Categories: ರಾಜ್ಯ

ಕೇವಲ ಒಂದು ಜಾತಿ, ಧರ್ಮದ ಪರವಾಗಿರಲು ನಾವು ಬಿಜೆಪಿ ಅಲ್ಲ- ಕಾಂಗ್ರೆಸ್ ಪಕ್ಷ ಜಾತ್ಯಾತೀತ ತತ್ವದಲ್ಲಿ ನಂಬಿಕೆ ಇಟ್ಟಿದೆ- ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್ ಪಕ್ಷ ಜಾತ್ಯಾತೀತ ತತ್ವದಲ್ಲಿ ನಂಬಿಕೆ ಇಟ್ಟಿದೆ. ಸಮಾಜದಲ್ಲಿನ ಎಲ್ಲಾ ಜಾತಿ, ಧರ್ಮದ ಪರವಾಗಿ ನಾವಿದ್ದೇವೆ. ಕೇವಲ ಒಂದು ಜಾತಿ, ಧರ್ಮದ ಪರವಾಗಿರಲು ನಾವು ಬಿಜೆಪಿ ಅಲ್ಲ. ಧರ್ಮದ ಆಧಾರದ ಮೇಲೆ ಸಮಜವನ್ನು ಒಡೆಯುವವರಲ್ಲ. ನಾವು ಜಾತ್ಯಾತೀತ ತತ್ವ ಹಾಗೂ ಧರ್ಮನಿರಪೇಕ್ಷತೆಯಲ್ಲಿ ನಂಬಿಕೆಯುಳ್ಳವರು. ಕಾಂಗ್ರೆಸ್ ಜಾತ್ಯಾತೀತ ಪಕ್ಷ. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಪಕ್ಷ ನಮ್ಮದು ಎಂದು ಮುಖ್ಯಮಂತ್ರಿ‌ ಸಿದ್ದರಾಮಯ್ಯ ಹೇಳಿದ್ದಾರೆ.

ದೇವದುರ್ಗದಲ್ಲಿ ಮಾಧ್ಯಮದವರೊಂದಿಗೆ ಈ ಕುರಿತು ಅವರು ಮಾತನಾಡಿ, ಲೋಕಸಭಾ ಚುನಾವಣೆಯಲ್ಲಿ ಮೈಸೂರು ಕ್ಷೇತ್ರದಿಂದ ಮಾಜಿ ಶಾಸಕ ಯತೀಂದ್ರ ಅವರನ್ನು ಕಣಕ್ಕಿಳಿಸಿದರೆ ಸ್ವಾಗತಿಸುವುದಾಗಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ನಾನಾಗಲಿ, ಯತೀಂದ್ರ ಆಗಲಿ ಈ ರೀತಿ  ಹೇಳಿಲ್ಲ. ಪ್ರತಾಪ್ ಸಿಂಹ ಅವರಿಗೆ ಸೋಲುತ್ತೇನೆ ಎಂದು ಹೆದರಿಕೆ ಶುರುವಾಗಿದೆ ಹಾಗಾಗಿ ಏನೇನೋ ಹೇಳಿಕೆ ನೀಡುತ್ತಾರೆ. ಇವೆಲ್ಲ ಊಹಾಪೋಹಗಳು ಅಷ್ಟೇ ಎಂದು ಸ್ಪಷ್ಟೀಕರಣ ನೀಡಿದರು.

ನಗರಾಭಿವೃದ್ಧಿ ಸಚಿವ ಚುನಾವಣಾ ವೀಕ್ಷಕರಾಗಿ ಹೋಗಿದ್ದರು. ಅವರು ನೀಡಿರುವ ವರದಿ ಆಧಾರದ ಮೇಲೆ ನಾವು ನಿರ್ಧಾರ ಕೈಗೊಳ್ಳುತ್ತೇವೆ. ಕ್ಷೇತ್ರದಲ್ಲಿ ಶಾಸಕರು, ಮಾಜಿ ಶಾಸಕರು, ಸಂಸದರು, ಅಭ್ಯರ್ಥಿಯಾಗಿದ್ದವರು, ಬ್ಲಾಕ್ ಸಮಿತಿ ಅಧ್ಯಕ್ಷ, ಜಿಲ್ಲಾಧ್ಯಕ್ಷರು, ಪ್ರಮುಖ ಕಾರ್ಯಕರ್ತರ ಅಭಿಪ್ರಾಯ ಪಡೆದು ಅವರು ಹೇಳಿದವರಿಗೆ ಟಿಕೇಟ್ ನೀಡಲಾಗುವುದು ಎಂದರು.

ನಾನು ಅಯೋಧ್ಯೆಗೆ ಹೋಗಲ್ಲ ಎಂದು ಎಲ್ಲಿಯೂ ಹೇಳಿಲ್ಲ. ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ. ಅಯೋಧ್ಯೆಯಲ್ಲಿ ಶ್ರೀ ರಾಮಚಂದ್ರನ ಪ್ರತಿಮೆ ಸ್ಥಾಪನೆಗೆ ನಮ್ಮದೇನೂ ವಿರೋಧವಿಲ್ಲ. ಆದರೆ ರಾಜಕೀಯ ಮಾಡಬಾರದು. 22ರಂದು ದೇವಾಲಯದ ಉದ್ಘಾಟನಾ ಕಾರ್ಯಕ್ರಮವನ್ನು ರಾಜಕೀಯವಾಗಿ ಬಳಸಲು ಹೊರಟಿದ್ದಾರೆ. ಅದನ್ನು ನಾವು ವಿರೋಧಿಸುತ್ತೇವೆಯೇ ಹೊರತು ಶ್ರೀ ರಾಮಚಂದ್ರನ ವಿರೋಧಿಗಳಲ್ಲ. ನಾನು ಎಲ್ಲಿಯೂ ಅಯೋಧ್ಯೆಗೆ ಹೋಗುತ್ತೇನೆ ಅಥವಾ ಹೋಗುವುದಿಲ್ಲ ಎಂದು ಹೇಳಿಲ್ಲ ಎಂದು ತಿಳಿಸಿದರು.

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಗೃಹ ಲಕ್ಷ್ಮೀ ಯೋಜನೆಯಡಿ ಕೊಡುವ 2,000 ರೂ.ಯಾವುದಕ್ಕೂ ಸಾಲುವುದಿಲ್ಲ ಎಂದಿದ್ದಾರೆ. ಅವರು ಅಧಿಕಾರದಲ್ಲಿದ್ದಾಗ ಮಹಿಳೆಯರಿಗೆ ನೂರು ರೂ.ಗಳನ್ನಾದರೂ ಕೊಟ್ಟಿದ್ದಾರಾ? ಎಂದು ಪ್ರಶ್ನಿಸಿದ್ದಾರೆ.

Ramesh Babu

Journalist

Recent Posts

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

2 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

21 hours ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

2 days ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

3 days ago