ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸಿದ್ದು, ಕೇರಳದಾದ್ಯಂತ ಭಾರೀ ಮಳೆಯಾಗುತ್ತಿದೆ. 16 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಕೇರಳಕ್ಕೆ ಮುಂಗಾರು ಮಳೆ ಅವಧಿಗೂ ಮುನ್ನವೇ ಆಗಮಿಸಿದೆ. 2009ರ ನಂತರ ಮೊದಲ ಬಾರಿಗೆ, ಮಾನ್ಸೂನ್ ಭಾರತದ ಮುಖ್ಯ ಭೂಭಾಗವನ್ನು ಇಷ್ಟು ಬೇಗ ತಲುಪಿದೆ.
ನೈಋತ್ಯ ಮಾನ್ಸೂನ್ ಸಾಮಾನ್ಯವಾಗಿ ಜೂನ್ 1ರ ವೇಳೆಗೆ ಕೇರಳವನ್ನು ಪ್ರವೇಶಿಸುತ್ತದೆ. ಜುಲೈ 8ರ ವೇಳೆಗೆ ಇಡೀ ದೇಶವನ್ನು ಆವರಿಸುತ್ತದೆ. ಇದು ಸೆಪ್ಟೆಂಬರ್ 17ರ ಸುಮಾರಿಗೆ ವಾಯುವ್ಯ ಭಾರತದಿಂದ ಹಿಮ್ಮೆಟ್ಟಲು ಪ್ರಾರಂಭಿಸುತ್ತದೆ. ಅಕ್ಟೋಬರ್ 15 ರ ಹೊತ್ತಿಗೆ ಸಂಪೂರ್ಣವಾಗಿ ಹಿಮ್ಮೆಟ್ಟುತ್ತದೆ.
ಮಾನ್ಸೂನ್ ಕಳೆದ ವರ್ಷ ಮೇ 30 ರಂದು, 2023 ರಲ್ಲಿ ಜೂನ್ 8 ರಂದು, 2022 ರಲ್ಲಿ ಮೇ 29 ರಂದು, 2021 ರಲ್ಲಿ ಜೂನ್ 3 ರಂದು, 2020 ರಲ್ಲಿ ಜೂನ್ 1 ರಂದು, 2019 ರಲ್ಲಿ ಜೂನ್ 8 ರಂದು ಮತ್ತು 2018 ರಲ್ಲಿ ಮೇ 29 ರಂದು ದಕ್ಷಿಣ ರಾಜ್ಯಕ್ಕೆ ಆಗಮಿಸಿತು.
ಈ ವರ್ಷದ ಮಾನ್ಸೂನ್ನಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಏಪ್ರಿಲ್ನಲ್ಲಿ ಐಎಂಡಿ ಮುನ್ಸೂಚನೆ ನೀಡಿತ್ತು.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…