ಕಾಂಗ್ರೆಸ್ ಪಕ್ಷ ಜಾತ್ಯಾತೀತ ತತ್ವದಲ್ಲಿ ನಂಬಿಕೆ ಇಟ್ಟಿದೆ. ಸಮಾಜದಲ್ಲಿನ ಎಲ್ಲಾ ಜಾತಿ, ಧರ್ಮದ ಪರವಾಗಿ ನಾವಿದ್ದೇವೆ. ಕೇವಲ ಒಂದು ಜಾತಿ, ಧರ್ಮದ ಪರವಾಗಿರಲು ನಾವು ಬಿಜೆಪಿ ಅಲ್ಲ. ಧರ್ಮದ ಆಧಾರದ ಮೇಲೆ ಸಮಜವನ್ನು ಒಡೆಯುವವರಲ್ಲ. ನಾವು ಜಾತ್ಯಾತೀತ ತತ್ವ ಹಾಗೂ ಧರ್ಮನಿರಪೇಕ್ಷತೆಯಲ್ಲಿ ನಂಬಿಕೆಯುಳ್ಳವರು. ಕಾಂಗ್ರೆಸ್ ಜಾತ್ಯಾತೀತ ಪಕ್ಷ. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಪಕ್ಷ ನಮ್ಮದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ದೇವದುರ್ಗದಲ್ಲಿ ಮಾಧ್ಯಮದವರೊಂದಿಗೆ ಈ ಕುರಿತು ಅವರು ಮಾತನಾಡಿ, ಲೋಕಸಭಾ ಚುನಾವಣೆಯಲ್ಲಿ ಮೈಸೂರು ಕ್ಷೇತ್ರದಿಂದ ಮಾಜಿ ಶಾಸಕ ಯತೀಂದ್ರ ಅವರನ್ನು ಕಣಕ್ಕಿಳಿಸಿದರೆ ಸ್ವಾಗತಿಸುವುದಾಗಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ನಾನಾಗಲಿ, ಯತೀಂದ್ರ ಆಗಲಿ ಈ ರೀತಿ ಹೇಳಿಲ್ಲ. ಪ್ರತಾಪ್ ಸಿಂಹ ಅವರಿಗೆ ಸೋಲುತ್ತೇನೆ ಎಂದು ಹೆದರಿಕೆ ಶುರುವಾಗಿದೆ ಹಾಗಾಗಿ ಏನೇನೋ ಹೇಳಿಕೆ ನೀಡುತ್ತಾರೆ. ಇವೆಲ್ಲ ಊಹಾಪೋಹಗಳು ಅಷ್ಟೇ ಎಂದು ಸ್ಪಷ್ಟೀಕರಣ ನೀಡಿದರು.
ನಗರಾಭಿವೃದ್ಧಿ ಸಚಿವ ಚುನಾವಣಾ ವೀಕ್ಷಕರಾಗಿ ಹೋಗಿದ್ದರು. ಅವರು ನೀಡಿರುವ ವರದಿ ಆಧಾರದ ಮೇಲೆ ನಾವು ನಿರ್ಧಾರ ಕೈಗೊಳ್ಳುತ್ತೇವೆ. ಕ್ಷೇತ್ರದಲ್ಲಿ ಶಾಸಕರು, ಮಾಜಿ ಶಾಸಕರು, ಸಂಸದರು, ಅಭ್ಯರ್ಥಿಯಾಗಿದ್ದವರು, ಬ್ಲಾಕ್ ಸಮಿತಿ ಅಧ್ಯಕ್ಷ, ಜಿಲ್ಲಾಧ್ಯಕ್ಷರು, ಪ್ರಮುಖ ಕಾರ್ಯಕರ್ತರ ಅಭಿಪ್ರಾಯ ಪಡೆದು ಅವರು ಹೇಳಿದವರಿಗೆ ಟಿಕೇಟ್ ನೀಡಲಾಗುವುದು ಎಂದರು.
ನಾನು ಅಯೋಧ್ಯೆಗೆ ಹೋಗಲ್ಲ ಎಂದು ಎಲ್ಲಿಯೂ ಹೇಳಿಲ್ಲ. ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ. ಅಯೋಧ್ಯೆಯಲ್ಲಿ ಶ್ರೀ ರಾಮಚಂದ್ರನ ಪ್ರತಿಮೆ ಸ್ಥಾಪನೆಗೆ ನಮ್ಮದೇನೂ ವಿರೋಧವಿಲ್ಲ. ಆದರೆ ರಾಜಕೀಯ ಮಾಡಬಾರದು. 22ರಂದು ದೇವಾಲಯದ ಉದ್ಘಾಟನಾ ಕಾರ್ಯಕ್ರಮವನ್ನು ರಾಜಕೀಯವಾಗಿ ಬಳಸಲು ಹೊರಟಿದ್ದಾರೆ. ಅದನ್ನು ನಾವು ವಿರೋಧಿಸುತ್ತೇವೆಯೇ ಹೊರತು ಶ್ರೀ ರಾಮಚಂದ್ರನ ವಿರೋಧಿಗಳಲ್ಲ. ನಾನು ಎಲ್ಲಿಯೂ ಅಯೋಧ್ಯೆಗೆ ಹೋಗುತ್ತೇನೆ ಅಥವಾ ಹೋಗುವುದಿಲ್ಲ ಎಂದು ಹೇಳಿಲ್ಲ ಎಂದು ತಿಳಿಸಿದರು.
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಗೃಹ ಲಕ್ಷ್ಮೀ ಯೋಜನೆಯಡಿ ಕೊಡುವ 2,000 ರೂ.ಯಾವುದಕ್ಕೂ ಸಾಲುವುದಿಲ್ಲ ಎಂದಿದ್ದಾರೆ. ಅವರು ಅಧಿಕಾರದಲ್ಲಿದ್ದಾಗ ಮಹಿಳೆಯರಿಗೆ ನೂರು ರೂ.ಗಳನ್ನಾದರೂ ಕೊಟ್ಟಿದ್ದಾರಾ? ಎಂದು ಪ್ರಶ್ನಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…
"ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ, 2025" ಗ್ರಾಮೀಣ ಭಾರತದ ಸಮಗ್ರ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದಲ್ಲಿ ಪತ್ತೆಹಚ್ಚಲಾಗಿದ್ದ ಬೆಲೆಬಾಳುವ ಚಿನ್ನಾಭರಣ ಹಾಗೂ ನಗದು…
Footpath...... ಫುಟ್ ಪಾತ್...... ( ಗೂಡಂಗಡಿಯ ಜನರ ಕರುಳ ಬಳ್ಳಿಯ ಕರೆ....) ಫುಟ್ ಪಾತ್ ಎಂದು ಆಂಗ್ಲ ಭಾಷೆಯಲ್ಲಿ ಕರೆಯಲ್ಪಡುವ…
ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿಗೆ ಸಂಬಂಧಿಸಿದಂತೆ ಆನ್ಲೈನ್ ಅರ್ಜಿ ಸಲ್ಲಿಕೆ ಮತ್ತು ಶುಲ್ಕ ಪಾವತಿಯ ದಿನಾಂಕವನ್ನು ವಿಸ್ತರಿಸಲಾಗಿದೆ. ಜೊತೆಗೆ, ಈಗಾಗಲೇ…
ದೊಡ್ಡಬಳ್ಳಾಪುರ: 2019ರ ಜನವರಿಯಲ್ಲಿ ದೊಡ್ಡಬಳ್ಳಾಪುರ ನಗರದ ಕೊರಚರಹಟ್ಟಿಯ ಪ್ರೀತಿ ವೈನ್ಸ್ ವೃತ್ತದ ಸಮೀಪ ನಡೆದಿದ್ದ ಗಂಗಾಧರ್ ಅಲಿಯಾಸ್ ದಾಸ್ ಕೊಲೆ…