ಕೇಳಚಂದ್ರ ಕೌಶಲ್ಯ ತರಬೇತಿ ಕೇಂದ್ರದಿಂದ ಸ್ವಾವಲಂಬಿ ಬದುಕಿಗೆ ದಾರಿ- ಸುಜಾ ಕೆ.ಜೆ.ಜಾರ್ಜ್

*ಬೆಂಗಳೂರು, ಫೆಬ್ರವರಿ 12, 2026*: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದ ಮೂಲಕ ಯುವ ಸಮುದಾಯಕ್ಕೆ ಕೌಶಲ್ಯ ನೀಡಿ ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡುವ ಮಹೋನ್ನತ ಕಾರ್ಯವನ್ನು ಕ್ಷೇತ್ರದ ಶಾಸಕರೂ ಆದ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಕೈಗೊಳ್ಳುತ್ತಿರುವುದು ಶ್ಲಾಘನೀಯ ಎಂದು ಕೇಳಚಂದ್ರ ಫೌಂಡೇಶನ್‌ನ ವ್ಯವಸ್ಥಾಪಕ ಟ್ರಸ್ಟಿ ಸುಜಾ ಕೆ.ಜೆ. ಜಾರ್ಜ್ ಹೇಳಿದ್ದಾರೆ.

ಜೀವನಹಳ್ಳಿಯಲ್ಲಿರುವ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ಕೌಶಲ್ಯ ಕೋರ್ಸ್‌ಗಳನ್ನು ಪೂರ್ಣಗೊಳಿಸಿದವರಿಗೆ ಗುರುವಾರ ಪ್ರಮಾಣಪತ್ರಗಳನ್ನು ವಿತರಿಸಿದ ಬಳಿಕ ಮಾತನಾಡಿದ ಸುಜಾ ಕೆ.ಜೆ.ಜಾರ್ಜ್, “ಈ ಕೌಶಲ್ಯ ಅಭಿವೃದ್ಧಿ ಕೇಂದ್ರವು ಸಚಿವರಾದ ಕೆ.ಜೆ. ಜಾರ್ಜ್ ಮತ್ತು ರಾಣಾ ಜಾರ್ಜ್ ಅವರ ದೂರದೃಷ್ಟಿಯ ಯೋಜನೆಯಾಗಿದ್ದು, ಈ ಮೂಲಕ ಯುವ ಸಮುದಾಯವನ್ನು ಸಬಲೀಕರಣಗೊಳಿಸುತ್ತಿದೆ,” ಎಂದರು.

“ಕೇಳಚಂದ್ರ ಫೌಂಡೇಷನ್ ನ ಕೌಶಲ್ಯ ಅಭಿವೃದ್ಧಿ ಕೇಂದ್ರಗಳ ಮೂಲಕ ತರಬೇತಿ ನೀಡುವುದು ಮಾತ್ರವಲ್ಲದೆ, ಆರೋಗ್ಯ, ಶಿಕ್ಷಣ, ಕ್ರೀಡೆ ಮುಂತಾದ ಕ್ಷೇತ್ರಗಳಲ್ಲೂ ಕ್ಷೇತ್ರದ ಜನರಿಗೆ ವಿವಿಧ ಸೇವೆ, ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಸಮಾಜಕ್ಕೆ ಸಹಾಯ ಮಾಡುವುದನ್ನು ನೋಡಿದಾಗ ನನಗೆ ಅಪಾರ ಸಂತೋಷವಾಗುತ್ತದೆ. ಅದೇ ರೀತಿ ಕ್ಷೇತ್ರದ ಜನರು ಇದರ ಅನುಕೂಲ ಪಡೆಯುತ್ತಿರುವುದರಿಂದ ನಮ್ಮ ಕುಟುಂಬಕ್ಕೂ ಸಂತೋಷ,” ಎಂದು ತಿಳಿಸಿದರು.

“ಈ ಮೂರು ತಿಂಗಳ ತರಬೇತಿಯಲ್ಲಿ ನಿಮ್ಮ ಕಠಿಣ ಪರಿಶ್ರಮಕ್ಕೆ ಭವಿಷ್ಯದಲ್ಲಿ ಉತ್ತಮ ಫಲಿತಾಂಶ ಸಿಗಲಿದೆ. ಹೊಸತನ್ನು ಕಲಿಯುವಾಗ ಹೊಸ ಕೌಶಲ್ಯದೊಂದಿಗೆ ಹೊಸ ಸ್ನೇಹಿತರನ್ನೂ ಹೊಂದಿ ನಿಮ್ಮ ಅನುಭವವನ್ನು ಹೆಚ್ಚಿಸಿಕೊಳ್ಳಲು ಅನುಕೂಲವಾಗುತ್ತದೆ. ಯುವ ಸಮುದಾಯ ಮಾದಕ ವ್ಯಸನಗಳಿಗೆ ಬಲಿಯಾಗದೆ ಕೌಶಲ್ಯ ಹೊಂದುವ ಮೂಲಕ ಕುಟುಂಬನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡಬಹುದು,” ಎಂದು ಹೇಳಿದರು.

*ಆರೋಗ್ಯ ಕ್ಷೇತ್ರದಲ್ಲಿ ದಾಖಲೆಯ ಕೊಡುಗೆ*:

“ಕೇಳಚಂದ್ರ ಫೌಂಡೇಷನ್ ಆರೋಗ್ಯ ಕ್ಷೇತ್ರಕ್ಕೆ ದಾಖಲೆ ಎನ್ನಬಹುದಾದ ಕೊಡುಗೆ ನೀಡಿದೆ. ಇಲ್ಲಿನ ಡಯಾಲಿಸಿಸ್ ಕೇಂದ್ರದಲ್ಲಿ 2014 ರಿಂದ ಈವರೆಗೆ 38,000 ಕ್ಕೂ ಹೆಚ್ಚು ಉಚಿತ ಡಯಾಲಿಸಿಸ್ ಗಳನ್ನು ಮಾಡಲಾಗಿದೆ. ಮಧುಮೇಹ ಮತ್ತು ಅಧಿಕ ರಕ್ತದೊತ್ತಡದಂತಹ ಸಮಸ್ಯೆಗಳಿಂದ ಬಳಲುತ್ತಿರುವವರಿಗೆ 1.1 ಲಕ್ಷಕ್ಕೂ ಹೆಚ್ಚು ಆರೋಗ್ಯ ಸಮಾಲೋಚನೆಗಳನ್ನು ಒದಗಿಸಲಾಗಿದೆ. 1.20 ಲಕ್ಷಕ್ಕೂ ಹೆಚ್ಚು ನಾಗರಿಕರು ನಮ್ಮ ಲ್ಯಾಬ್ ಮತ್ತು ಉಚಿತ ಔಷಧ ಸೌಲಭ್ಯ ಪಡೆದಿದ್ದಾರೆ. 30,000 ಕ್ಕೂ ಹೆಚ್ಚು ನೋಂದಾಯಿತ ಹೊರರೋಗಿಗಳು ಅನುಕೂಲ ಪಡೆದುಕೊಂಡಿದ್ದಾರೆ. ಸಮುದಾಯ ಆರೋಗ್ಯ ಸಹಾಯಕರು 80,000ಕ್ಕೂ ಹೆಚ್ಚು ಮನೆಗಳಿಗೆ ಭೇಟಿ ನೀಡಿ, ಕುಟುಂಬಗಳಿಗೆ ಆರೋಗ್ಯ ರಕ್ಷಣೆ, ಪಿಂಚಣಿ ಮತ್ತು ಕಲ್ಯಾಣ ಯೋಜನೆಗಳನ್ನು ಪಡೆಯಲು ಸಹಾಯ ಮಾಡುತ್ತಿದ್ದಾರೆ,” ಎಂದು ಸುಜಾ ಕೆ.ಜೆ.ಜಾರ್ಜ್ ಮಾಹಿತಿ ನೀಡಿದರು.

“ಆರೋಗ್ಯ ಮಾತ್ರವಲ್ಲದೆ ಕಂಪ್ಯೂಟರ್‌ ತರಬೇತಿ, ಟೈಲರಿಂಗ್, ಕರಕುಶಲ ವಸ್ತುಗಳು ಮತ್ತು ಆಭರಣ ತಯಾರಿಕೆಯಲ್ಲಿ 1600ಕ್ಕೂ ಹೆಚ್ಚು ಮಹಿಳೆಯರು ಕೌಶಲ್ಯ ಪಡೆದಿದ್ದಾರೆ, ಡೇಟಾ ಎಂಟ್ರಿ, ಎಲೆಕ್ಟ್ರೀಷಿಯನ್ ಕೆಲಸ ಮತ್ತು ಮೊಬೈಲ್ ರಿಪೇರಿಗಳಲ್ಲಿ 800ಕ್ಕೂ ಹೆಚ್ಚು ಯುವಕರು ತರಬೇತಿ ಹೊಂದಿದ್ದಾರೆ. ಇದಲ್ಲೆ, ಶಾಲೆಗಳು, ಆಟದ ಮೈದಾನಗಳನ್ನು ಮೇಲ್ದರ್ಜೆಗೇರಿಸುವ ಮೂಲಕ ಶಿಕ್ಷಣ ಮತ್ತು ಕ್ರೀಡೆಗೂ ಆದ್ಯತೆ ನೀಡಲಾಗಿದೆ. ಉದ್ಯಾನಗಳನ್ನು ಅಭಿವೃದ್ಧಿಪಡಿಸಿ ಹಸಿರೀಕರಣಕ್ಕೆ ಒತ್ತು ನೀಡಲಾಗುತ್ತಿದೆ,” ಎಂದರು.

ಕೇಳಚಂದ್ರ ಫೌಂಡೇಷನ್ ನಿಂದ ಆರೋಗ್ಯ, ಶಿಕ್ಷಣ, ಕೌಶಲ್ಯ ತರಬೇತಿ ಸೇರಿದಂತೆ ವಿವಿಧ ಜನರ ಕಾರ್ಯಕ್ರಮಗಳನ್ನು ಕೈಗೊಳ್ಳುವ ಮೂಲಕ ಸರ್ವಜ್ಞನಗರ ಕ್ಷೇತ್ರದ ಜನರನ್ನು ಸುಶಿಕ್ಷತರು, ಆರೋಗ್ಯವಂತರು ಮತ್ತು ಕೌಶಲ್ಯವಂತರನ್ನಾಗಿ ಮಾಡಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ. ಆ ಮೂಲಕ ಸರ್ವಜ್ಞನಗರ ಕ್ಷೇತ್ರವನ್ನು ಮಾದರಿ ಕ್ಷೇತ್ರವಾಗಿ ರೂಪಿಸಲಾಗುತ್ತಿದೆ. ಅದರ ಒಂದು ಭಾಗವಾಗಿ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣಪತ್ರ ವಿತರಿಸಿ, ಅವರ ಭವಿಷ್ಯಕ್ಕೆ ಭದ್ರ ಬುನಾದಿ ಹಾಕಲಾಗುತ್ತಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

ಹೆಣ್ಣೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಎ. ಪುಲಿಕೇಶಿ, ಮಾರುತಿ ಸೇವಾನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಘ ದೇವರಾಜ್, ಜೀವನಹಳ್ಳಿ ಕೌಶಲ್ಯ ಅಭಿವೃದ್ಧಿ ಕೇಂದ್ರದ ಸಂಯೋಜಕಿ ಲತಾ ಗಣೇಶ್, ಕೆ.ಜಿ. ಹಳ್ಳಿ ಕೌಶಲ್ಯ ಅಭಿವೃದ್ಧಿ ಕೇಂದ್ರದ ಸಂಯೋಜಕಿ ಡಾ. ತ್ರಿವೇಣಿ, ಸಚಿವ ಕೆ.ಜೆ.ಜಾರ್ಜ್ ಅವರ ರಾಜಕೀಯ ಕಾರ್ಯದರ್ಶಿ ಮೆನನ್ ಮತ್ತಿತರರು ಪಾಲ್ಗೊಂಡಿದ್ದರು.

Ramesh Babu

Journalist

Recent Posts

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

18 hours ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

1 day ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

3 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

4 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

4 days ago