2023ರ ಮುಂಗಾರು ಹಂಗಾಮಿನಲ್ಲಿ ಪ್ರಕೃತಿ ವಿಕೋಪದಿಂದ ಮಳೆ ಕೊರತೆಯಾಗಿದ್ದರಿಂದ ಬೆಳೆ ನಷ್ಟವಾದ ರೈತರಿಗೆ ಪರಿಹಾರ ನೀಡುವ ದೃಷ್ಟಿಯಿಂದ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಅನುಷ್ಠಾನಗೊಳಿಸಲಾಗಿದೆ.
ರಾಗಿ ಮತ್ತು ಮುಸುಕಿನ ಜೋಳದ ಬೆಳೆಗೆ ಪ್ರಧಾನ ಮಂತ್ರಿ ಪಸಲ್ ಬಿಮಾ ಯೋಜನೆಯಲ್ಲಿ ವಿಮೆ ಮಾಡಿಸುವಂತೆ ಕೃಷಿ ಇಲಾಖೆ ಸಾಕಷ್ಟು ಪ್ರಚಾರವನ್ನು ಜೂನ್ ತಿಂಗಳಿಂದಲೇ ಕೈಗೊಂಡಿತ್ತು. ಮಳೆ ಹಿನ್ನಡೆಯಾದ ಕಾರಣದಿಂದ ಎರಡು ಬಾರಿ ವಿಮಾ ನೋಂದಣಿಗೆ ದಿನಾಂಕವನ್ನು ವಿಸ್ತರಣೆ ಮಾಡಲಾಗಿತ್ತು.
ಈ ಹಿನ್ನೆಲೆ ತಾಲೂಕಿನಲ್ಲಿ ಈ ವರ್ಷ ರೈತರಿಂದ ಒಟ್ಟಾರೆ ಇಲ್ಲಿಯವರೆಗೆ 14,755 ಅರ್ಜಿಗಳು ಸಲ್ಲಿಕೆಯಾಗಿವೆ. ಎಂದು ಕೃಷಿ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಧಾನ ಮಂತ್ರಿ ಫಸಲ್ ಬೀಮಾ ಬೆಳೆ ವಿಮೆ ನೋಂದಣಿಗೆ ಒಂದು ಹೆಕ್ಟೇರ್ಗೆ 3,860ಗಳನ್ನು ರೈತರು ಪಾವತಿಸಬೇಕು. ಶೇ 100ರಷ್ಟು ಬೆಳೆ ನಷ್ಟವಾದರೆ ಒಂದು ಹೆಕ್ಟೇರ್ಗೆ 42,500 ಪರಿಹಾರ ರೈತರಿಗೆ ದೊರೆಯಲಿದೆ. ಇದಲ್ಲದೆ ಮಳೆ ಹೆಚ್ಚಾಗಿ, ಕೊಯ್ಲಿನ ಸಮಯ ಸೇರಿದಂತೆ ವಿವಿಧ ಹಂತಗಳಲ್ಲೂ ಬೆಳೆ ನಷ್ಟವಾದರೆ ಶೇಕಡವಾರು ಲೆಕ್ಕದಲ್ಲೂ ಬೆಳೆ ಪರಿಹಾರವನ್ನು ರೈತರು ಪಡೆಯಬಹುದಾಗಿದೆ.
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…