ಕೇವಲ 200 ರೂ. ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಕೊಲೆ

ದೊಡ್ಡಬಳ್ಳಾಪುರ: ಕೇವಲ 200 ರೂಪಾಯಿ ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ತಾಲೂಕಿನ ಅಪ್ಪಕಾರನಹಳ್ಳಿ ಗೇಟ್ ಬಳಿ ನಡೆದಿದೆ.

ಮೃತರನ್ನು ದೊಡ್ಡಬೆಳವಂಗಲ ಹೋಬಳಿಯ ದ್ಯಾವಸಂದ್ರ ಗ್ರಾಮದ ಮಂಜುನಾಥ (40) ಎಂದು ಗುರುತಿಸಲಾಗಿದೆ.

ಆರೋಪಿಯನ್ನು ಅಪ್ಪಕಾರನಹಳ್ಳಿ ಗ್ರಾಮದ ಮುನಿರಾಜು (41) ಎಂದು ಗುರುತಿಸಲಾಗಿದ್ದು, ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಘಟನೆ ವಿವರ

ಮಂಜುನಾಥ ಹಲವು ವರ್ಷಗಳಿಂದ ಅಪ್ಪಕಾರನಹಳ್ಳಿ ಗೇಟ್ ಬಳಿ ಕಾಫಿ-ಟೀ ಅಂಗಡಿ ನಡೆಸಿಕೊಂಡು ಜೀವನ ಸಾಗಿಸುತ್ತಿದ್ದರು. ಆರೋಪಿಯಾದ ಮುನಿರಾಜು ಅಂಗಡಿಗೆ ನಿಯಮಿತವಾಗಿ ಬಂದು ಗ್ರಾಹಕನಾಗಿದ್ದನು. ಆರೋಪಿ ಮುನಿರಾಜು ಟೀ, ಕಾಫಿ ಅಂಗಡಿ ಮಂಜುನಾಥನ ಬಳಿ 200 ರೂಪಾಯಿ ಸಾಲ ಪಡೆದಿದ್ದ ಎನ್ನಲಾಗಿದೆ.

ಮೇ 12ರಂದು ಅಂಗಡಿಗೆ ಬಂದ ಮುನಿರಾಜುವಿಗೆ ಬಾಕಿಯಿದ್ದ ಹಣವನ್ನು ನೀಡುವಂತೆ ಮಂಜುನಾಥ ಕೇಳಿದ್ದಾನೆ. ಇದರಿಂದ ಆಕ್ರೋಶಗೊಂಡ ಮುನಿರಾಜು, “ಇಲ್ಲಿ ಹೇಗೆ ಅಂಗಡಿ ನಡೆಸುತ್ತೀಯಾ, ನಿನ್ನನ್ನು ಇಂದು ಉಳಿಸಲಾರೆ” ಎಂದು ಬೆದರಿಕೆ ಹಾಕಿ ಹಲ್ಲೆಗೆ ಮುಂದಾಗಿದ್ದಾನೆ.

ಬಳಿಕ ಅಂಗಡಿಯ ಹಿಂಭಾಗದಲ್ಲಿದ್ದ ನೀಲಗಿರಿ ತೋಪಿನಿಂದ ದೊಣ್ಣೆ ತಂದು ಮಂಜುನಾಥನ ತಲೆ ಹಾಗೂ ಮುಖದ ಭಾಗಕ್ಕೆ ಬಲವಾಗಿ ಹೊಡೆದಿದ್ದಾನೆ.

ಗಂಭೀರವಾಗಿ ಗಾಯಗೊಂಡ ಮಂಜುನಾಥನನ್ನು ತಕ್ಷಣ ದಾಬಸ್ ಪೇಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ನಾಲ್ಕು ದಿನಗಳ ಕಾಲ ಚಿಕಿತ್ಸೆ ಪಡೆದ ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

ಈ ಕುರಿತು ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.

Ramesh Babu

Journalist

Recent Posts

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

18 minutes ago

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

8 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

9 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

1 day ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

1 day ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

2 days ago