ಕೈಕೊಟ್ಟ ಮಳೆ; ಕಂಗೆಟ್ಟ ರೈತ; ತಾಲೂಕಿನಲ್ಲಿ ಫಸಲ್ ಬಿಮಾ ಯೋಜನೆಗೆ 14 ಸಾವಿರ ನೋಂದಣಿ

2023ರ ಮುಂಗಾರು ಹಂಗಾಮಿನಲ್ಲಿ ಪ್ರಕೃತಿ ವಿಕೋಪದಿಂದ ಮಳೆ ಕೊರತೆಯಾಗಿದ್ದರಿಂದ ಬೆಳೆ ನಷ್ಟವಾದ ರೈತರಿಗೆ ಪರಿಹಾರ ನೀಡುವ ದೃಷ್ಟಿಯಿಂದ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್‌ ಬಿಮಾ ಯೋಜನೆ ಅನುಷ್ಠಾನಗೊಳಿಸಲಾಗಿದೆ.

ರಾಗಿ ಮತ್ತು ಮುಸುಕಿನ ಜೋಳದ ಬೆಳೆಗೆ ಪ್ರಧಾನ ಮಂತ್ರಿ ಪಸಲ್ ಬಿಮಾ ಯೋಜನೆಯಲ್ಲಿ ವಿಮೆ ಮಾಡಿಸುವಂತೆ ಕೃಷಿ ಇಲಾಖೆ ಸಾಕಷ್ಟು ಪ್ರಚಾರವನ್ನು ಜೂನ್ ತಿಂಗಳಿಂದಲೇ ಕೈಗೊಂಡಿತ್ತು. ಮಳೆ ಹಿನ್ನಡೆಯಾದ ಕಾರಣದಿಂದ ಎರಡು ಬಾರಿ ವಿಮಾ ನೋಂದಣಿಗೆ ದಿನಾಂಕವನ್ನು ವಿಸ್ತರಣೆ ಮಾಡಲಾಗಿತ್ತು.

ಈ ಹಿನ್ನೆಲೆ ತಾಲೂಕಿನಲ್ಲಿ ಈ ವರ್ಷ ರೈತರಿಂದ ಒಟ್ಟಾರೆ ಇಲ್ಲಿಯವರೆಗೆ 14,755 ಅರ್ಜಿಗಳು ಸಲ್ಲಿಕೆಯಾಗಿವೆ. ಎಂದು ಕೃಷಿ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಧಾನ ಮಂತ್ರಿ ಫಸಲ್ ಬೀಮಾ ಬೆಳೆ ವಿಮೆ ನೋಂದಣಿಗೆ ಒಂದು ಹೆಕ್ಟೇರ್‌ಗೆ 3,860ಗಳನ್ನು ರೈತರು ಪಾವತಿಸಬೇಕು. ಶೇ 100ರಷ್ಟು ಬೆಳೆ ನಷ್ಟವಾದರೆ ಒಂದು ಹೆಕ್ಟೇರ್‌ಗೆ 42,500 ಪರಿಹಾರ ರೈತರಿಗೆ ದೊರೆಯಲಿದೆ. ಇದಲ್ಲದೆ ಮಳೆ ಹೆಚ್ಚಾಗಿ, ಕೊಯ್ಲಿನ ಸಮಯ ಸೇರಿದಂತೆ ವಿವಿಧ ಹಂತಗಳಲ್ಲೂ ಬೆಳೆ ನಷ್ಟವಾದರೆ ಶೇಕಡವಾರು ಲೆಕ್ಕದಲ್ಲೂ ಬೆಳೆ ಪರಿಹಾರವನ್ನು ರೈತರು ಪಡೆಯಬಹುದಾಗಿದೆ.

Ramesh Babu

Journalist

Recent Posts

ಶೀಘ್ರದಲ್ಲೇ ಹೋಟೆಲ್ ಗಳಿಗೂ ಅಡಿಗೆ ಅನಿಲ ಪೂರೈಕೆ – ಆಹಾರ ಸಚಿವ ಕೆ ಎಚ್ ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…

39 minutes ago

‘ಪ್ರಸಾದ್ 2.0’ (PRASHAD 2.0) ಯೋಜನೆಯಡಿ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿ ವಿಚಾರ: ಶ್ರೀ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್ ಸಂತಸ

ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…

52 minutes ago

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

9 hours ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

22 hours ago

ಪ್ರತ್ಯೇಕ ಅಪಘಾತ ಕೇಸ್ : ಮೂವರು ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಸೇರಿ ನಾಲ್ವರು ಸಾವು: ಹಲವರಿಗೆ ಗಾಯ

ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…

23 hours ago

ಕಾನ್ಸಿರಾಮ್ ಅವರ 92ನೇ ಹುಟ್ಟುಹಬ್ಬ: ಬಹುಜನರ ಏಳಿಗೆಗಾಗಿ ಕಾನ್ಸಿರಾಮ್ ಕೊಡುಗೆ ಅಪಾರ- ನಂದಿಗುಂದ ಪಿ‌.ವೆಂಕಟೇಶ್

ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್‌) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್‌…

1 day ago