ಕೋಲಾರ: ರಾಜ್ಯ ಸರ್ಕಾರವು ಕೈಗಾರಿಕಾ ಕ್ಷೇತ್ರದ ಬೆಳವಣಿಗೆಗೆ ಮತ್ತು ಪ್ರಗತಿಗೆ ಅಗತ್ಯವಾದ ಎಲ್ಲಾ ಸಹಕಾರ ಮತ್ತು ನೆರವನ್ನು ನೀಡಲಿದ್ದು ಕಾರ್ಪೋರೇಟ್ ಸಂಸ್ಥೆಗಳು ಮತ್ತು ಉದ್ಯಮ ಕ್ಷೇತ್ರವು ಸರ್ಕಾರದ ಜತೆಗೆ ಸಮಾಜದ ಪ್ರಗತಿಗೆ ಕೈ ಜೋಡಿಸಬೇಕು ತಮ್ಮ ಸಿಎಸ್ಆರ್ ಅನುದಾನವನ್ನು ಶಿಕ್ಷಣ ಮತ್ತು ಆರೋಗ್ಯಕ್ಕೆ ಬಳಕೆಯಾಗುವಂತಾಗಬೇಕು ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು.
ತಾಲೂಕಿನ ನರಸಾಪುರ ಕೈಗಾರಿಕಾ ಪ್ರದೇಶದ ಮಹೇಂದ್ರ ಏರೋಸ್ಪೇಸ್ ಕಂಪನಿಯಲ್ಲಿ ಸೋಮವಾರ ತರಬೇತಿ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣ ವ್ಯವಸ್ಥೆಯ ಸುಧಾರಣೆಗೆ ಸರ್ಕಾರೇತರ ಸಂಸ್ಥೆಗಳು ಸಹ ಕೈ ಜೋಡಿಸಬೇಕು ತಮ್ಮ ಸಿಎಸ್ಆರ್ ಅನುದಾನವನ್ನು ಶಿಕ್ಷಣದ ಕೌಶಲ್ಯಾಭಿವೃದ್ಧಿಗೆ ಬಳಕೆ ಮಾಡಬೇಕಿದೆ ಸಾಮಾಜಿಕ ಹೊಣೆಗಾರಿಕೆಗೆ ಬಳಕೆ ಮಾಡಬೇಕೆಂದು ಸರಕಾರವು ನಿರ್ದೇಶಿಸಲಾಗಿದೆ. ಅದರಡಿ ಈಗಾಗಲೇ ಸಾಕಷ್ಟು ಅನುದಾನ ಬಳಕೆಯಾಗುತ್ತಿದೆ. ಮತ್ತಷ್ಟು ಸಂಸ್ಥೆಗಳು ಸರ್ಕಾರಿ ಶಾಲೆಗಳ ಸುಧಾರಣೆಗೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.
ಕೋಲಾರ ಜಿಲ್ಲೆಯಲ್ಲಿ ಹೆಚ್ಚಾಗಿ ಕೈಗಾರಿಕಾ ಪ್ರದೇಶಗಳನ್ನು ಗುರುತಿಸಲಾಗುತ್ತಿದೆ ಈ ಭಾಗದಲ್ಲಿಯೂ ಸಹ ಕೈಗಾರಿಕಾ ಅಭಿವೃದ್ಧಿಗೆ ಪ್ರೋತ್ಸಾಹ ನೀಡಲಿದ್ದೇವೆ ಇಲ್ಲಿನ ಕಂಪನಿಗಳು ಸ್ಥಳೀಯರಿಗೆ ಹೆಚ್ಚಿನ ಉದ್ಯೋಗ ಅವಕಾಶಗಳು ನೀಡಬೇಕು ಕಂಪನಿಯು ಉದ್ಯೋಗಿಗಳನ್ನು ನೇಮಿಸಿಕೊಳ್ಳುವಾಗ ಸ್ಥಳೀಯರಿಗೆ ಆದ್ಯತೆಯ ಮಾನದಂಡ ಅನುಸರಿಸಬೇಕು ನಿಮಗೆ ಅಗತ್ಯವಿರುವ ತಂತ್ರಜ್ಞರನ್ನು ಬೇಕಾದರೆ ಹೊರಗಿನಿಂದ ಕರೆತನ್ನಿ. ಉಳಿದ ಉದ್ಯೋಗಳಿಗೆ ಸ್ಥಳೀಯರನ್ನೇ ಆಯ್ಕೆ ಮಾಡಿಕೊಳ್ಳಿ ಎಂದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್, ಮಹೇಂದ್ರ ಏರೋಸ್ಪೇಸ್ ಮುಂಬೈ ವಿಭಾಗೀಯ ಮುಖ್ಯಸ್ಥ ವಿಜಯನಾಯರ್, ಸಿಒಒ ಕಾರ್ತಿಕ್ ಕೃಷ್ಣಮೂರ್ತಿ, ಕೇಂದ್ರದ ಮುಖ್ಯಸ್ಥ ನರೇಂದ್ರ ಶ್ಯಾನಬೋಗ್, ಕಂಪನಿಯ ಹೆಚ್.ಆರ್ ನಾಗರಾಜ್,ಶ್ರೀರಾಮ್, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಚಂಜಿಮಲೆ ರಮೇಶ್, ನರಸಾಪುರ ಸೊಸೈಟಿ ಅಧ್ಯಕ್ಷ ಖಾಜಿಕಲ್ಲಹಳ್ಳಿ ಮುನಿರಾಜು, ಮುಖಂಡರಾದ ಬೆಳ್ಳೂರು ಅಶ್ವಥ್, ಮೈಲಾಂಡಹಳ್ಳಿ ಮುರಳಿ, ಜನಪನಹಳ್ಳಿ ನವೀನ್ ಕುಮಾರ್ ಮುಂತಾದವರು ಇದ್ದರು.
ರಾಜ್ಯ ರಾಜಕೀಯದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೇರಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಬಳಿ…
ನಮ್ಮ ನಾಯಕರು ಮತ್ತು ಉಗ್ರ ಧರ್ಮ ಹಾಗು ರಾಷ್ಟ್ರೀಯವಾದ..... ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು..... ತಾವೇ ಸೃಷ್ಟಿಸಿಕೊಂಡ, ನಾವೇ…
ಕಳೆದ ಮೂರು ದಿನಗಳಿಂದ ನಡೆದ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ"ಗೆ ಭಾನುವಾರ ಅದ್ಧೂರಿಯಾಗಿ ತೆರೆ ಕಂಡಿತು. ಮೂರು ದಿನಗಳ ಕಾಲ ಲಕ್ಷಾಂತರ…
ಉತ್ತರಪ್ರದೇಶ : ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ…
ಪ್ರಾಥಮಿಕ ಶಾಲಾ ಶಿಕ್ಷಕರಾಗಿದ್ದ ಲೋಕಸೇವಾನಿರತ ಡಿ.ಕೊಂಗಾಡಿಯಪ್ಪ ಅವರು ತಮ್ಮ ಸೇವಾ ಮನೋಭಾವದಿಂದ ಸರ್ವಜನ ಮಾನ್ಯರಾಗಿದ್ದರು ಎಂದು ಕನ್ನಡ ಜಾಗೃತ ಪರಿಷತ್ತು…
ಕುಮಟಾ: ಬಡವರ ಹಸಿವು ನೀಗಿಸಲು ಸರ್ಕಾರ ನೀಡುವ 'ಅನ್ನಭಾಗ್ಯ' ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಗೋಡೌನ್ ಮೇಲೆ ಕುಮಟಾ ತಹಶೀಲ್ದಾರ್…