2023ರ ಮುಂಗಾರು ಹಂಗಾಮಿನಲ್ಲಿ ಪ್ರಕೃತಿ ವಿಕೋಪದಿಂದ ಮಳೆ ಕೊರತೆಯಾಗಿದ್ದರಿಂದ ಬೆಳೆ ನಷ್ಟವಾದ ರೈತರಿಗೆ ಪರಿಹಾರ ನೀಡುವ ದೃಷ್ಟಿಯಿಂದ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಅನುಷ್ಠಾನಗೊಳಿಸಲಾಗಿದೆ.
ರಾಗಿ ಮತ್ತು ಮುಸುಕಿನ ಜೋಳದ ಬೆಳೆಗೆ ಪ್ರಧಾನ ಮಂತ್ರಿ ಪಸಲ್ ಬಿಮಾ ಯೋಜನೆಯಲ್ಲಿ ವಿಮೆ ಮಾಡಿಸುವಂತೆ ಕೃಷಿ ಇಲಾಖೆ ಸಾಕಷ್ಟು ಪ್ರಚಾರವನ್ನು ಜೂನ್ ತಿಂಗಳಿಂದಲೇ ಕೈಗೊಂಡಿತ್ತು. ಮಳೆ ಹಿನ್ನಡೆಯಾದ ಕಾರಣದಿಂದ ಎರಡು ಬಾರಿ ವಿಮಾ ನೋಂದಣಿಗೆ ದಿನಾಂಕವನ್ನು ವಿಸ್ತರಣೆ ಮಾಡಲಾಗಿತ್ತು.
ಈ ಹಿನ್ನೆಲೆ ತಾಲೂಕಿನಲ್ಲಿ ಈ ವರ್ಷ ರೈತರಿಂದ ಒಟ್ಟಾರೆ ಇಲ್ಲಿಯವರೆಗೆ 14,755 ಅರ್ಜಿಗಳು ಸಲ್ಲಿಕೆಯಾಗಿವೆ. ಎಂದು ಕೃಷಿ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಧಾನ ಮಂತ್ರಿ ಫಸಲ್ ಬೀಮಾ ಬೆಳೆ ವಿಮೆ ನೋಂದಣಿಗೆ ಒಂದು ಹೆಕ್ಟೇರ್ಗೆ 3,860ಗಳನ್ನು ರೈತರು ಪಾವತಿಸಬೇಕು. ಶೇ 100ರಷ್ಟು ಬೆಳೆ ನಷ್ಟವಾದರೆ ಒಂದು ಹೆಕ್ಟೇರ್ಗೆ 42,500 ಪರಿಹಾರ ರೈತರಿಗೆ ದೊರೆಯಲಿದೆ. ಇದಲ್ಲದೆ ಮಳೆ ಹೆಚ್ಚಾಗಿ, ಕೊಯ್ಲಿನ ಸಮಯ ಸೇರಿದಂತೆ ವಿವಿಧ ಹಂತಗಳಲ್ಲೂ ಬೆಳೆ ನಷ್ಟವಾದರೆ ಶೇಕಡವಾರು ಲೆಕ್ಕದಲ್ಲೂ ಬೆಳೆ ಪರಿಹಾರವನ್ನು ರೈತರು ಪಡೆಯಬಹುದಾಗಿದೆ.
ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್ಎಸ್ಎಸ್ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…
ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…
"ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ, 2025" ಗ್ರಾಮೀಣ ಭಾರತದ ಸಮಗ್ರ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದಲ್ಲಿ ಪತ್ತೆಹಚ್ಚಲಾಗಿದ್ದ ಬೆಲೆಬಾಳುವ ಚಿನ್ನಾಭರಣ ಹಾಗೂ ನಗದು…