ಕೇಳಚಂದ್ರ ಕೌಶಲ್ಯ ತರಬೇತಿ ಕೇಂದ್ರದಿಂದ ಸ್ವಾವಲಂಬಿ ಬದುಕಿಗೆ ದಾರಿ- ಸುಜಾ ಕೆ.ಜೆ.ಜಾರ್ಜ್

*ಬೆಂಗಳೂರು, ಫೆಬ್ರವರಿ 12, 2026*: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದ ಮೂಲಕ ಯುವ ಸಮುದಾಯಕ್ಕೆ ಕೌಶಲ್ಯ ನೀಡಿ ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡುವ ಮಹೋನ್ನತ ಕಾರ್ಯವನ್ನು ಕ್ಷೇತ್ರದ ಶಾಸಕರೂ ಆದ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಕೈಗೊಳ್ಳುತ್ತಿರುವುದು ಶ್ಲಾಘನೀಯ ಎಂದು ಕೇಳಚಂದ್ರ ಫೌಂಡೇಶನ್‌ನ ವ್ಯವಸ್ಥಾಪಕ ಟ್ರಸ್ಟಿ ಸುಜಾ ಕೆ.ಜೆ. ಜಾರ್ಜ್ ಹೇಳಿದ್ದಾರೆ.

ಜೀವನಹಳ್ಳಿಯಲ್ಲಿರುವ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ಕೌಶಲ್ಯ ಕೋರ್ಸ್‌ಗಳನ್ನು ಪೂರ್ಣಗೊಳಿಸಿದವರಿಗೆ ಗುರುವಾರ ಪ್ರಮಾಣಪತ್ರಗಳನ್ನು ವಿತರಿಸಿದ ಬಳಿಕ ಮಾತನಾಡಿದ ಸುಜಾ ಕೆ.ಜೆ.ಜಾರ್ಜ್, “ಈ ಕೌಶಲ್ಯ ಅಭಿವೃದ್ಧಿ ಕೇಂದ್ರವು ಸಚಿವರಾದ ಕೆ.ಜೆ. ಜಾರ್ಜ್ ಮತ್ತು ರಾಣಾ ಜಾರ್ಜ್ ಅವರ ದೂರದೃಷ್ಟಿಯ ಯೋಜನೆಯಾಗಿದ್ದು, ಈ ಮೂಲಕ ಯುವ ಸಮುದಾಯವನ್ನು ಸಬಲೀಕರಣಗೊಳಿಸುತ್ತಿದೆ,” ಎಂದರು.

“ಕೇಳಚಂದ್ರ ಫೌಂಡೇಷನ್ ನ ಕೌಶಲ್ಯ ಅಭಿವೃದ್ಧಿ ಕೇಂದ್ರಗಳ ಮೂಲಕ ತರಬೇತಿ ನೀಡುವುದು ಮಾತ್ರವಲ್ಲದೆ, ಆರೋಗ್ಯ, ಶಿಕ್ಷಣ, ಕ್ರೀಡೆ ಮುಂತಾದ ಕ್ಷೇತ್ರಗಳಲ್ಲೂ ಕ್ಷೇತ್ರದ ಜನರಿಗೆ ವಿವಿಧ ಸೇವೆ, ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಸಮಾಜಕ್ಕೆ ಸಹಾಯ ಮಾಡುವುದನ್ನು ನೋಡಿದಾಗ ನನಗೆ ಅಪಾರ ಸಂತೋಷವಾಗುತ್ತದೆ. ಅದೇ ರೀತಿ ಕ್ಷೇತ್ರದ ಜನರು ಇದರ ಅನುಕೂಲ ಪಡೆಯುತ್ತಿರುವುದರಿಂದ ನಮ್ಮ ಕುಟುಂಬಕ್ಕೂ ಸಂತೋಷ,” ಎಂದು ತಿಳಿಸಿದರು.

“ಈ ಮೂರು ತಿಂಗಳ ತರಬೇತಿಯಲ್ಲಿ ನಿಮ್ಮ ಕಠಿಣ ಪರಿಶ್ರಮಕ್ಕೆ ಭವಿಷ್ಯದಲ್ಲಿ ಉತ್ತಮ ಫಲಿತಾಂಶ ಸಿಗಲಿದೆ. ಹೊಸತನ್ನು ಕಲಿಯುವಾಗ ಹೊಸ ಕೌಶಲ್ಯದೊಂದಿಗೆ ಹೊಸ ಸ್ನೇಹಿತರನ್ನೂ ಹೊಂದಿ ನಿಮ್ಮ ಅನುಭವವನ್ನು ಹೆಚ್ಚಿಸಿಕೊಳ್ಳಲು ಅನುಕೂಲವಾಗುತ್ತದೆ. ಯುವ ಸಮುದಾಯ ಮಾದಕ ವ್ಯಸನಗಳಿಗೆ ಬಲಿಯಾಗದೆ ಕೌಶಲ್ಯ ಹೊಂದುವ ಮೂಲಕ ಕುಟುಂಬನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡಬಹುದು,” ಎಂದು ಹೇಳಿದರು.

*ಆರೋಗ್ಯ ಕ್ಷೇತ್ರದಲ್ಲಿ ದಾಖಲೆಯ ಕೊಡುಗೆ*:

“ಕೇಳಚಂದ್ರ ಫೌಂಡೇಷನ್ ಆರೋಗ್ಯ ಕ್ಷೇತ್ರಕ್ಕೆ ದಾಖಲೆ ಎನ್ನಬಹುದಾದ ಕೊಡುಗೆ ನೀಡಿದೆ. ಇಲ್ಲಿನ ಡಯಾಲಿಸಿಸ್ ಕೇಂದ್ರದಲ್ಲಿ 2014 ರಿಂದ ಈವರೆಗೆ 38,000 ಕ್ಕೂ ಹೆಚ್ಚು ಉಚಿತ ಡಯಾಲಿಸಿಸ್ ಗಳನ್ನು ಮಾಡಲಾಗಿದೆ. ಮಧುಮೇಹ ಮತ್ತು ಅಧಿಕ ರಕ್ತದೊತ್ತಡದಂತಹ ಸಮಸ್ಯೆಗಳಿಂದ ಬಳಲುತ್ತಿರುವವರಿಗೆ 1.1 ಲಕ್ಷಕ್ಕೂ ಹೆಚ್ಚು ಆರೋಗ್ಯ ಸಮಾಲೋಚನೆಗಳನ್ನು ಒದಗಿಸಲಾಗಿದೆ. 1.20 ಲಕ್ಷಕ್ಕೂ ಹೆಚ್ಚು ನಾಗರಿಕರು ನಮ್ಮ ಲ್ಯಾಬ್ ಮತ್ತು ಉಚಿತ ಔಷಧ ಸೌಲಭ್ಯ ಪಡೆದಿದ್ದಾರೆ. 30,000 ಕ್ಕೂ ಹೆಚ್ಚು ನೋಂದಾಯಿತ ಹೊರರೋಗಿಗಳು ಅನುಕೂಲ ಪಡೆದುಕೊಂಡಿದ್ದಾರೆ. ಸಮುದಾಯ ಆರೋಗ್ಯ ಸಹಾಯಕರು 80,000ಕ್ಕೂ ಹೆಚ್ಚು ಮನೆಗಳಿಗೆ ಭೇಟಿ ನೀಡಿ, ಕುಟುಂಬಗಳಿಗೆ ಆರೋಗ್ಯ ರಕ್ಷಣೆ, ಪಿಂಚಣಿ ಮತ್ತು ಕಲ್ಯಾಣ ಯೋಜನೆಗಳನ್ನು ಪಡೆಯಲು ಸಹಾಯ ಮಾಡುತ್ತಿದ್ದಾರೆ,” ಎಂದು ಸುಜಾ ಕೆ.ಜೆ.ಜಾರ್ಜ್ ಮಾಹಿತಿ ನೀಡಿದರು.

“ಆರೋಗ್ಯ ಮಾತ್ರವಲ್ಲದೆ ಕಂಪ್ಯೂಟರ್‌ ತರಬೇತಿ, ಟೈಲರಿಂಗ್, ಕರಕುಶಲ ವಸ್ತುಗಳು ಮತ್ತು ಆಭರಣ ತಯಾರಿಕೆಯಲ್ಲಿ 1600ಕ್ಕೂ ಹೆಚ್ಚು ಮಹಿಳೆಯರು ಕೌಶಲ್ಯ ಪಡೆದಿದ್ದಾರೆ, ಡೇಟಾ ಎಂಟ್ರಿ, ಎಲೆಕ್ಟ್ರೀಷಿಯನ್ ಕೆಲಸ ಮತ್ತು ಮೊಬೈಲ್ ರಿಪೇರಿಗಳಲ್ಲಿ 800ಕ್ಕೂ ಹೆಚ್ಚು ಯುವಕರು ತರಬೇತಿ ಹೊಂದಿದ್ದಾರೆ. ಇದಲ್ಲೆ, ಶಾಲೆಗಳು, ಆಟದ ಮೈದಾನಗಳನ್ನು ಮೇಲ್ದರ್ಜೆಗೇರಿಸುವ ಮೂಲಕ ಶಿಕ್ಷಣ ಮತ್ತು ಕ್ರೀಡೆಗೂ ಆದ್ಯತೆ ನೀಡಲಾಗಿದೆ. ಉದ್ಯಾನಗಳನ್ನು ಅಭಿವೃದ್ಧಿಪಡಿಸಿ ಹಸಿರೀಕರಣಕ್ಕೆ ಒತ್ತು ನೀಡಲಾಗುತ್ತಿದೆ,” ಎಂದರು.

ಕೇಳಚಂದ್ರ ಫೌಂಡೇಷನ್ ನಿಂದ ಆರೋಗ್ಯ, ಶಿಕ್ಷಣ, ಕೌಶಲ್ಯ ತರಬೇತಿ ಸೇರಿದಂತೆ ವಿವಿಧ ಜನರ ಕಾರ್ಯಕ್ರಮಗಳನ್ನು ಕೈಗೊಳ್ಳುವ ಮೂಲಕ ಸರ್ವಜ್ಞನಗರ ಕ್ಷೇತ್ರದ ಜನರನ್ನು ಸುಶಿಕ್ಷತರು, ಆರೋಗ್ಯವಂತರು ಮತ್ತು ಕೌಶಲ್ಯವಂತರನ್ನಾಗಿ ಮಾಡಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ. ಆ ಮೂಲಕ ಸರ್ವಜ್ಞನಗರ ಕ್ಷೇತ್ರವನ್ನು ಮಾದರಿ ಕ್ಷೇತ್ರವಾಗಿ ರೂಪಿಸಲಾಗುತ್ತಿದೆ. ಅದರ ಒಂದು ಭಾಗವಾಗಿ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣಪತ್ರ ವಿತರಿಸಿ, ಅವರ ಭವಿಷ್ಯಕ್ಕೆ ಭದ್ರ ಬುನಾದಿ ಹಾಕಲಾಗುತ್ತಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

ಹೆಣ್ಣೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಎ. ಪುಲಿಕೇಶಿ, ಮಾರುತಿ ಸೇವಾನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಘ ದೇವರಾಜ್, ಜೀವನಹಳ್ಳಿ ಕೌಶಲ್ಯ ಅಭಿವೃದ್ಧಿ ಕೇಂದ್ರದ ಸಂಯೋಜಕಿ ಲತಾ ಗಣೇಶ್, ಕೆ.ಜಿ. ಹಳ್ಳಿ ಕೌಶಲ್ಯ ಅಭಿವೃದ್ಧಿ ಕೇಂದ್ರದ ಸಂಯೋಜಕಿ ಡಾ. ತ್ರಿವೇಣಿ, ಸಚಿವ ಕೆ.ಜೆ.ಜಾರ್ಜ್ ಅವರ ರಾಜಕೀಯ ಕಾರ್ಯದರ್ಶಿ ಮೆನನ್ ಮತ್ತಿತರರು ಪಾಲ್ಗೊಂಡಿದ್ದರು.

Ramesh Babu

Journalist

Recent Posts

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

2 hours ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

4 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

9 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

11 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

14 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

1 day ago