ಕೈಕೊಟ್ಟ ಮಳೆ; ಕಂಗೆಟ್ಟ ರೈತ; ತಾಲೂಕಿನಲ್ಲಿ ಫಸಲ್ ಬಿಮಾ ಯೋಜನೆಗೆ 14 ಸಾವಿರ ನೋಂದಣಿ

2023ರ ಮುಂಗಾರು ಹಂಗಾಮಿನಲ್ಲಿ ಪ್ರಕೃತಿ ವಿಕೋಪದಿಂದ ಮಳೆ ಕೊರತೆಯಾಗಿದ್ದರಿಂದ ಬೆಳೆ ನಷ್ಟವಾದ ರೈತರಿಗೆ ಪರಿಹಾರ ನೀಡುವ ದೃಷ್ಟಿಯಿಂದ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್‌ ಬಿಮಾ ಯೋಜನೆ ಅನುಷ್ಠಾನಗೊಳಿಸಲಾಗಿದೆ.

ರಾಗಿ ಮತ್ತು ಮುಸುಕಿನ ಜೋಳದ ಬೆಳೆಗೆ ಪ್ರಧಾನ ಮಂತ್ರಿ ಪಸಲ್ ಬಿಮಾ ಯೋಜನೆಯಲ್ಲಿ ವಿಮೆ ಮಾಡಿಸುವಂತೆ ಕೃಷಿ ಇಲಾಖೆ ಸಾಕಷ್ಟು ಪ್ರಚಾರವನ್ನು ಜೂನ್ ತಿಂಗಳಿಂದಲೇ ಕೈಗೊಂಡಿತ್ತು. ಮಳೆ ಹಿನ್ನಡೆಯಾದ ಕಾರಣದಿಂದ ಎರಡು ಬಾರಿ ವಿಮಾ ನೋಂದಣಿಗೆ ದಿನಾಂಕವನ್ನು ವಿಸ್ತರಣೆ ಮಾಡಲಾಗಿತ್ತು.

ಈ ಹಿನ್ನೆಲೆ ತಾಲೂಕಿನಲ್ಲಿ ಈ ವರ್ಷ ರೈತರಿಂದ ಒಟ್ಟಾರೆ ಇಲ್ಲಿಯವರೆಗೆ 14,755 ಅರ್ಜಿಗಳು ಸಲ್ಲಿಕೆಯಾಗಿವೆ. ಎಂದು ಕೃಷಿ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಧಾನ ಮಂತ್ರಿ ಫಸಲ್ ಬೀಮಾ ಬೆಳೆ ವಿಮೆ ನೋಂದಣಿಗೆ ಒಂದು ಹೆಕ್ಟೇರ್‌ಗೆ 3,860ಗಳನ್ನು ರೈತರು ಪಾವತಿಸಬೇಕು. ಶೇ 100ರಷ್ಟು ಬೆಳೆ ನಷ್ಟವಾದರೆ ಒಂದು ಹೆಕ್ಟೇರ್‌ಗೆ 42,500 ಪರಿಹಾರ ರೈತರಿಗೆ ದೊರೆಯಲಿದೆ. ಇದಲ್ಲದೆ ಮಳೆ ಹೆಚ್ಚಾಗಿ, ಕೊಯ್ಲಿನ ಸಮಯ ಸೇರಿದಂತೆ ವಿವಿಧ ಹಂತಗಳಲ್ಲೂ ಬೆಳೆ ನಷ್ಟವಾದರೆ ಶೇಕಡವಾರು ಲೆಕ್ಕದಲ್ಲೂ ಬೆಳೆ ಪರಿಹಾರವನ್ನು ರೈತರು ಪಡೆಯಬಹುದಾಗಿದೆ.

Ramesh Babu

Journalist

Recent Posts

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

2 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

3 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

18 hours ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago

ದೇವಾಲಯಗಳ ಹುಂಡಿ ಭದ್ರತೆಗೆ ಸಿಸಿಟಿವಿ ಕಣ್ಗಾವಲು- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…

2 days ago