2023ರ ಮುಂಗಾರು ಹಂಗಾಮಿನಲ್ಲಿ ಪ್ರಕೃತಿ ವಿಕೋಪದಿಂದ ಮಳೆ ಕೊರತೆಯಾಗಿದ್ದರಿಂದ ಬೆಳೆ ನಷ್ಟವಾದ ರೈತರಿಗೆ ಪರಿಹಾರ ನೀಡುವ ದೃಷ್ಟಿಯಿಂದ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಅನುಷ್ಠಾನಗೊಳಿಸಲಾಗಿದೆ.
ರಾಗಿ ಮತ್ತು ಮುಸುಕಿನ ಜೋಳದ ಬೆಳೆಗೆ ಪ್ರಧಾನ ಮಂತ್ರಿ ಪಸಲ್ ಬಿಮಾ ಯೋಜನೆಯಲ್ಲಿ ವಿಮೆ ಮಾಡಿಸುವಂತೆ ಕೃಷಿ ಇಲಾಖೆ ಸಾಕಷ್ಟು ಪ್ರಚಾರವನ್ನು ಜೂನ್ ತಿಂಗಳಿಂದಲೇ ಕೈಗೊಂಡಿತ್ತು. ಮಳೆ ಹಿನ್ನಡೆಯಾದ ಕಾರಣದಿಂದ ಎರಡು ಬಾರಿ ವಿಮಾ ನೋಂದಣಿಗೆ ದಿನಾಂಕವನ್ನು ವಿಸ್ತರಣೆ ಮಾಡಲಾಗಿತ್ತು.
ಈ ಹಿನ್ನೆಲೆ ತಾಲೂಕಿನಲ್ಲಿ ಈ ವರ್ಷ ರೈತರಿಂದ ಒಟ್ಟಾರೆ ಇಲ್ಲಿಯವರೆಗೆ 14,755 ಅರ್ಜಿಗಳು ಸಲ್ಲಿಕೆಯಾಗಿವೆ. ಎಂದು ಕೃಷಿ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಧಾನ ಮಂತ್ರಿ ಫಸಲ್ ಬೀಮಾ ಬೆಳೆ ವಿಮೆ ನೋಂದಣಿಗೆ ಒಂದು ಹೆಕ್ಟೇರ್ಗೆ 3,860ಗಳನ್ನು ರೈತರು ಪಾವತಿಸಬೇಕು. ಶೇ 100ರಷ್ಟು ಬೆಳೆ ನಷ್ಟವಾದರೆ ಒಂದು ಹೆಕ್ಟೇರ್ಗೆ 42,500 ಪರಿಹಾರ ರೈತರಿಗೆ ದೊರೆಯಲಿದೆ. ಇದಲ್ಲದೆ ಮಳೆ ಹೆಚ್ಚಾಗಿ, ಕೊಯ್ಲಿನ ಸಮಯ ಸೇರಿದಂತೆ ವಿವಿಧ ಹಂತಗಳಲ್ಲೂ ಬೆಳೆ ನಷ್ಟವಾದರೆ ಶೇಕಡವಾರು ಲೆಕ್ಕದಲ್ಲೂ ಬೆಳೆ ಪರಿಹಾರವನ್ನು ರೈತರು ಪಡೆಯಬಹುದಾಗಿದೆ.
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…