Categories: ಕೋಲಾರ

ಕೈಗಾರಿಕೆಗಳ ಸಿಎಸ್ಆರ್ ಅನುದಾನ ಶಿಕ್ಷಣ, ಆರೋಗ್ಯಕ್ಕೆ ಬಳಕೆಯಾಗಲಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ರಾಜ್ಯ ಸರ್ಕಾರವು ಕೈಗಾರಿಕಾ ಕ್ಷೇತ್ರದ ಬೆಳವಣಿಗೆಗೆ ಮತ್ತು ಪ್ರಗತಿಗೆ ಅಗತ್ಯವಾದ ಎಲ್ಲಾ ಸಹಕಾರ ಮತ್ತು ನೆರವನ್ನು ನೀಡಲಿದ್ದು ಕಾರ್ಪೋರೇಟ್ ಸಂಸ್ಥೆಗಳು ಮತ್ತು ಉದ್ಯಮ ಕ್ಷೇತ್ರವು ಸರ್ಕಾರದ ಜತೆಗೆ ಸಮಾಜದ ಪ್ರಗತಿಗೆ ಕೈ ಜೋಡಿಸಬೇಕು ತಮ್ಮ ಸಿಎಸ್ಆರ್ ಅನುದಾನವನ್ನು ಶಿಕ್ಷಣ ಮತ್ತು ಆರೋಗ್ಯಕ್ಕೆ ಬಳಕೆಯಾಗುವಂತಾಗಬೇಕು ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು.

ತಾಲೂಕಿನ ನರಸಾಪುರ ಕೈಗಾರಿಕಾ ಪ್ರದೇಶದ ಮಹೇಂದ್ರ ಏರೋಸ್ಪೇಸ್ ಕಂಪನಿಯಲ್ಲಿ ಸೋಮವಾರ ತರಬೇತಿ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣ ವ್ಯವಸ್ಥೆಯ ಸುಧಾರಣೆಗೆ ಸರ್ಕಾರೇತರ ಸಂಸ್ಥೆಗಳು ಸಹ ಕೈ ಜೋಡಿಸಬೇಕು ತಮ್ಮ ಸಿಎಸ್‍ಆರ್ ಅನುದಾನವನ್ನು ಶಿಕ್ಷಣದ ಕೌಶಲ್ಯಾಭಿವೃದ್ಧಿಗೆ ಬಳಕೆ ಮಾಡಬೇಕಿದೆ ಸಾಮಾಜಿಕ ಹೊಣೆಗಾರಿಕೆಗೆ ಬಳಕೆ ಮಾಡಬೇಕೆಂದು ಸರಕಾರವು ನಿರ್ದೇಶಿಸಲಾಗಿದೆ. ಅದರಡಿ ಈಗಾಗಲೇ ಸಾಕಷ್ಟು ಅನುದಾನ ಬಳಕೆಯಾಗುತ್ತಿದೆ. ಮತ್ತಷ್ಟು ಸಂಸ್ಥೆಗಳು ಸರ್ಕಾರಿ ಶಾಲೆಗಳ ಸುಧಾರಣೆಗೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ಕೋಲಾರ ಜಿಲ್ಲೆಯಲ್ಲಿ ಹೆಚ್ಚಾಗಿ ಕೈಗಾರಿಕಾ ಪ್ರದೇಶಗಳನ್ನು ಗುರುತಿಸಲಾಗುತ್ತಿದೆ ಈ ಭಾಗದಲ್ಲಿಯೂ ಸಹ ಕೈಗಾರಿಕಾ ಅಭಿವೃದ್ಧಿಗೆ ಪ್ರೋತ್ಸಾಹ ನೀಡಲಿದ್ದೇವೆ ಇಲ್ಲಿನ ಕಂಪನಿಗಳು ಸ್ಥಳೀಯರಿಗೆ ಹೆಚ್ಚಿನ ಉದ್ಯೋಗ ಅವಕಾಶಗಳು ನೀಡಬೇಕು ಕಂಪನಿಯು ಉದ್ಯೋಗಿಗಳನ್ನು ನೇಮಿಸಿಕೊಳ್ಳುವಾಗ ಸ್ಥಳೀಯರಿಗೆ ಆದ್ಯತೆಯ ಮಾನದಂಡ ಅನುಸರಿಸಬೇಕು ನಿಮಗೆ ಅಗತ್ಯವಿರುವ ತಂತ್ರಜ್ಞರನ್ನು ಬೇಕಾದರೆ ಹೊರಗಿನಿಂದ ಕರೆತನ್ನಿ. ಉಳಿದ ಉದ್ಯೋಗಳಿಗೆ ಸ್ಥಳೀಯರನ್ನೇ ಆಯ್ಕೆ ಮಾಡಿಕೊಳ್ಳಿ ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್, ಮಹೇಂದ್ರ ಏರೋಸ್ಪೇಸ್ ಮುಂಬೈ ವಿಭಾಗೀಯ ಮುಖ್ಯಸ್ಥ ವಿಜಯನಾಯರ್, ಸಿಒಒ ಕಾರ್ತಿಕ್ ಕೃಷ್ಣಮೂರ್ತಿ, ಕೇಂದ್ರದ ಮುಖ್ಯಸ್ಥ ನರೇಂದ್ರ ಶ್ಯಾನಬೋಗ್, ಕಂಪನಿಯ ಹೆಚ್.ಆರ್ ನಾಗರಾಜ್,ಶ್ರೀರಾಮ್, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಚಂಜಿಮಲೆ ರಮೇಶ್, ನರಸಾಪುರ ಸೊಸೈಟಿ ಅಧ್ಯಕ್ಷ ಖಾಜಿಕಲ್ಲಹಳ್ಳಿ ಮುನಿರಾಜು, ಮುಖಂಡರಾದ ಬೆಳ್ಳೂರು ಅಶ್ವಥ್, ಮೈಲಾಂಡಹಳ್ಳಿ ಮುರಳಿ, ಜನಪನಹಳ್ಳಿ ನವೀನ್ ಕುಮಾರ್ ಮುಂತಾದವರು ಇದ್ದರು.

Ramesh Babu

Journalist

Recent Posts

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

9 hours ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

20 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

21 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

22 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

23 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

1 day ago