ಕಾಂಗ್ರೆಸ್ ಪಕ್ಷ ಜಾತ್ಯಾತೀತ ತತ್ವದಲ್ಲಿ ನಂಬಿಕೆ ಇಟ್ಟಿದೆ. ಸಮಾಜದಲ್ಲಿನ ಎಲ್ಲಾ ಜಾತಿ, ಧರ್ಮದ ಪರವಾಗಿ ನಾವಿದ್ದೇವೆ. ಕೇವಲ ಒಂದು ಜಾತಿ, ಧರ್ಮದ ಪರವಾಗಿರಲು ನಾವು ಬಿಜೆಪಿ ಅಲ್ಲ. ಧರ್ಮದ ಆಧಾರದ ಮೇಲೆ ಸಮಜವನ್ನು ಒಡೆಯುವವರಲ್ಲ. ನಾವು ಜಾತ್ಯಾತೀತ ತತ್ವ ಹಾಗೂ ಧರ್ಮನಿರಪೇಕ್ಷತೆಯಲ್ಲಿ ನಂಬಿಕೆಯುಳ್ಳವರು. ಕಾಂಗ್ರೆಸ್ ಜಾತ್ಯಾತೀತ ಪಕ್ಷ. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಪಕ್ಷ ನಮ್ಮದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ದೇವದುರ್ಗದಲ್ಲಿ ಮಾಧ್ಯಮದವರೊಂದಿಗೆ ಈ ಕುರಿತು ಅವರು ಮಾತನಾಡಿ, ಲೋಕಸಭಾ ಚುನಾವಣೆಯಲ್ಲಿ ಮೈಸೂರು ಕ್ಷೇತ್ರದಿಂದ ಮಾಜಿ ಶಾಸಕ ಯತೀಂದ್ರ ಅವರನ್ನು ಕಣಕ್ಕಿಳಿಸಿದರೆ ಸ್ವಾಗತಿಸುವುದಾಗಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ನಾನಾಗಲಿ, ಯತೀಂದ್ರ ಆಗಲಿ ಈ ರೀತಿ ಹೇಳಿಲ್ಲ. ಪ್ರತಾಪ್ ಸಿಂಹ ಅವರಿಗೆ ಸೋಲುತ್ತೇನೆ ಎಂದು ಹೆದರಿಕೆ ಶುರುವಾಗಿದೆ ಹಾಗಾಗಿ ಏನೇನೋ ಹೇಳಿಕೆ ನೀಡುತ್ತಾರೆ. ಇವೆಲ್ಲ ಊಹಾಪೋಹಗಳು ಅಷ್ಟೇ ಎಂದು ಸ್ಪಷ್ಟೀಕರಣ ನೀಡಿದರು.
ನಗರಾಭಿವೃದ್ಧಿ ಸಚಿವ ಚುನಾವಣಾ ವೀಕ್ಷಕರಾಗಿ ಹೋಗಿದ್ದರು. ಅವರು ನೀಡಿರುವ ವರದಿ ಆಧಾರದ ಮೇಲೆ ನಾವು ನಿರ್ಧಾರ ಕೈಗೊಳ್ಳುತ್ತೇವೆ. ಕ್ಷೇತ್ರದಲ್ಲಿ ಶಾಸಕರು, ಮಾಜಿ ಶಾಸಕರು, ಸಂಸದರು, ಅಭ್ಯರ್ಥಿಯಾಗಿದ್ದವರು, ಬ್ಲಾಕ್ ಸಮಿತಿ ಅಧ್ಯಕ್ಷ, ಜಿಲ್ಲಾಧ್ಯಕ್ಷರು, ಪ್ರಮುಖ ಕಾರ್ಯಕರ್ತರ ಅಭಿಪ್ರಾಯ ಪಡೆದು ಅವರು ಹೇಳಿದವರಿಗೆ ಟಿಕೇಟ್ ನೀಡಲಾಗುವುದು ಎಂದರು.
ನಾನು ಅಯೋಧ್ಯೆಗೆ ಹೋಗಲ್ಲ ಎಂದು ಎಲ್ಲಿಯೂ ಹೇಳಿಲ್ಲ. ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ. ಅಯೋಧ್ಯೆಯಲ್ಲಿ ಶ್ರೀ ರಾಮಚಂದ್ರನ ಪ್ರತಿಮೆ ಸ್ಥಾಪನೆಗೆ ನಮ್ಮದೇನೂ ವಿರೋಧವಿಲ್ಲ. ಆದರೆ ರಾಜಕೀಯ ಮಾಡಬಾರದು. 22ರಂದು ದೇವಾಲಯದ ಉದ್ಘಾಟನಾ ಕಾರ್ಯಕ್ರಮವನ್ನು ರಾಜಕೀಯವಾಗಿ ಬಳಸಲು ಹೊರಟಿದ್ದಾರೆ. ಅದನ್ನು ನಾವು ವಿರೋಧಿಸುತ್ತೇವೆಯೇ ಹೊರತು ಶ್ರೀ ರಾಮಚಂದ್ರನ ವಿರೋಧಿಗಳಲ್ಲ. ನಾನು ಎಲ್ಲಿಯೂ ಅಯೋಧ್ಯೆಗೆ ಹೋಗುತ್ತೇನೆ ಅಥವಾ ಹೋಗುವುದಿಲ್ಲ ಎಂದು ಹೇಳಿಲ್ಲ ಎಂದು ತಿಳಿಸಿದರು.
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಗೃಹ ಲಕ್ಷ್ಮೀ ಯೋಜನೆಯಡಿ ಕೊಡುವ 2,000 ರೂ.ಯಾವುದಕ್ಕೂ ಸಾಲುವುದಿಲ್ಲ ಎಂದಿದ್ದಾರೆ. ಅವರು ಅಧಿಕಾರದಲ್ಲಿದ್ದಾಗ ಮಹಿಳೆಯರಿಗೆ ನೂರು ರೂ.ಗಳನ್ನಾದರೂ ಕೊಟ್ಟಿದ್ದಾರಾ? ಎಂದು ಪ್ರಶ್ನಿಸಿದ್ದಾರೆ.
ಬೆಂಗಳೂರಿನ ಕಸವನ್ನು ವಿಲೇವಾರಿ ಮಾಡಲು ಮಹದೇವಪುರ ಮತ್ತು ಮೀಟಗಾನಹಳ್ಳಿಯ ವಿಲೇವಾರಿ ಘಟಕಗಳ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆ ಅಲ್ಲಿನ ಕಸದ…
ದೊಡ್ಡಬಳ್ಳಾಪುರ : ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ (ಇಂಟಕ್ ) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್…
ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಅಂಗವಿಕಲರ ವಿಶೇಷ ಉದ್ಯೋಗ ವಿನಿಮಯ ಕಚೇರಿ, ಪೀಣ್ಯ, ಬೆಂಗಳೂರು 'ಅಧ್ಯಯನ ವೃತ್ತ' (ಸ್ಟಡಿ…
ಚಳಿಗಾಲದ ಒಲಿಂಪಿಕ್ಸ್ 2026 ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವವರಿಗಾಗಿ ಕ್ರೀಡಾಗ್ರಾಮದಲ್ಲಿ ಸರಬರಾಜು ಮಾಡಲಾಗಿದ್ದ ಬರೊಬ್ಬರಿ 10 ಸಾವಿರ ಕಾಂಡೋಮ್ ಗಳು ಕೇವಲ 3…
ಚಿತ್ರದುರ್ಗಾ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ ಮೇಲಿಂದ ಬಿದ್ದು ಅನುಮಾನಸ್ಪದವಾಗಿ ಸಾ*ವನ್ನಪ್ಪಿದ ಘಟನೆ ವರದಿಯಾಗಿದೆ. ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಗ್ರಾಮದಲ್ಲಿ…
ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು…