ಸೂನ್ ಕಳೆದ ವರ್ಷ ಮೇ 30 ರಂದು, 2023 ರಲ್ಲಿ ಜೂನ್ 8 ರಂದು, 2022 ರಲ್ಲಿ ಮೇ 29 ರಂದು, 2021 ರಲ್ಲಿ ಜೂನ್ 3 ರಂದು, 2020 ರಲ್ಲಿ ಜೂನ್ 1 ರಂದು, 2019 ರಲ್ಲಿ ಜೂನ್ 8 ರಂದು ಮತ್ತು 2018 ರಲ್ಲಿ ಮೇ 29 ರಂದು ದಕ್ಷಿಣ ರಾಜ್ಯಕ್ಕೆ ಆಗಮಿಸಿತು.
ಈ ವರ್ಷದ ಮಾನ್ಸೂನ್ನಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಏಪ್ರಿಲ್ನಲ್ಲಿ ಐಎಂಡಿ ಮುನ್ಸೂಚನೆ ನೀಡಿತ್ತು.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…