ಕೋಲಾರ: ರಾಜ್ಯ ಸರ್ಕಾರವು ಕೈಗಾರಿಕಾ ಕ್ಷೇತ್ರದ ಬೆಳವಣಿಗೆಗೆ ಮತ್ತು ಪ್ರಗತಿಗೆ ಅಗತ್ಯವಾದ ಎಲ್ಲಾ ಸಹಕಾರ ಮತ್ತು ನೆರವನ್ನು ನೀಡಲಿದ್ದು ಕಾರ್ಪೋರೇಟ್ ಸಂಸ್ಥೆಗಳು ಮತ್ತು ಉದ್ಯಮ ಕ್ಷೇತ್ರವು ಸರ್ಕಾರದ ಜತೆಗೆ ಸಮಾಜದ ಪ್ರಗತಿಗೆ ಕೈ ಜೋಡಿಸಬೇಕು ತಮ್ಮ ಸಿಎಸ್ಆರ್ ಅನುದಾನವನ್ನು ಶಿಕ್ಷಣ ಮತ್ತು ಆರೋಗ್ಯಕ್ಕೆ ಬಳಕೆಯಾಗುವಂತಾಗಬೇಕು ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು.
ತಾಲೂಕಿನ ನರಸಾಪುರ ಕೈಗಾರಿಕಾ ಪ್ರದೇಶದ ಮಹೇಂದ್ರ ಏರೋಸ್ಪೇಸ್ ಕಂಪನಿಯಲ್ಲಿ ಸೋಮವಾರ ತರಬೇತಿ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣ ವ್ಯವಸ್ಥೆಯ ಸುಧಾರಣೆಗೆ ಸರ್ಕಾರೇತರ ಸಂಸ್ಥೆಗಳು ಸಹ ಕೈ ಜೋಡಿಸಬೇಕು ತಮ್ಮ ಸಿಎಸ್ಆರ್ ಅನುದಾನವನ್ನು ಶಿಕ್ಷಣದ ಕೌಶಲ್ಯಾಭಿವೃದ್ಧಿಗೆ ಬಳಕೆ ಮಾಡಬೇಕಿದೆ ಸಾಮಾಜಿಕ ಹೊಣೆಗಾರಿಕೆಗೆ ಬಳಕೆ ಮಾಡಬೇಕೆಂದು ಸರಕಾರವು ನಿರ್ದೇಶಿಸಲಾಗಿದೆ. ಅದರಡಿ ಈಗಾಗಲೇ ಸಾಕಷ್ಟು ಅನುದಾನ ಬಳಕೆಯಾಗುತ್ತಿದೆ. ಮತ್ತಷ್ಟು ಸಂಸ್ಥೆಗಳು ಸರ್ಕಾರಿ ಶಾಲೆಗಳ ಸುಧಾರಣೆಗೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.
ಕೋಲಾರ ಜಿಲ್ಲೆಯಲ್ಲಿ ಹೆಚ್ಚಾಗಿ ಕೈಗಾರಿಕಾ ಪ್ರದೇಶಗಳನ್ನು ಗುರುತಿಸಲಾಗುತ್ತಿದೆ ಈ ಭಾಗದಲ್ಲಿಯೂ ಸಹ ಕೈಗಾರಿಕಾ ಅಭಿವೃದ್ಧಿಗೆ ಪ್ರೋತ್ಸಾಹ ನೀಡಲಿದ್ದೇವೆ ಇಲ್ಲಿನ ಕಂಪನಿಗಳು ಸ್ಥಳೀಯರಿಗೆ ಹೆಚ್ಚಿನ ಉದ್ಯೋಗ ಅವಕಾಶಗಳು ನೀಡಬೇಕು ಕಂಪನಿಯು ಉದ್ಯೋಗಿಗಳನ್ನು ನೇಮಿಸಿಕೊಳ್ಳುವಾಗ ಸ್ಥಳೀಯರಿಗೆ ಆದ್ಯತೆಯ ಮಾನದಂಡ ಅನುಸರಿಸಬೇಕು ನಿಮಗೆ ಅಗತ್ಯವಿರುವ ತಂತ್ರಜ್ಞರನ್ನು ಬೇಕಾದರೆ ಹೊರಗಿನಿಂದ ಕರೆತನ್ನಿ. ಉಳಿದ ಉದ್ಯೋಗಳಿಗೆ ಸ್ಥಳೀಯರನ್ನೇ ಆಯ್ಕೆ ಮಾಡಿಕೊಳ್ಳಿ ಎಂದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್, ಮಹೇಂದ್ರ ಏರೋಸ್ಪೇಸ್ ಮುಂಬೈ ವಿಭಾಗೀಯ ಮುಖ್ಯಸ್ಥ ವಿಜಯನಾಯರ್, ಸಿಒಒ ಕಾರ್ತಿಕ್ ಕೃಷ್ಣಮೂರ್ತಿ, ಕೇಂದ್ರದ ಮುಖ್ಯಸ್ಥ ನರೇಂದ್ರ ಶ್ಯಾನಬೋಗ್, ಕಂಪನಿಯ ಹೆಚ್.ಆರ್ ನಾಗರಾಜ್,ಶ್ರೀರಾಮ್, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಚಂಜಿಮಲೆ ರಮೇಶ್, ನರಸಾಪುರ ಸೊಸೈಟಿ ಅಧ್ಯಕ್ಷ ಖಾಜಿಕಲ್ಲಹಳ್ಳಿ ಮುನಿರಾಜು, ಮುಖಂಡರಾದ ಬೆಳ್ಳೂರು ಅಶ್ವಥ್, ಮೈಲಾಂಡಹಳ್ಳಿ ಮುರಳಿ, ಜನಪನಹಳ್ಳಿ ನವೀನ್ ಕುಮಾರ್ ಮುಂತಾದವರು ಇದ್ದರು.
ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ…
ಸ್ಪರ್ಶ್ ಆಸ್ಪತ್ರೆ, ಹೆಣ್ಣೂರು ತನ್ನ ಕಾರ್ಯಾಚರಣೆಯ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಆಸ್ಪತ್ರೆಯ ಮೊದಲ ವರ್ಷದ ಕ್ಲಿನಿಕಲ್ ಅಂಕಿಅಂಶಗಳು ಉತ್ತರ…
ನವದೆಹಲಿ: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಮತ್ತೆ ಏರಿಕೆಯಾಗಿದ್ದು, ವಾಹನ ಸವಾರರಿಗೆ ಮತ್ತೊಂದು ಹೊರೆ ಬಿದ್ದಿದೆ. ಕೇಂದ್ರ ಸರ್ಕಾರ…
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು ಚಿಕ್ಕಬಳ್ಳಾಪುರದ ನಂದಿಬೆಟ್ಟ ರಸ್ತೆಯ ಖಾಸಗಿ ಹೋಟೆಲ್ನಲ್ಲಿ ಆಯೋಜಿಸಿದ್ದ "ಕಾಂಗ್ರೆಸ್ ನಡೆ-ಮತ ರಕ್ಷಣೆಯ ಕಡೆ" ಜಾಗೃತ…
ದೊಡ್ಡಬಳ್ಳಾಪುರ: ನಗರದ ದೇವರಾಜನಗರ ನಿವಾಸಿಗಳಾದ ಭರತ್ ಅವರ 1 ವರ್ಷ 4 ತಿಂಗಳ ಮಗ ಪೋಷಕ್ ಆರೋಗ್ಯದ ವ್ಯತ್ಯಯದಿಂದ ವಿಧಿವಶರಾದ…
ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿಯು ಶಿಕ್ಷಣಕ್ಕೆ ಪೂರಕವಾಗಿದೆ. ಇದನ್ನು ಸರ್ಕಾರ ಅರ್ಥ ಮಾಡಿಕೊಳ್ಳಬೇಕು ಎಂದು ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್ನ…