2023ರ ಮುಂಗಾರು ಹಂಗಾಮಿನಲ್ಲಿ ಪ್ರಕೃತಿ ವಿಕೋಪದಿಂದ ಮಳೆ ಕೊರತೆಯಾಗಿದ್ದರಿಂದ ಬೆಳೆ ನಷ್ಟವಾದ ರೈತರಿಗೆ ಪರಿಹಾರ ನೀಡುವ ದೃಷ್ಟಿಯಿಂದ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಅನುಷ್ಠಾನಗೊಳಿಸಲಾಗಿದೆ.
ರಾಗಿ ಮತ್ತು ಮುಸುಕಿನ ಜೋಳದ ಬೆಳೆಗೆ ಪ್ರಧಾನ ಮಂತ್ರಿ ಪಸಲ್ ಬಿಮಾ ಯೋಜನೆಯಲ್ಲಿ ವಿಮೆ ಮಾಡಿಸುವಂತೆ ಕೃಷಿ ಇಲಾಖೆ ಸಾಕಷ್ಟು ಪ್ರಚಾರವನ್ನು ಜೂನ್ ತಿಂಗಳಿಂದಲೇ ಕೈಗೊಂಡಿತ್ತು. ಮಳೆ ಹಿನ್ನಡೆಯಾದ ಕಾರಣದಿಂದ ಎರಡು ಬಾರಿ ವಿಮಾ ನೋಂದಣಿಗೆ ದಿನಾಂಕವನ್ನು ವಿಸ್ತರಣೆ ಮಾಡಲಾಗಿತ್ತು.
ಈ ಹಿನ್ನೆಲೆ ತಾಲೂಕಿನಲ್ಲಿ ಈ ವರ್ಷ ರೈತರಿಂದ ಒಟ್ಟಾರೆ ಇಲ್ಲಿಯವರೆಗೆ 14,755 ಅರ್ಜಿಗಳು ಸಲ್ಲಿಕೆಯಾಗಿವೆ. ಎಂದು ಕೃಷಿ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಧಾನ ಮಂತ್ರಿ ಫಸಲ್ ಬೀಮಾ ಬೆಳೆ ವಿಮೆ ನೋಂದಣಿಗೆ ಒಂದು ಹೆಕ್ಟೇರ್ಗೆ 3,860ಗಳನ್ನು ರೈತರು ಪಾವತಿಸಬೇಕು. ಶೇ 100ರಷ್ಟು ಬೆಳೆ ನಷ್ಟವಾದರೆ ಒಂದು ಹೆಕ್ಟೇರ್ಗೆ 42,500 ಪರಿಹಾರ ರೈತರಿಗೆ ದೊರೆಯಲಿದೆ. ಇದಲ್ಲದೆ ಮಳೆ ಹೆಚ್ಚಾಗಿ, ಕೊಯ್ಲಿನ ಸಮಯ ಸೇರಿದಂತೆ ವಿವಿಧ ಹಂತಗಳಲ್ಲೂ ಬೆಳೆ ನಷ್ಟವಾದರೆ ಶೇಕಡವಾರು ಲೆಕ್ಕದಲ್ಲೂ ಬೆಳೆ ಪರಿಹಾರವನ್ನು ರೈತರು ಪಡೆಯಬಹುದಾಗಿದೆ.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…