2023ರ ಮುಂಗಾರು ಹಂಗಾಮಿನಲ್ಲಿ ಪ್ರಕೃತಿ ವಿಕೋಪದಿಂದ ಮಳೆ ಕೊರತೆಯಾಗಿದ್ದರಿಂದ ಬೆಳೆ ನಷ್ಟವಾದ ರೈತರಿಗೆ ಪರಿಹಾರ ನೀಡುವ ದೃಷ್ಟಿಯಿಂದ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಅನುಷ್ಠಾನಗೊಳಿಸಲಾಗಿದೆ.
ರಾಗಿ ಮತ್ತು ಮುಸುಕಿನ ಜೋಳದ ಬೆಳೆಗೆ ಪ್ರಧಾನ ಮಂತ್ರಿ ಪಸಲ್ ಬಿಮಾ ಯೋಜನೆಯಲ್ಲಿ ವಿಮೆ ಮಾಡಿಸುವಂತೆ ಕೃಷಿ ಇಲಾಖೆ ಸಾಕಷ್ಟು ಪ್ರಚಾರವನ್ನು ಜೂನ್ ತಿಂಗಳಿಂದಲೇ ಕೈಗೊಂಡಿತ್ತು. ಮಳೆ ಹಿನ್ನಡೆಯಾದ ಕಾರಣದಿಂದ ಎರಡು ಬಾರಿ ವಿಮಾ ನೋಂದಣಿಗೆ ದಿನಾಂಕವನ್ನು ವಿಸ್ತರಣೆ ಮಾಡಲಾಗಿತ್ತು.
ಈ ಹಿನ್ನೆಲೆ ತಾಲೂಕಿನಲ್ಲಿ ಈ ವರ್ಷ ರೈತರಿಂದ ಒಟ್ಟಾರೆ ಇಲ್ಲಿಯವರೆಗೆ 14,755 ಅರ್ಜಿಗಳು ಸಲ್ಲಿಕೆಯಾಗಿವೆ. ಎಂದು ಕೃಷಿ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಧಾನ ಮಂತ್ರಿ ಫಸಲ್ ಬೀಮಾ ಬೆಳೆ ವಿಮೆ ನೋಂದಣಿಗೆ ಒಂದು ಹೆಕ್ಟೇರ್ಗೆ 3,860ಗಳನ್ನು ರೈತರು ಪಾವತಿಸಬೇಕು. ಶೇ 100ರಷ್ಟು ಬೆಳೆ ನಷ್ಟವಾದರೆ ಒಂದು ಹೆಕ್ಟೇರ್ಗೆ 42,500 ಪರಿಹಾರ ರೈತರಿಗೆ ದೊರೆಯಲಿದೆ. ಇದಲ್ಲದೆ ಮಳೆ ಹೆಚ್ಚಾಗಿ, ಕೊಯ್ಲಿನ ಸಮಯ ಸೇರಿದಂತೆ ವಿವಿಧ ಹಂತಗಳಲ್ಲೂ ಬೆಳೆ ನಷ್ಟವಾದರೆ ಶೇಕಡವಾರು ಲೆಕ್ಕದಲ್ಲೂ ಬೆಳೆ ಪರಿಹಾರವನ್ನು ರೈತರು ಪಡೆಯಬಹುದಾಗಿದೆ.
ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…
ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…
ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…
ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್ನಲ್ಲಿ ಜನವರಿ 24…
ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…
ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…