ಕಾಂಗ್ರೆಸ್ ಪಕ್ಷ ಜಾತ್ಯಾತೀತ ತತ್ವದಲ್ಲಿ ನಂಬಿಕೆ ಇಟ್ಟಿದೆ. ಸಮಾಜದಲ್ಲಿನ ಎಲ್ಲಾ ಜಾತಿ, ಧರ್ಮದ ಪರವಾಗಿ ನಾವಿದ್ದೇವೆ. ಕೇವಲ ಒಂದು ಜಾತಿ, ಧರ್ಮದ ಪರವಾಗಿರಲು ನಾವು ಬಿಜೆಪಿ ಅಲ್ಲ. ಧರ್ಮದ ಆಧಾರದ ಮೇಲೆ ಸಮಜವನ್ನು ಒಡೆಯುವವರಲ್ಲ. ನಾವು ಜಾತ್ಯಾತೀತ ತತ್ವ ಹಾಗೂ ಧರ್ಮನಿರಪೇಕ್ಷತೆಯಲ್ಲಿ ನಂಬಿಕೆಯುಳ್ಳವರು. ಕಾಂಗ್ರೆಸ್ ಜಾತ್ಯಾತೀತ ಪಕ್ಷ. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಪಕ್ಷ ನಮ್ಮದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ದೇವದುರ್ಗದಲ್ಲಿ ಮಾಧ್ಯಮದವರೊಂದಿಗೆ ಈ ಕುರಿತು ಅವರು ಮಾತನಾಡಿ, ಲೋಕಸಭಾ ಚುನಾವಣೆಯಲ್ಲಿ ಮೈಸೂರು ಕ್ಷೇತ್ರದಿಂದ ಮಾಜಿ ಶಾಸಕ ಯತೀಂದ್ರ ಅವರನ್ನು ಕಣಕ್ಕಿಳಿಸಿದರೆ ಸ್ವಾಗತಿಸುವುದಾಗಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ನಾನಾಗಲಿ, ಯತೀಂದ್ರ ಆಗಲಿ ಈ ರೀತಿ ಹೇಳಿಲ್ಲ. ಪ್ರತಾಪ್ ಸಿಂಹ ಅವರಿಗೆ ಸೋಲುತ್ತೇನೆ ಎಂದು ಹೆದರಿಕೆ ಶುರುವಾಗಿದೆ ಹಾಗಾಗಿ ಏನೇನೋ ಹೇಳಿಕೆ ನೀಡುತ್ತಾರೆ. ಇವೆಲ್ಲ ಊಹಾಪೋಹಗಳು ಅಷ್ಟೇ ಎಂದು ಸ್ಪಷ್ಟೀಕರಣ ನೀಡಿದರು.
ನಗರಾಭಿವೃದ್ಧಿ ಸಚಿವ ಚುನಾವಣಾ ವೀಕ್ಷಕರಾಗಿ ಹೋಗಿದ್ದರು. ಅವರು ನೀಡಿರುವ ವರದಿ ಆಧಾರದ ಮೇಲೆ ನಾವು ನಿರ್ಧಾರ ಕೈಗೊಳ್ಳುತ್ತೇವೆ. ಕ್ಷೇತ್ರದಲ್ಲಿ ಶಾಸಕರು, ಮಾಜಿ ಶಾಸಕರು, ಸಂಸದರು, ಅಭ್ಯರ್ಥಿಯಾಗಿದ್ದವರು, ಬ್ಲಾಕ್ ಸಮಿತಿ ಅಧ್ಯಕ್ಷ, ಜಿಲ್ಲಾಧ್ಯಕ್ಷರು, ಪ್ರಮುಖ ಕಾರ್ಯಕರ್ತರ ಅಭಿಪ್ರಾಯ ಪಡೆದು ಅವರು ಹೇಳಿದವರಿಗೆ ಟಿಕೇಟ್ ನೀಡಲಾಗುವುದು ಎಂದರು.
ನಾನು ಅಯೋಧ್ಯೆಗೆ ಹೋಗಲ್ಲ ಎಂದು ಎಲ್ಲಿಯೂ ಹೇಳಿಲ್ಲ. ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ. ಅಯೋಧ್ಯೆಯಲ್ಲಿ ಶ್ರೀ ರಾಮಚಂದ್ರನ ಪ್ರತಿಮೆ ಸ್ಥಾಪನೆಗೆ ನಮ್ಮದೇನೂ ವಿರೋಧವಿಲ್ಲ. ಆದರೆ ರಾಜಕೀಯ ಮಾಡಬಾರದು. 22ರಂದು ದೇವಾಲಯದ ಉದ್ಘಾಟನಾ ಕಾರ್ಯಕ್ರಮವನ್ನು ರಾಜಕೀಯವಾಗಿ ಬಳಸಲು ಹೊರಟಿದ್ದಾರೆ. ಅದನ್ನು ನಾವು ವಿರೋಧಿಸುತ್ತೇವೆಯೇ ಹೊರತು ಶ್ರೀ ರಾಮಚಂದ್ರನ ವಿರೋಧಿಗಳಲ್ಲ. ನಾನು ಎಲ್ಲಿಯೂ ಅಯೋಧ್ಯೆಗೆ ಹೋಗುತ್ತೇನೆ ಅಥವಾ ಹೋಗುವುದಿಲ್ಲ ಎಂದು ಹೇಳಿಲ್ಲ ಎಂದು ತಿಳಿಸಿದರು.
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಗೃಹ ಲಕ್ಷ್ಮೀ ಯೋಜನೆಯಡಿ ಕೊಡುವ 2,000 ರೂ.ಯಾವುದಕ್ಕೂ ಸಾಲುವುದಿಲ್ಲ ಎಂದಿದ್ದಾರೆ. ಅವರು ಅಧಿಕಾರದಲ್ಲಿದ್ದಾಗ ಮಹಿಳೆಯರಿಗೆ ನೂರು ರೂ.ಗಳನ್ನಾದರೂ ಕೊಟ್ಟಿದ್ದಾರಾ? ಎಂದು ಪ್ರಶ್ನಿಸಿದ್ದಾರೆ.
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…