2023ರ ಮುಂಗಾರು ಹಂಗಾಮಿನಲ್ಲಿ ಪ್ರಕೃತಿ ವಿಕೋಪದಿಂದ ಮಳೆ ಕೊರತೆಯಾಗಿದ್ದರಿಂದ ಬೆಳೆ ನಷ್ಟವಾದ ರೈತರಿಗೆ ಪರಿಹಾರ ನೀಡುವ ದೃಷ್ಟಿಯಿಂದ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಅನುಷ್ಠಾನಗೊಳಿಸಲಾಗಿದೆ.
ರಾಗಿ ಮತ್ತು ಮುಸುಕಿನ ಜೋಳದ ಬೆಳೆಗೆ ಪ್ರಧಾನ ಮಂತ್ರಿ ಪಸಲ್ ಬಿಮಾ ಯೋಜನೆಯಲ್ಲಿ ವಿಮೆ ಮಾಡಿಸುವಂತೆ ಕೃಷಿ ಇಲಾಖೆ ಸಾಕಷ್ಟು ಪ್ರಚಾರವನ್ನು ಜೂನ್ ತಿಂಗಳಿಂದಲೇ ಕೈಗೊಂಡಿತ್ತು. ಮಳೆ ಹಿನ್ನಡೆಯಾದ ಕಾರಣದಿಂದ ಎರಡು ಬಾರಿ ವಿಮಾ ನೋಂದಣಿಗೆ ದಿನಾಂಕವನ್ನು ವಿಸ್ತರಣೆ ಮಾಡಲಾಗಿತ್ತು.
ಈ ಹಿನ್ನೆಲೆ ತಾಲೂಕಿನಲ್ಲಿ ಈ ವರ್ಷ ರೈತರಿಂದ ಒಟ್ಟಾರೆ ಇಲ್ಲಿಯವರೆಗೆ 14,755 ಅರ್ಜಿಗಳು ಸಲ್ಲಿಕೆಯಾಗಿವೆ. ಎಂದು ಕೃಷಿ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಧಾನ ಮಂತ್ರಿ ಫಸಲ್ ಬೀಮಾ ಬೆಳೆ ವಿಮೆ ನೋಂದಣಿಗೆ ಒಂದು ಹೆಕ್ಟೇರ್ಗೆ 3,860ಗಳನ್ನು ರೈತರು ಪಾವತಿಸಬೇಕು. ಶೇ 100ರಷ್ಟು ಬೆಳೆ ನಷ್ಟವಾದರೆ ಒಂದು ಹೆಕ್ಟೇರ್ಗೆ 42,500 ಪರಿಹಾರ ರೈತರಿಗೆ ದೊರೆಯಲಿದೆ. ಇದಲ್ಲದೆ ಮಳೆ ಹೆಚ್ಚಾಗಿ, ಕೊಯ್ಲಿನ ಸಮಯ ಸೇರಿದಂತೆ ವಿವಿಧ ಹಂತಗಳಲ್ಲೂ ಬೆಳೆ ನಷ್ಟವಾದರೆ ಶೇಕಡವಾರು ಲೆಕ್ಕದಲ್ಲೂ ಬೆಳೆ ಪರಿಹಾರವನ್ನು ರೈತರು ಪಡೆಯಬಹುದಾಗಿದೆ.
ರಾಜ್ಯದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…
ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…
ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…
ಕೋಲಾರ: ಅಮೆಜಾನ್ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…
ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್ಸ್ಪೆಕ್ಟರ್ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…
ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್…